AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿಯಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಬಾಪೂಜಿ ಸೇವಾ ಕೇಂದ್ರ: ಕಚೇರಿಗಳಿಗೆ ಅಲೆದಲೆದು ಸಾರ್ವಜನಿಕರು ಹೈರಾಣ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ 100 ಸೇವೆಗಳನ್ನ ಒದಗಿಸೋ ಕೇಂದ್ರಕ್ಕೆ ರಾಜ್ಯದಲ್ಲೇ ಮೊದಲ ಬಾರಿಗೆ ಚಾಲನೆ ನೀಡಲಾಗಿತ್ತು.

ಹಾವೇರಿಯಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಬಾಪೂಜಿ ಸೇವಾ ಕೇಂದ್ರ: ಕಚೇರಿಗಳಿಗೆ ಅಲೆದಲೆದು ಸಾರ್ವಜನಿಕರು ಹೈರಾಣ
ಗ್ರಾಮ ಪಂಚಾಯಿತಿ
ಪೃಥ್ವಿಶಂಕರ
|

Updated on: Mar 06, 2021 | 8:19 AM

Share

ಹಾವೇರಿ: ಗ್ರಾಮ ಪಂಚಾಯ್ತಿಯಲ್ಲಿದ್ದ ಆ ಕೇಂದ್ರದಿಂದ ಜನರ ಅಲೆದಾಟಕ್ಕೆ ಬ್ರೇಕ್ ಬಿದ್ದಿತ್ತು. ರೈತರಿಗಂತೂ ಅದ್ರಿಂದ ಸಾಕಷ್ಟು ಅನುಕೂಲ ಆಗ್ತಿತ್ತು. ಒಂದೇ ಸೂರಿನಡಿ ನೂರು ಸೇವೆಗಳನ್ನ ಒದಗಿಸ್ತಿದ್ದ ಕೇಂದ್ರಕ್ಕೆ ಈಗ ಗರ ಬಡಿದಿದೆ. ನೂರು ಸೇವೆ ಸಿಗಬೇಕಿದ್ದ ಕಡೆ ಈಗ ಬೆರಳೆಣಿಕೆಯಷ್ಟು ಸೇವೆಗಳು ಕೂಡ ಸರಿಯಾಗಿ ಸಿಗ್ತಿಲ್ಲ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ 100 ಸೇವೆಗಳನ್ನ ಒದಗಿಸೋ ಕೇಂದ್ರಕ್ಕೆ ರಾಜ್ಯದಲ್ಲೇ ಮೊದಲ ಬಾರಿಗೆ ಚಾಲನೆ ನೀಡಲಾಗಿತ್ತು. 2016ರಲ್ಲಿ ಈ ಬಾಪೂಜಿ ಸೇವಾ ಕೇಂದ್ರಕ್ಕೆ ಚಾಲನೆ ನೀಡಲಾಗಿತ್ತು. ರೈತರಿಗೆ ಬೇಕಾದ ಪಹಣಿ, ಜಾತಿ, ಆದಾಯ ಪ್ರಮಾಣ ಪತ್ರ, ವಿದ್ಯುತ್ ಬಿಲ್, ಟೆಲಿಫೋನ್ ಬಿಲ್, ಬಸ್, ಟ್ರೈನ್ ಬುಕ್ಕಿಂಗ್ ಹೀಗೆ ನೂರು ಸೇವೆಗಳು ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಒದಗಿಸೋದು ಉದ್ದೇಶವಾಗಿತ್ತು.

ಅದ್ರಂತೆ ನಾಡಕಚೇರಿ, ತಾಲೂಕು ಕಚೇರಿ, ಜಿಲ್ಲಾಡಳಿತ ಕಚೇರಿ, ಅಲ್ಲಿ ಇಲ್ಲಿ ಅಂತಾ ಜನ ಅಲೆದಾಡೋದಕ್ಕೆ ಬಾಪೂಜಿ ಸೇವಾ ಕೇಂದ್ರ ಬ್ರೇಕ್ ಹಾಕಿತ್ತು. ಜನ ತಮಗೆ ಬೇಕಾದ ದಾಖಲೆಗಳನ್ನು ಬಾಪೂಜಿ ಸೇವಾ ಕೇಂದ್ರದಲ್ಲಿ ಪಡೆದುಕೊಳ್ಳುತ್ತಿದ್ರು. ಆದ್ರೆ ಜನರ ಅನುಕೂಲಕ್ಕೆ ಆರಂಭವಾಗಿದ್ದ ಈ ಕೇಂದ್ರಕ್ಕೆ ಈಗ ಗರ ಬಡಿದಿದೆ. ಬಾಪೂಜಿ ಸೇವಾ ಕೇಂದ್ರದಲ್ಲಿ ನೂರು ಸೇವೆಗಳು ಇರ್ಲಿ 10 ಸೇವೆಗಳು ಕೂಡ ಸಿಗ್ತಿಲ್ವಂತೆ.

ಬಾಪೂಜಿ ಸೇವಾ ಕೇಂದ್ರ ಆರಂಭವಾದ್ಮೇಲೆ ಜನರು, ರೈತರು ಅಲೆದಾಡೋದಕ್ಕೆ ಬ್ರೇಕ್ ಬಿದ್ದಿತ್ತು. ಆದ್ರೆ ಈಗ ಯಾವುದೇ ದಾಖಲೆ ಪಡೆದುಕೊಳ್ಳಬೇಕು ಅಂದ್ರೂ ಜನ ಮತ್ತೆ ಅಲೆದಾಡಬೇಕಾಗಿ ಬಂದಿದೆ. ಒಂದ್ಕಡೆ ಸರ್ವರ್ಗಳ ಸಮಸ್ಯೆ, ಮತ್ತೊಂದೆಡೆ ಸಿಬ್ಬಂದಿ ಕೊರತೆಯಿಂದ ಬಾಪೂಜಿ ಸೇವಾ ಕೇಂದ್ರ ಇದ್ದೂ ಇಲ್ಲದಂತಾಗಿದೆ. ಹೆಸರಿಗೆ ಮಾತ್ರ ಸಣ್ಣದೊಂದು ಬಾಪೂಜಿ ಸೇವಾ ಕೇಂದ್ರ ಅನ್ನೋ ಬೋರ್ಡ್ ಬಿಟ್ರೆ ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಹಾಕಿದ್ದ ನೂರು ಸೇವೆಗಳ ಬೋರ್ಡ್ ಕೂಡ ತೆಗೆದು ಹಾಕಲಾಗಿದೆ. ಬೀಜ, ಗೊಬ್ಬರ ವಿತರಿಸೋ ಸಮಯದಲ್ಲಿ ಈ ಕೇಂದ್ರ ರೈತರಿಗೆ ಸಾಕಷ್ಟು ಅನುಕೂಲವಾಗಿತ್ತು. ಆದ್ರೆ ಈಗ ಯಾವುದೇ ಸೌಲಭ್ಯ ಸಿಗದೆ ಇರೋದು ಜನರಲ್ಲಿ ನಿರಾಸೆ ಮೂಡಿಸಿದೆ.

ಒಟ್ನಲ್ಲಿ ಗ್ರಾಮೀಣ ಪ್ರದೇಶದ ಜನರ ಅಲೆದಾಟಕ್ಕೆ ಬ್ರೇಕ್ ಹಾಕಿ ಒಂದೇ ಸೂರಿನಡಿ ನೂರು ಸೇವೆ ಒದಗಿಸಲು ಆರಂಭವಾಗಿದ್ದ ಬಾಪೂಜಿ ಸೇವಾ ಕೇಂದ್ರ ಇದ್ದೂ ಇಲ್ಲದಂತಾಗಿರೋದು ಜನರಲ್ಲಿ ಬೇಸರ ಮೂಡಿಸಿದೆ. ವಿಶೇಷವಾಗಿ ರೈತರು ಹಾಗೂ ವಿದ್ಯಾರ್ಥಿಗಳಿಗೆ ಇದರಿಂದ ಸಾಕಷ್ಟು ತೊಂದರೆ ಎದುರಾಗಿದೆ. ಸಂಬಂಧಪಟ್ಟವರು ಈಗಲಾದ್ರೂ ಈ ಕಡೆ ಗಮನಹರಿಸಿ ಜನರ ಸಮಸ್ಯೆ ಬಗೆಹರಿಸಬೇಕಿದೆ.

ಇದನ್ನೂ ಓದಿ: ದೇಶಕ್ಕೇ ಮಾದರಿಯಾದ ಅಂಚಟಗೇರಿ ಗ್ರಾಮ ಪಂಚಾಯಿತಿ; ಕಳೆದ ವರ್ಷ ಪ್ರಶಸ್ತಿಯೂ ಬಂದಿದೆ..

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ