AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್​ ಶಾ ಭೇಟಿಯಿಂದ.. ಸಂಪುಟ ವಿಸ್ತರಣೆಗಿಂತಲೂ ಮತ್ತೇನಾದರೂ ಆಗಬಹುದು -ಯತ್ನಾಳ್ ಹೊಸ ಬಾಂಬ್

ಜ.16ರಂದು ಅಮಿತ್​ ಶಾ ವಿಜಯಪುರ ಜಿಲ್ಲೆಗೆ ಬರ್ತಿದ್ದಾರೆ. ಸಂಕ್ರಮಣಕ್ಕೆ ಸಚಿವ ಸಂಪುಟ ವಿಸ್ತರಣೆ ಆಗುತ್ತೋ ಬದಲಾವಣೆ ಆಗುತ್ತೋ ಗೊತ್ತಿಲ್ಲ. ಸಂಪುಟ ವಿಸ್ತರಣೆಗಿಂತಲೂ ಮತ್ತೇನಾದರೂ ಆಗಬಹುದು. ಉತ್ತರ ಕರ್ನಾಟಕ, ವಿಜಯಪುರ ಜಿಲ್ಲೆಗೆ ಒಳಿತಾಗಲಿದೆ ಎಂದು ಬಸನಗೌಡ ಪಾಟೀಲ್​ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಅಮಿತ್​ ಶಾ ಭೇಟಿಯಿಂದ.. ಸಂಪುಟ ವಿಸ್ತರಣೆಗಿಂತಲೂ ಮತ್ತೇನಾದರೂ ಆಗಬಹುದು -ಯತ್ನಾಳ್ ಹೊಸ ಬಾಂಬ್
ಬಸನಗೌಡ ಪಾಟೀಲ್​ ಯತ್ನಾಳ್
ಆಯೇಷಾ ಬಾನು
| Edited By: |

Updated on:Dec 25, 2020 | 3:31 PM

Share

ವಿಜಯಪುರ: ಜನವರಿ 16ರಂದು ಅಮಿತ್​ ಶಾ ವಿಜಯಪುರ ಜಿಲ್ಲೆಗೆ ಬರ್ತಿದ್ದಾರೆ. ಸಂಕ್ರಮಣಕ್ಕೆ ಸಚಿವ ಸಂಪುಟ ವಿಸ್ತರಣೆಯಾಗುತ್ತೋ ಗೊತ್ತಿಲ್ಲ. ಆದ್ರೆ ಮತ್ತೇನಾದರೂ ಆಗಬಹುದು ಎಂದು ಬಸನಗೌಡ ಪಾಟೀಲ್​ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ‌ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಯತ್ನಾಳ್ ಜ.16ರಂದು ಅಮಿತ್​ ಶಾ ವಿಜಯಪುರ ಜಿಲ್ಲೆಗೆ ಬರ್ತಿದ್ದಾರೆ. ಸಂಕ್ರಮಣಕ್ಕೆ ಸಚಿವ ಸಂಪುಟ ವಿಸ್ತರಣೆ ಆಗುತ್ತೋ ಬದಲಾವಣೆ ಆಗುತ್ತೋ ಗೊತ್ತಿಲ್ಲ. ಸಂಪುಟ ವಿಸ್ತರಣೆಗಿಂತಲೂ ಮತ್ತೇನಾದರೂ ಆಗಬಹುದು. ಉತ್ತರ ಕರ್ನಾಟಕ, ವಿಜಯಪುರ ಜಿಲ್ಲೆಗೆ ಒಳಿತಾಗಲಿದೆ ಎಂದು ಹೇಳಿದ್ದಾರೆ.

ಇದೆಲ್ಲಾ ಮಾಧ್ಯಮದವರ ಸೃಷ್ಟಿ. ಮಾಧ್ಯಮದವರು ಯಾವಾಗ ಯಾವಾಗ ಯಾರ ಪರವಾಗಿ ಇರ್ತರೋ ಗೊತ್ತಿಲ್ಲ. ದಯವಿಟ್ಟು ನನ್ನ ಹೆಸರು ಸಚಿವ ಸಂಪುಟಕ್ಕೆ ಸೇರಲಿದೆ‌ ಎಂದು ಸುದ್ದಿ ಮಾಡಬೇಡಿ. ನನಗೆ ಸಚಿವನಾಗಲು ಇಷ್ಟವಿಲ್ಲ. ಯಾರ ಹಣೆ ಬರಹದಲ್ಲಿ ಏನಿದೆ‌ ಎಂಬುದು ಗೊತ್ತಿಲ್ಲ ಎಂದು ಮಾರ್ಮಿಕವಾಗಿ‌ ಯತ್ನಾಳ್ ನುಡಿದ್ರು. ಸಂಕ್ರಮಣದ ಉತ್ತರಾಯಣದಿಂದ ಕೇಂದ್ರದ ಹೈಕಮಾಂಡ್ ಒಳ್ಳೆಯ‌ ನಿರ್ಣಯ‌ ತೆಗೆದುಕೊಳ್ಳಲಿದ್ದಾರೆ. ವಿಜಯಪುರ ಜಿಲ್ಲೆಗೆ ಇಷ್ಟು ದಿನ ಆದ ಅನ್ಯಾಯ ಸರಿ ಪಡಿಸಲಿದ್ದಾರೆ. ಅಮಿತ್ ಶಾ ಅವರು‌‌‌‌ ಜನವರಿ 16 ರಂದು ವಿಜಯಪುರ ಜಿಲ್ಲೆಗೆ ಆಗಮಿಸಲಿದ್ದಾರೆ. ಜಿಲ್ಲೆಯಲ್ಲಿ ನೂತನವಾಗಿ ಸ್ಥಾಪನೆಯಾಗಲಿರುವ IRB ಬಟಾಲಿಯನ್ ಉದ್ಘಾಟನೆಗೆ ಬರಲಿದ್ದಾರೆ. ಅವರು ಬರುವ ಮುನ್ನವೇ ಭಾರಿ ಬದಲಾವಣೆ ಆಗಲಿದೆ ಎಂದು ತಿಳಿಸಿದ್ರು.

ಬ್ಯಾನರ್​ನಲ್ಲಿ‌ ಸಿಎಂ ಭಾವಚಿತ್ರ ಕಾಣೆ ಇನ್ನು ಕಾರ್ಯಕ್ರಮದ ಬ್ಯಾನರ್​ನಲ್ಲಿ‌ ಸಿಎಂ ಭಾವಚಿತ್ರ ಹಾಕದೆ ಇದ್ದುದರ ಬಗೆಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಯತ್ನಾಳ್, ಇದು ಕೇಂದ್ರ ಸರ್ಕಾರದ ಕಾರ್ಯಕ್ರಮ. ಕೇಂದ್ರ ನಾಯಕರ ಭಾವಚಿತ್ರಗಳನ್ನು ಬ್ಯಾನರ್​ನಲ್ಲಿ ಹಾಕಲಾಗಿದೆ. ಸಿಎಂ ಯಡಿಯೂರಪ್ಪನವರು ನಮ್ಮ ಹೃದಯದಲ್ಲಿ, ಮನದಲ್ಲಿದ್ದಾರೆ ಎಂದು ಸಮಜಾಯಿಷಿ ನೀಡಿದ್ದಾರೆ.

ಯತ್ನಾಳ್ ಒಬ್ಬ ಆರ್ಡಿನರಿ ಶಾಸಕ.. ಇಂಥ ವಿಷಯಗಳನ್ನು ಮಾತಾಡಲು ಅವರು​​ ಯಾರು? -ಡಿ.ವಿ.ಸದಾನಂದಗೌಡ

Published On - 2:30 pm, Fri, 25 December 20

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್