AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿಯಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಬಾಪೂಜಿ ಸೇವಾ ಕೇಂದ್ರ: ಕಚೇರಿಗಳಿಗೆ ಅಲೆದಲೆದು ಸಾರ್ವಜನಿಕರು ಹೈರಾಣ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ 100 ಸೇವೆಗಳನ್ನ ಒದಗಿಸೋ ಕೇಂದ್ರಕ್ಕೆ ರಾಜ್ಯದಲ್ಲೇ ಮೊದಲ ಬಾರಿಗೆ ಚಾಲನೆ ನೀಡಲಾಗಿತ್ತು.

ಹಾವೇರಿಯಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಬಾಪೂಜಿ ಸೇವಾ ಕೇಂದ್ರ: ಕಚೇರಿಗಳಿಗೆ ಅಲೆದಲೆದು ಸಾರ್ವಜನಿಕರು ಹೈರಾಣ
ಗ್ರಾಮ ಪಂಚಾಯಿತಿ
ಪೃಥ್ವಿಶಂಕರ
|

Updated on: Mar 06, 2021 | 8:19 AM

Share

ಹಾವೇರಿ: ಗ್ರಾಮ ಪಂಚಾಯ್ತಿಯಲ್ಲಿದ್ದ ಆ ಕೇಂದ್ರದಿಂದ ಜನರ ಅಲೆದಾಟಕ್ಕೆ ಬ್ರೇಕ್ ಬಿದ್ದಿತ್ತು. ರೈತರಿಗಂತೂ ಅದ್ರಿಂದ ಸಾಕಷ್ಟು ಅನುಕೂಲ ಆಗ್ತಿತ್ತು. ಒಂದೇ ಸೂರಿನಡಿ ನೂರು ಸೇವೆಗಳನ್ನ ಒದಗಿಸ್ತಿದ್ದ ಕೇಂದ್ರಕ್ಕೆ ಈಗ ಗರ ಬಡಿದಿದೆ. ನೂರು ಸೇವೆ ಸಿಗಬೇಕಿದ್ದ ಕಡೆ ಈಗ ಬೆರಳೆಣಿಕೆಯಷ್ಟು ಸೇವೆಗಳು ಕೂಡ ಸರಿಯಾಗಿ ಸಿಗ್ತಿಲ್ಲ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ 100 ಸೇವೆಗಳನ್ನ ಒದಗಿಸೋ ಕೇಂದ್ರಕ್ಕೆ ರಾಜ್ಯದಲ್ಲೇ ಮೊದಲ ಬಾರಿಗೆ ಚಾಲನೆ ನೀಡಲಾಗಿತ್ತು. 2016ರಲ್ಲಿ ಈ ಬಾಪೂಜಿ ಸೇವಾ ಕೇಂದ್ರಕ್ಕೆ ಚಾಲನೆ ನೀಡಲಾಗಿತ್ತು. ರೈತರಿಗೆ ಬೇಕಾದ ಪಹಣಿ, ಜಾತಿ, ಆದಾಯ ಪ್ರಮಾಣ ಪತ್ರ, ವಿದ್ಯುತ್ ಬಿಲ್, ಟೆಲಿಫೋನ್ ಬಿಲ್, ಬಸ್, ಟ್ರೈನ್ ಬುಕ್ಕಿಂಗ್ ಹೀಗೆ ನೂರು ಸೇವೆಗಳು ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಒದಗಿಸೋದು ಉದ್ದೇಶವಾಗಿತ್ತು.

ಅದ್ರಂತೆ ನಾಡಕಚೇರಿ, ತಾಲೂಕು ಕಚೇರಿ, ಜಿಲ್ಲಾಡಳಿತ ಕಚೇರಿ, ಅಲ್ಲಿ ಇಲ್ಲಿ ಅಂತಾ ಜನ ಅಲೆದಾಡೋದಕ್ಕೆ ಬಾಪೂಜಿ ಸೇವಾ ಕೇಂದ್ರ ಬ್ರೇಕ್ ಹಾಕಿತ್ತು. ಜನ ತಮಗೆ ಬೇಕಾದ ದಾಖಲೆಗಳನ್ನು ಬಾಪೂಜಿ ಸೇವಾ ಕೇಂದ್ರದಲ್ಲಿ ಪಡೆದುಕೊಳ್ಳುತ್ತಿದ್ರು. ಆದ್ರೆ ಜನರ ಅನುಕೂಲಕ್ಕೆ ಆರಂಭವಾಗಿದ್ದ ಈ ಕೇಂದ್ರಕ್ಕೆ ಈಗ ಗರ ಬಡಿದಿದೆ. ಬಾಪೂಜಿ ಸೇವಾ ಕೇಂದ್ರದಲ್ಲಿ ನೂರು ಸೇವೆಗಳು ಇರ್ಲಿ 10 ಸೇವೆಗಳು ಕೂಡ ಸಿಗ್ತಿಲ್ವಂತೆ.

ಬಾಪೂಜಿ ಸೇವಾ ಕೇಂದ್ರ ಆರಂಭವಾದ್ಮೇಲೆ ಜನರು, ರೈತರು ಅಲೆದಾಡೋದಕ್ಕೆ ಬ್ರೇಕ್ ಬಿದ್ದಿತ್ತು. ಆದ್ರೆ ಈಗ ಯಾವುದೇ ದಾಖಲೆ ಪಡೆದುಕೊಳ್ಳಬೇಕು ಅಂದ್ರೂ ಜನ ಮತ್ತೆ ಅಲೆದಾಡಬೇಕಾಗಿ ಬಂದಿದೆ. ಒಂದ್ಕಡೆ ಸರ್ವರ್ಗಳ ಸಮಸ್ಯೆ, ಮತ್ತೊಂದೆಡೆ ಸಿಬ್ಬಂದಿ ಕೊರತೆಯಿಂದ ಬಾಪೂಜಿ ಸೇವಾ ಕೇಂದ್ರ ಇದ್ದೂ ಇಲ್ಲದಂತಾಗಿದೆ. ಹೆಸರಿಗೆ ಮಾತ್ರ ಸಣ್ಣದೊಂದು ಬಾಪೂಜಿ ಸೇವಾ ಕೇಂದ್ರ ಅನ್ನೋ ಬೋರ್ಡ್ ಬಿಟ್ರೆ ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಹಾಕಿದ್ದ ನೂರು ಸೇವೆಗಳ ಬೋರ್ಡ್ ಕೂಡ ತೆಗೆದು ಹಾಕಲಾಗಿದೆ. ಬೀಜ, ಗೊಬ್ಬರ ವಿತರಿಸೋ ಸಮಯದಲ್ಲಿ ಈ ಕೇಂದ್ರ ರೈತರಿಗೆ ಸಾಕಷ್ಟು ಅನುಕೂಲವಾಗಿತ್ತು. ಆದ್ರೆ ಈಗ ಯಾವುದೇ ಸೌಲಭ್ಯ ಸಿಗದೆ ಇರೋದು ಜನರಲ್ಲಿ ನಿರಾಸೆ ಮೂಡಿಸಿದೆ.

ಒಟ್ನಲ್ಲಿ ಗ್ರಾಮೀಣ ಪ್ರದೇಶದ ಜನರ ಅಲೆದಾಟಕ್ಕೆ ಬ್ರೇಕ್ ಹಾಕಿ ಒಂದೇ ಸೂರಿನಡಿ ನೂರು ಸೇವೆ ಒದಗಿಸಲು ಆರಂಭವಾಗಿದ್ದ ಬಾಪೂಜಿ ಸೇವಾ ಕೇಂದ್ರ ಇದ್ದೂ ಇಲ್ಲದಂತಾಗಿರೋದು ಜನರಲ್ಲಿ ಬೇಸರ ಮೂಡಿಸಿದೆ. ವಿಶೇಷವಾಗಿ ರೈತರು ಹಾಗೂ ವಿದ್ಯಾರ್ಥಿಗಳಿಗೆ ಇದರಿಂದ ಸಾಕಷ್ಟು ತೊಂದರೆ ಎದುರಾಗಿದೆ. ಸಂಬಂಧಪಟ್ಟವರು ಈಗಲಾದ್ರೂ ಈ ಕಡೆ ಗಮನಹರಿಸಿ ಜನರ ಸಮಸ್ಯೆ ಬಗೆಹರಿಸಬೇಕಿದೆ.

ಇದನ್ನೂ ಓದಿ: ದೇಶಕ್ಕೇ ಮಾದರಿಯಾದ ಅಂಚಟಗೇರಿ ಗ್ರಾಮ ಪಂಚಾಯಿತಿ; ಕಳೆದ ವರ್ಷ ಪ್ರಶಸ್ತಿಯೂ ಬಂದಿದೆ..

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ