ಲಾಕ್‌ಡೌನ್‌ನಲ್ಲೂ ದೇವರಿಗೆ ಮೋಸ ಮಾಡಿದ ಭಕ್ತರು, ಎಲ್ಲಿ?

ಮೈಸೂರು: ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ಹುಂಡಿ ಎಣಿಕೆಯಲ್ಲಿ ನಿಷೇಧಿತ ನೋಟುಗಳು ಪತ್ತೆಯಾಗಿವೆ! ಪ್ರತಿವರ್ಷದಂತೆ ಈ ವರ್ಷವೂ ಮೈಸೂರು ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರ ದೇಗುಲದ ಹುಂಡಿಯಲ್ಲಿನ ಹಣ ಹೊರ ತೆಗೆಯಲಾಗಿದ್ದು, ಹುಂಡಿಯಲ್ಲಿರುವ ಹಣದಲ್ಲಿ ನಿಷೇಧಿತ 500, 1000 ರೂಪಾಯಿ ನೋಟುಗಳು ಪತ್ತೆಯಾಗಿವೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ದೇವಸ್ಥಾನಕ್ಕೆ ಭಕ್ತರಿಂದ ಕಾಣಿಕೆ ರೂಪದಲ್ಲಿ ಬಂದಿರುವ ಹಣ ತೀರ ಕಡಿಮೆಯಾಗಿದೆ. ಇದೇ ಜನವರಿಯಲ್ಲಿ 1,10,82,900 ರೂಪಾಯಿ ಹಣ ಸಂಗ್ರಹವಾಗಿತ್ತು. ಆದರೆ ಈ ಬಾರಿ […]

ಲಾಕ್‌ಡೌನ್‌ನಲ್ಲೂ ದೇವರಿಗೆ ಮೋಸ ಮಾಡಿದ ಭಕ್ತರು, ಎಲ್ಲಿ?
ಸಾಧು ಶ್ರೀನಾಥ್​

Updated on: Aug 31, 2020 | 12:13 PM

ಮೈಸೂರು: ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ಹುಂಡಿ ಎಣಿಕೆಯಲ್ಲಿ ನಿಷೇಧಿತ ನೋಟುಗಳು ಪತ್ತೆಯಾಗಿವೆ!

ಪ್ರತಿವರ್ಷದಂತೆ ಈ ವರ್ಷವೂ ಮೈಸೂರು ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರ ದೇಗುಲದ ಹುಂಡಿಯಲ್ಲಿನ ಹಣ ಹೊರ ತೆಗೆಯಲಾಗಿದ್ದು, ಹುಂಡಿಯಲ್ಲಿರುವ ಹಣದಲ್ಲಿ ನಿಷೇಧಿತ 500, 1000 ರೂಪಾಯಿ ನೋಟುಗಳು ಪತ್ತೆಯಾಗಿವೆ.

ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ದೇವಸ್ಥಾನಕ್ಕೆ ಭಕ್ತರಿಂದ ಕಾಣಿಕೆ ರೂಪದಲ್ಲಿ ಬಂದಿರುವ ಹಣ ತೀರ ಕಡಿಮೆಯಾಗಿದೆ. ಇದೇ ಜನವರಿಯಲ್ಲಿ 1,10,82,900 ರೂಪಾಯಿ ಹಣ ಸಂಗ್ರಹವಾಗಿತ್ತು. ಆದರೆ ಈ ಬಾರಿ 69,24,900 ರೂಪಾಯಿ ಹಣ ಸಂಗ್ರಹವಾಗಿದೆ. ಜೊತೆಗೆ ಅಚ್ಚರಿಯೆಂಬಂತೆ ಲಾಕ್‌ಡೌನ್ ನಡುವೆಯೂ ಹುಂಡಿಗೆ 7 ವಿದೇಶಿ ಕರೆನ್ಸಿ ಕಾಣಿಕೆ ರೂಪದಲ್ಲಿ ಬಂದಿವೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us