AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ರೈತನ ಹೆಸರಲ್ಲಿ ಸಾಲಮನ್ನಾ! ಬ್ಯಾಂಕ್ ಅಧಿಕಾರಿಯಿಂದ ಹಣ ದುರುಪಯೋಗ?

ಮೈಸೂರು: ಮೃತ ರೈತನ ಹೆಸರಿನಲ್ಲಿ 2 ಬಾರಿ ಬೆಳೆ ಸಾಲ ಮತ್ತು 2 ಬಾರಿ ಸಾಲಮನ್ನಾ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೆಚ್.ಡಿ.ಕೋಟೆ ತಾಲೂಕಿನ ಅಂತರಸಂತೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿರುದ್ಧ ಬ್ಯಾಂಕ್‌ನ ಹಣ ದುರುಪಯೋಗಪಡಿಸಿಕೊಂಡ ಆರೋಪ ಕೇಳಿ ಬಂದಿದೆ. ಕಾರ್ಯನಿರ್ವಹಣಾಧಿಕಾರಿ ಸಿದ್ದೇಗೌಡ ವಿರುದ್ಧ ಈ ಆರೋಪ ಕೇಳಿ ಬಂದಿದ್ದು, ಮೃತ ರೈತನ ಹೆಸರಿನಲ್ಲಿ ವಂಚನೆ ಮಾಡಿದ್ದಾನೆ. 2017-18ರ ಆಡಿಟ್ ರಿಪೋರ್ಟ್‌ನಲ್ಲಿ ಅವ್ಯವಹಾರ ಬೆಳಕಿಗೆ ಬಂದಿದೆ. ಸಂಘದ ಕೆಲ ನಿರ್ದೇಶಕರು ಮತ್ತು ಸ್ಥಳೀಯರಿಂದ ಸಿದ್ದೇಗೌಡನ […]

ಮೃತ ರೈತನ ಹೆಸರಲ್ಲಿ ಸಾಲಮನ್ನಾ! ಬ್ಯಾಂಕ್ ಅಧಿಕಾರಿಯಿಂದ ಹಣ ದುರುಪಯೋಗ?
ಸಾಧು ಶ್ರೀನಾಥ್​
|

Updated on:Jan 31, 2020 | 11:06 AM

Share

ಮೈಸೂರು: ಮೃತ ರೈತನ ಹೆಸರಿನಲ್ಲಿ 2 ಬಾರಿ ಬೆಳೆ ಸಾಲ ಮತ್ತು 2 ಬಾರಿ ಸಾಲಮನ್ನಾ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೆಚ್.ಡಿ.ಕೋಟೆ ತಾಲೂಕಿನ ಅಂತರಸಂತೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿರುದ್ಧ ಬ್ಯಾಂಕ್‌ನ ಹಣ ದುರುಪಯೋಗಪಡಿಸಿಕೊಂಡ ಆರೋಪ ಕೇಳಿ ಬಂದಿದೆ.

ಕಾರ್ಯನಿರ್ವಹಣಾಧಿಕಾರಿ ಸಿದ್ದೇಗೌಡ ವಿರುದ್ಧ ಈ ಆರೋಪ ಕೇಳಿ ಬಂದಿದ್ದು, ಮೃತ ರೈತನ ಹೆಸರಿನಲ್ಲಿ ವಂಚನೆ ಮಾಡಿದ್ದಾನೆ. 2017-18ರ ಆಡಿಟ್ ರಿಪೋರ್ಟ್‌ನಲ್ಲಿ ಅವ್ಯವಹಾರ ಬೆಳಕಿಗೆ ಬಂದಿದೆ. ಸಂಘದ ಕೆಲ ನಿರ್ದೇಶಕರು ಮತ್ತು ಸ್ಥಳೀಯರಿಂದ ಸಿದ್ದೇಗೌಡನ ಅವ್ಯವಹಾರದ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಲಾಗಿದೆ.

ಬ್ಯಾಂಕ್‌ನಿಂದ ರೈತರಿಗೆ 3 ಲಕ್ಷದವರೆಗೆ ಬಡ್ಡಿರಹಿತ ಬೆಳೆ ಸಾಲ, 1,258 ರೈತರಿಗೆ ಹಣ ನೀಡಿರುವುದಾಗಿ ಉಲ್ಲೇಖ ಮಾಡಲಾಗಿತ್ತು. 130 ರೈತರಿಗೆ 2 ಬಾರಿ ಸಾಲ ನೀಡಿದ್ದಾರೆ ಎಂಬ ಆರೋಪ ಮತ್ತು ಮೃತ ರೈತನ ಹೆಸರಿನಲ್ಲೂ ಸಾಲ‌ ಮಂಜೂರು ಮಾಡಿರುವ ಆರೋಪ ಸಿದ್ದೇಗೌಡನ ಮೇಲಿದೆ. ದೊಡ್ಡೇಗೌಡ ಬಿನ್ ಸಿದ್ದೇಗೌಡ ಹೆಸರಿನಲ್ಲಿ ದಾಖಲೆ ಸೃಷ್ಟಿ ಮಾಡಲಾಗಿದೆ.

ದೊಡ್ಡೇಗೌಡ 2017ರ ಫೆಬ್ರವರಿಯಲ್ಲಿ ಮೃತಪಟ್ಟಿದ್ದಾರೆ. ದೊಡ್ಡೇಗೌಡನಿಗೆ 2017ರ ಜೂನ್‌ನಲ್ಲಿ ಸಾಲ ಮಂಜೂರು ಮಾಡಿ ಬಳಿಕ 2018ರ ಮೇ ತಿಂಗಳಿನಲ್ಲಿ ದೊಡ್ಡೇಗೌಡನ ಸಾಲಮನ್ನಾ ಮಾಡಲಾಗಿದೆ. ಸ್ಥಳೀಯ ವ್ಯಕ್ತಿ ತೇಜಸ್ವಿ ವಿ.ಹೆಚ್ ಗೌಡ ದಾಖಲೆಗಳ ಸಮೇತ ಸಿದ್ದೇಗೌಡನ ವಿರುದ್ಧ ದೂರು ದಾಖಲು ಮಾಡಿದ್ದಾರೆ. ದೂರು ಆಧರಿಸಿ ತನಿಖೆ ನಡೆಸಿ ವರದಿ ನೀಡುವಂತೆ ಅಪೆಕ್ಸ್ ಬ್ಯಾಂಕ್,‌ ನಬಾರ್ಡ್‌ನಿಂದ ಡಿಸಿಸಿ ಬ್ಯಾಂಕ್‌ಗೆ ಸೂಚನೆ ನೀಡಲಾಗಿದೆ.

Published On - 10:21 am, Fri, 31 January 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ