AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾನಂಗಳದಲ್ಲಿ ಬಾನಾಡಿಗಳ ಕಲರವ, ಕಬಿನಿ ಜಲಾಶಯದಲ್ಲಿ ವಿದೇಶಿ ಪಕ್ಷಿಗಳ ಹಾರಾಟ

ಸಾಂಸ್ಕೃತಿಕ ನಗರಿ ಮೈಸೂರಿಗೆ ವಿದೇಶಿಗರು ಬರೋದು ಹೋಗೋದು ಕಾಮನ್‌. ಆದ್ರೆ ನವೆಂಬರ್ ಡಿಸೆಂಬರ್​ನಲ್ಲಿ ಬರುವ ಕೆಲ ವಿದೇಶಿ ಅತಿಥಿಗಳು ಬರೋಬ್ಬರಿ ಮೂರ್ನಾಲ್ಕು ತಿಂಗಳು ಇಲ್ಲೆ ಇದ್ದು ವಾಪಸ್‌ ಹೋಗ್ತಾರೆ. ಸಾವಿರಾರು ಸಂಖ್ಯೆಯಲ್ಲಿ ಬರೋ ಅತಿಥಿಗಳು ಇಲ್ಲಿಗೆ ಬಂದು ಎಂಜಾಯ್ ಮಾಡಿ ಹೋಗ್ತಾರೆ.

ಬಾನಂಗಳದಲ್ಲಿ ಬಾನಾಡಿಗಳ ಕಲರವ, ಕಬಿನಿ ಜಲಾಶಯದಲ್ಲಿ ವಿದೇಶಿ ಪಕ್ಷಿಗಳ ಹಾರಾಟ
ಮೈಸೂರಿನ ಕಬಿನಿ ಜಲಾಶಯದ ಹಿನ್ನೀರಿನಲ್ಲಿ ಬಾರ್ ಹೆಡ್ ಗೂಸ್ ಪಕ್ಷಿಗಳ ವಿಹಾರ
ಆಯೇಷಾ ಬಾನು
| Edited By: |

Updated on: Dec 07, 2020 | 12:55 PM

Share

ಮೈಸೂರು: ಬಾನಂಗಳದಲ್ಲಿ ಚಿಲಿಪಿಲಿಗಳ ರಂಗೂಲಿ.. ತಮ್ಮದೇ ಲೋಕದಲ್ಲಿ ತೇಲಾಡೋ ಬಾನಾಡಿಗಳು.. ಒಮ್ಮೆ ದಡದಲ್ಲಿ, ಮತ್ತೊಮ್ಮೆ ನೀರಲ್ಲಿ, ಮಗದೊಮ್ಮೆ ಬಾನಲ್ಲಿ.. ಎಲ್ಲೆಲ್ಲೂ ಈ ಚಿಲಿಪಿಗಳದ್ದೇ ಆಟ.. ಪಕ್ಷಿಲೋಕದ್ದೇ ತುಂಟಾಟ.. ಆಕಾಶದಿಂದ ಒಮ್ಮೆ ಕಣ್ಣು ಹಾಯಿಸಿದ್ರೆ ಜಲಾಶಯದ ತುಂಬ ಕಾಣೋ ಪಕ್ಷಿಗಳ ಲೋಕ..

ಮೈಸೂರಿನ ಕಬಿನಿ ಜಲಾಶಯದ ಹಿನ್ನೀರಿನಲ್ಲೀಗ ಬಾನಾಡಿಗಳ ಕಲರವ ಜೋರಾಗಿದೆ. ಮೈಸೂರಿಗೆ ದೂರದ ಊರಿನಿಂದ ಬಂದಿರೋ ವಿದೇಶಿ ಪಕ್ಷಿಗಳು ತುಂಟಾಟ ಆಡ್ತಿವೆ. ವರ್ಷದ ಕೊನೆಯಲ್ಲಿ ಬರೋ ಈ ಬಾರ್‌ಹೆಡ್‌ ಗೊಸ್‌ ಪಕ್ಷಿಗಳು ಮೂರು ತಿಂಗಳ ಕಾಲ ಮೈಸೂರಿನಲ್ಲೇ ಬೀಡು ಬಿಟ್ಟಿರ್ತಾವೆ. ಅದರಲ್ಲೂ ಚಳಿಗಾಲದ ಸಂದರ್ಭದಲ್ಲಿ ಹೆಚ್.ಡಿ. ಕೋಟೆಯ ಬೀಚನಹಳ್ಳಿಯ ಕಬಿನಿ ಡ್ಯಾಂಗೆ ಲಗ್ಗೆ ಇಡುತ್ವೆ. ಅವುಗಳ ಎಂಟ್ರಿಯಿಂದ ಜಲಾಶಯದ ಅಂದ ದುಪ್ಪಟ್ಟಾಗುತ್ತದೆ.

ಸಾಂಸ್ಕೃತಿಕ ನಗರಿಯಲೊಂದು ವಲಸೆ ಹಕ್ಕಿಗಳ ಲೋಕ: ಇನ್ನು ಈ ಬಾರ್ ಹೆಡ್ ಗೂಸ್ ಪಕ್ಷಿಗಳು ವಲಸೆ ಹಕ್ಕಿಗಳಾಗಿದ್ದು ನೇಪಾಳ, ಮಂಗೋಲಿಯಾ, ಸೈಬಿರಿಯಾ ದೇಶಗಳಲ್ಲಿ ಹೆಚ್ಚಾಗಿ ಕಂಡು ಬರುತ್ತವೆ. ಇವುಗಳು ಸಂತಾನೋತ್ಪತ್ತಿಗಾಗಿ ನದಿಗಳು ಹಾಗೂ ಜಲಾಶಯದ ಹಿನ್ನೀರನ್ನ ಆಯ್ಕೆ ಮಾಡಿಕೊಳ್ಳುತ್ತವೆ. ಮೂರ್ನಾಲ್ಕು ತಿಂಗಳಗಳ ಕಾಲ ವಲಸೆ ಬಂದು ಕಬಿನಿ ಡ್ಯಾಂ ಬಳಿಯೇ ಬೀಡು ಬಿಟ್ಟಿರುತ್ತವೆ. ಹೊಲ ಗದ್ದೆಗಳಲ್ಲಿ ಆಹಾರ ಸೇವಿಸಿ ಸಂತಾನೋತ್ಪತ್ತಿ ಮುಗಿಸಿ ವಾಪಸ್ಸಾಗುತ್ತವೆ.

ಪಕ್ಷಿಲೋಕದ ನೋಟವೇ ಬಲುಚೆಂದ.. ಅದ್ರಲ್ಲೂ ಅರಮನೆ ನಗರಿಗೆ ದೂರದೂರಿಂದ ಹಿಂಡು ಹಿಂಡಾಗಿ ಬರೋ ಈ ಪಕ್ಷಿಗಳನ್ನ ಆಟ ತುಂಟಾಟ ನೋಡೋಕೆ ಎರಡು ಕಣ್ಣು ಸಾಲೋದಿಲ್ಲ. -ದಿಲೀಪ್

ವಿದ್ಯಾಕಾಶಿಯಲ್ಲಿ ಹಕ್ಕಿಗಳ ಮಾರಣಹೋಮ: ಔಷಧಕ್ಕೆಂದು ಸದ್ದಿಲ್ಲದೆ ಮಾಯವಾಗ್ತಿದೆ ಪಕ್ಷಿ ಸಂಕುಲ

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ