AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CD ವಿಚಾರ ಪ್ರಸ್ತಾಪಿಸಿದವರೇ ಅದನ್ನ ಕ್ಲೋಸ್ ಮಾಡಬೇಕು: ಶಾಸಕ ಬಸನಗೌಡ ಯತ್ನಾಳ್

ಯಾವುದೇ ವಿಚಾರ ವಿವಾದ ಏನೂ ಕೂಡ ತಣ್ಣಗಾಗಿಲ್ಲ. ನಾನೂ ತಣ್ಣಗಾಗಲ್ಲ, ಬೆಚ್ಚಗೂ ಆಗಲ್ಲ, ಅಂಜುವುದೂ ಇಲ್ಲ ನಾನು ಏನು ಮಾತಾಡಬೇಕೋ ಅದನ್ನೇ ಮಾತಾಡುತ್ತೇನೆ ಎಂದ ಶಾಸಕ ಬಸನಗೌಡ ಯತ್ನಾಳ್.

CD ವಿಚಾರ ಪ್ರಸ್ತಾಪಿಸಿದವರೇ ಅದನ್ನ ಕ್ಲೋಸ್ ಮಾಡಬೇಕು: ಶಾಸಕ ಬಸನಗೌಡ ಯತ್ನಾಳ್
ಬಸನಗೌಡ ಪಾಟೀಲ್​ ಯತ್ನಾಳ್​
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jan 20, 2021 | 7:32 PM

Share

ಬೆಂಗಳೂರು: ಬಿಜೆಪಿ ಶಾಸಕರ ಪ್ರತ್ಯೇಕ ಸಭೆಯ ಬಗ್ಗೆ ನನಗೆ ಗೊತ್ತಿಲ್ಲ. ಯಾರು ಯಾವ ಸಭೆ ನಡೆಸುತ್ತಾರೆಂದು ನನಗೆ ಗೊತ್ತಿಲ್ಲ ಎಂದು ಶಾಸಕ ಬಸನಗೌಡ ಯತ್ನಾಳ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಯತ್ನಾಳ್ CD ವಿಚಾರ ಪ್ರಸ್ತಾಪಿಸಿದವರೇ ಅದನ್ನ ಕ್ಲೋಸ್ ಮಾಡ್ಬೇಕು ನಾನು ಓಪನ್ ಮಾಡಿಲ್ಲ, ಹೀಗಾಗಿ ಕ್ಲೋಸ್ ಮಾಡಲ್ಲ. ಯಾರನ್ನು ಯಾರು ಸಮಾಧಾನ ಮಾಡ್ತಾರೋ ಗೊತ್ತಿಲ್ಲ. ಎಲ್ಲರನ್ನೂ ಸಮಾಧಾನ ಮಾಡುವ ಶಕ್ತಿ ಒಂದು ಇದೆ. ಆ ಶಕ್ತಿ ಕೆಲಸ ಮಾಡುತ್ತೆ ಎಂದಿದ್ದಾರೆ.

ಯಾವುದೇ ವಿಚಾರ ವಿವಾದ ಏನೂ ಕೂಡ ತಣ್ಣಗಾಗಿಲ್ಲ. ನಾನೂ ತಣ್ಣಗಾಗಲ್ಲ, ಬೆಚ್ಚಗೂ ಆಗಲ್ಲ, ಅಂಜುವುದೂ ಇಲ್ಲ. ನಾನು ಏನು ಮಾತಾಡಬೇಕೋ ಅದನ್ನೇ ಮಾತಾಡುತ್ತೇನೆ. ರೇಣುಕಾಚಾರ್ಯ ಮಾತನಾಡುವ ಬಗ್ಗೆ ನನಗೆ ಗೊತ್ತಿಲ್ಲ. ಅವರು ಯಾರ ಪರ ಮಾತನಾಡುತ್ತಾರೆಂದು ಗೊತ್ತಿಲ್ಲ. ಪಾಪ ಕೇಂದ್ರದವರನ್ನು ಏಕೆ ಹೊಣೆ ಮಾಡಬೇಕು? ಇದರಲ್ಲಿ ಕೇಂದ್ರದವರ ಹಸ್ತಕ್ಷೇಪ ಏನೂ ಇರಲಿಲ್ಲ. ಎಲ್ಲಾ ಸಿಎಂ ಅಧಿಕಾರ, ಅವರೇ ಮಂತ್ರಿ ಮಾಡಿದ್ದಾರೆ ಎಂದು ಯತ್ನಾಳ್ ಹೇಳಿದ್ದಾರೆ.

ಹಿರಿಯರು ಸ್ಥಾನ ಬಿಟ್ಟುಕೊಡಬೇಕು

ಹಿರಿಯರು ಸ್ಥಾನ ಬಿಟ್ಟುಕೊಡಬೇಕು. ಪಕ್ಷ ಸಂಘಟನೆಯ ಕಡೆ ಮುಖ ಮಾಡಬೇಕು. ಶಾಸಕ ಶಿವನಗೌಡ ನಾಯಕ್ ಹೇಳಿದ್ದು ಸರಿಯಾಗಿದೆ. ಮಾಧ್ಯಮಗಳು ದಿನ ಬೆಳಗಾದ್ರೆ ರಾಜಾ ಹುಲಿ, ರಾಜಾ ಹುಲಿ ಅಂತಾರೆ ಅವರಿಗೆ ಧಕ್ಕೆಯಾದ್ರೆ ಪಕ್ಷ ನಾಶ ಅಂದ್ರೆ ಏನ್‌ಮಾಡೋದು? ಎಂದು ಯತ್ನಾಳ್ ಪ್ರಶ್ನಿಸಿದ್ದಾರೆ.

ನನ್ನ ಬಳಿ ಯಾವುದೇ CD ಇಲ್ಲ.. ಇದು ಅಪ್ರಸ್ತುತ, ಅಸಹ್ಯ -ಸಿ.ಪಿ.ಯೋಗೇಶ್ವರ್

Published On - 7:29 pm, Wed, 20 January 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್