AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾನಂಗಳದಲ್ಲಿ ಬಾನಾಡಿಗಳ ಕಲರವ, ಕಬಿನಿ ಜಲಾಶಯದಲ್ಲಿ ವಿದೇಶಿ ಪಕ್ಷಿಗಳ ಹಾರಾಟ

ಸಾಂಸ್ಕೃತಿಕ ನಗರಿ ಮೈಸೂರಿಗೆ ವಿದೇಶಿಗರು ಬರೋದು ಹೋಗೋದು ಕಾಮನ್‌. ಆದ್ರೆ ನವೆಂಬರ್ ಡಿಸೆಂಬರ್​ನಲ್ಲಿ ಬರುವ ಕೆಲ ವಿದೇಶಿ ಅತಿಥಿಗಳು ಬರೋಬ್ಬರಿ ಮೂರ್ನಾಲ್ಕು ತಿಂಗಳು ಇಲ್ಲೆ ಇದ್ದು ವಾಪಸ್‌ ಹೋಗ್ತಾರೆ. ಸಾವಿರಾರು ಸಂಖ್ಯೆಯಲ್ಲಿ ಬರೋ ಅತಿಥಿಗಳು ಇಲ್ಲಿಗೆ ಬಂದು ಎಂಜಾಯ್ ಮಾಡಿ ಹೋಗ್ತಾರೆ.

ಬಾನಂಗಳದಲ್ಲಿ ಬಾನಾಡಿಗಳ ಕಲರವ, ಕಬಿನಿ ಜಲಾಶಯದಲ್ಲಿ ವಿದೇಶಿ ಪಕ್ಷಿಗಳ ಹಾರಾಟ
ಮೈಸೂರಿನ ಕಬಿನಿ ಜಲಾಶಯದ ಹಿನ್ನೀರಿನಲ್ಲಿ ಬಾರ್ ಹೆಡ್ ಗೂಸ್ ಪಕ್ಷಿಗಳ ವಿಹಾರ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Dec 07, 2020 | 12:55 PM

Share

ಮೈಸೂರು: ಬಾನಂಗಳದಲ್ಲಿ ಚಿಲಿಪಿಲಿಗಳ ರಂಗೂಲಿ.. ತಮ್ಮದೇ ಲೋಕದಲ್ಲಿ ತೇಲಾಡೋ ಬಾನಾಡಿಗಳು.. ಒಮ್ಮೆ ದಡದಲ್ಲಿ, ಮತ್ತೊಮ್ಮೆ ನೀರಲ್ಲಿ, ಮಗದೊಮ್ಮೆ ಬಾನಲ್ಲಿ.. ಎಲ್ಲೆಲ್ಲೂ ಈ ಚಿಲಿಪಿಗಳದ್ದೇ ಆಟ.. ಪಕ್ಷಿಲೋಕದ್ದೇ ತುಂಟಾಟ.. ಆಕಾಶದಿಂದ ಒಮ್ಮೆ ಕಣ್ಣು ಹಾಯಿಸಿದ್ರೆ ಜಲಾಶಯದ ತುಂಬ ಕಾಣೋ ಪಕ್ಷಿಗಳ ಲೋಕ..

ಮೈಸೂರಿನ ಕಬಿನಿ ಜಲಾಶಯದ ಹಿನ್ನೀರಿನಲ್ಲೀಗ ಬಾನಾಡಿಗಳ ಕಲರವ ಜೋರಾಗಿದೆ. ಮೈಸೂರಿಗೆ ದೂರದ ಊರಿನಿಂದ ಬಂದಿರೋ ವಿದೇಶಿ ಪಕ್ಷಿಗಳು ತುಂಟಾಟ ಆಡ್ತಿವೆ. ವರ್ಷದ ಕೊನೆಯಲ್ಲಿ ಬರೋ ಈ ಬಾರ್‌ಹೆಡ್‌ ಗೊಸ್‌ ಪಕ್ಷಿಗಳು ಮೂರು ತಿಂಗಳ ಕಾಲ ಮೈಸೂರಿನಲ್ಲೇ ಬೀಡು ಬಿಟ್ಟಿರ್ತಾವೆ. ಅದರಲ್ಲೂ ಚಳಿಗಾಲದ ಸಂದರ್ಭದಲ್ಲಿ ಹೆಚ್.ಡಿ. ಕೋಟೆಯ ಬೀಚನಹಳ್ಳಿಯ ಕಬಿನಿ ಡ್ಯಾಂಗೆ ಲಗ್ಗೆ ಇಡುತ್ವೆ. ಅವುಗಳ ಎಂಟ್ರಿಯಿಂದ ಜಲಾಶಯದ ಅಂದ ದುಪ್ಪಟ್ಟಾಗುತ್ತದೆ.

ಸಾಂಸ್ಕೃತಿಕ ನಗರಿಯಲೊಂದು ವಲಸೆ ಹಕ್ಕಿಗಳ ಲೋಕ: ಇನ್ನು ಈ ಬಾರ್ ಹೆಡ್ ಗೂಸ್ ಪಕ್ಷಿಗಳು ವಲಸೆ ಹಕ್ಕಿಗಳಾಗಿದ್ದು ನೇಪಾಳ, ಮಂಗೋಲಿಯಾ, ಸೈಬಿರಿಯಾ ದೇಶಗಳಲ್ಲಿ ಹೆಚ್ಚಾಗಿ ಕಂಡು ಬರುತ್ತವೆ. ಇವುಗಳು ಸಂತಾನೋತ್ಪತ್ತಿಗಾಗಿ ನದಿಗಳು ಹಾಗೂ ಜಲಾಶಯದ ಹಿನ್ನೀರನ್ನ ಆಯ್ಕೆ ಮಾಡಿಕೊಳ್ಳುತ್ತವೆ. ಮೂರ್ನಾಲ್ಕು ತಿಂಗಳಗಳ ಕಾಲ ವಲಸೆ ಬಂದು ಕಬಿನಿ ಡ್ಯಾಂ ಬಳಿಯೇ ಬೀಡು ಬಿಟ್ಟಿರುತ್ತವೆ. ಹೊಲ ಗದ್ದೆಗಳಲ್ಲಿ ಆಹಾರ ಸೇವಿಸಿ ಸಂತಾನೋತ್ಪತ್ತಿ ಮುಗಿಸಿ ವಾಪಸ್ಸಾಗುತ್ತವೆ.

ಪಕ್ಷಿಲೋಕದ ನೋಟವೇ ಬಲುಚೆಂದ.. ಅದ್ರಲ್ಲೂ ಅರಮನೆ ನಗರಿಗೆ ದೂರದೂರಿಂದ ಹಿಂಡು ಹಿಂಡಾಗಿ ಬರೋ ಈ ಪಕ್ಷಿಗಳನ್ನ ಆಟ ತುಂಟಾಟ ನೋಡೋಕೆ ಎರಡು ಕಣ್ಣು ಸಾಲೋದಿಲ್ಲ. -ದಿಲೀಪ್

ವಿದ್ಯಾಕಾಶಿಯಲ್ಲಿ ಹಕ್ಕಿಗಳ ಮಾರಣಹೋಮ: ಔಷಧಕ್ಕೆಂದು ಸದ್ದಿಲ್ಲದೆ ಮಾಯವಾಗ್ತಿದೆ ಪಕ್ಷಿ ಸಂಕುಲ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ