Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್​ ಶಾ ಭೇಟಿಯಿಂದ.. ಸಂಪುಟ ವಿಸ್ತರಣೆಗಿಂತಲೂ ಮತ್ತೇನಾದರೂ ಆಗಬಹುದು -ಯತ್ನಾಳ್ ಹೊಸ ಬಾಂಬ್

ಜ.16ರಂದು ಅಮಿತ್​ ಶಾ ವಿಜಯಪುರ ಜಿಲ್ಲೆಗೆ ಬರ್ತಿದ್ದಾರೆ. ಸಂಕ್ರಮಣಕ್ಕೆ ಸಚಿವ ಸಂಪುಟ ವಿಸ್ತರಣೆ ಆಗುತ್ತೋ ಬದಲಾವಣೆ ಆಗುತ್ತೋ ಗೊತ್ತಿಲ್ಲ. ಸಂಪುಟ ವಿಸ್ತರಣೆಗಿಂತಲೂ ಮತ್ತೇನಾದರೂ ಆಗಬಹುದು. ಉತ್ತರ ಕರ್ನಾಟಕ, ವಿಜಯಪುರ ಜಿಲ್ಲೆಗೆ ಒಳಿತಾಗಲಿದೆ ಎಂದು ಬಸನಗೌಡ ಪಾಟೀಲ್​ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಅಮಿತ್​ ಶಾ ಭೇಟಿಯಿಂದ.. ಸಂಪುಟ ವಿಸ್ತರಣೆಗಿಂತಲೂ ಮತ್ತೇನಾದರೂ ಆಗಬಹುದು -ಯತ್ನಾಳ್ ಹೊಸ ಬಾಂಬ್
ಬಸನಗೌಡ ಪಾಟೀಲ್​ ಯತ್ನಾಳ್
Follow us
ಆಯೇಷಾ ಬಾನು
| Updated By: KUSHAL V

Updated on:Dec 25, 2020 | 3:31 PM

ವಿಜಯಪುರ: ಜನವರಿ 16ರಂದು ಅಮಿತ್​ ಶಾ ವಿಜಯಪುರ ಜಿಲ್ಲೆಗೆ ಬರ್ತಿದ್ದಾರೆ. ಸಂಕ್ರಮಣಕ್ಕೆ ಸಚಿವ ಸಂಪುಟ ವಿಸ್ತರಣೆಯಾಗುತ್ತೋ ಗೊತ್ತಿಲ್ಲ. ಆದ್ರೆ ಮತ್ತೇನಾದರೂ ಆಗಬಹುದು ಎಂದು ಬಸನಗೌಡ ಪಾಟೀಲ್​ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ‌ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಯತ್ನಾಳ್ ಜ.16ರಂದು ಅಮಿತ್​ ಶಾ ವಿಜಯಪುರ ಜಿಲ್ಲೆಗೆ ಬರ್ತಿದ್ದಾರೆ. ಸಂಕ್ರಮಣಕ್ಕೆ ಸಚಿವ ಸಂಪುಟ ವಿಸ್ತರಣೆ ಆಗುತ್ತೋ ಬದಲಾವಣೆ ಆಗುತ್ತೋ ಗೊತ್ತಿಲ್ಲ. ಸಂಪುಟ ವಿಸ್ತರಣೆಗಿಂತಲೂ ಮತ್ತೇನಾದರೂ ಆಗಬಹುದು. ಉತ್ತರ ಕರ್ನಾಟಕ, ವಿಜಯಪುರ ಜಿಲ್ಲೆಗೆ ಒಳಿತಾಗಲಿದೆ ಎಂದು ಹೇಳಿದ್ದಾರೆ.

ಇದೆಲ್ಲಾ ಮಾಧ್ಯಮದವರ ಸೃಷ್ಟಿ. ಮಾಧ್ಯಮದವರು ಯಾವಾಗ ಯಾವಾಗ ಯಾರ ಪರವಾಗಿ ಇರ್ತರೋ ಗೊತ್ತಿಲ್ಲ. ದಯವಿಟ್ಟು ನನ್ನ ಹೆಸರು ಸಚಿವ ಸಂಪುಟಕ್ಕೆ ಸೇರಲಿದೆ‌ ಎಂದು ಸುದ್ದಿ ಮಾಡಬೇಡಿ. ನನಗೆ ಸಚಿವನಾಗಲು ಇಷ್ಟವಿಲ್ಲ. ಯಾರ ಹಣೆ ಬರಹದಲ್ಲಿ ಏನಿದೆ‌ ಎಂಬುದು ಗೊತ್ತಿಲ್ಲ ಎಂದು ಮಾರ್ಮಿಕವಾಗಿ‌ ಯತ್ನಾಳ್ ನುಡಿದ್ರು. ಸಂಕ್ರಮಣದ ಉತ್ತರಾಯಣದಿಂದ ಕೇಂದ್ರದ ಹೈಕಮಾಂಡ್ ಒಳ್ಳೆಯ‌ ನಿರ್ಣಯ‌ ತೆಗೆದುಕೊಳ್ಳಲಿದ್ದಾರೆ. ವಿಜಯಪುರ ಜಿಲ್ಲೆಗೆ ಇಷ್ಟು ದಿನ ಆದ ಅನ್ಯಾಯ ಸರಿ ಪಡಿಸಲಿದ್ದಾರೆ. ಅಮಿತ್ ಶಾ ಅವರು‌‌‌‌ ಜನವರಿ 16 ರಂದು ವಿಜಯಪುರ ಜಿಲ್ಲೆಗೆ ಆಗಮಿಸಲಿದ್ದಾರೆ. ಜಿಲ್ಲೆಯಲ್ಲಿ ನೂತನವಾಗಿ ಸ್ಥಾಪನೆಯಾಗಲಿರುವ IRB ಬಟಾಲಿಯನ್ ಉದ್ಘಾಟನೆಗೆ ಬರಲಿದ್ದಾರೆ. ಅವರು ಬರುವ ಮುನ್ನವೇ ಭಾರಿ ಬದಲಾವಣೆ ಆಗಲಿದೆ ಎಂದು ತಿಳಿಸಿದ್ರು.

ಬ್ಯಾನರ್​ನಲ್ಲಿ‌ ಸಿಎಂ ಭಾವಚಿತ್ರ ಕಾಣೆ ಇನ್ನು ಕಾರ್ಯಕ್ರಮದ ಬ್ಯಾನರ್​ನಲ್ಲಿ‌ ಸಿಎಂ ಭಾವಚಿತ್ರ ಹಾಕದೆ ಇದ್ದುದರ ಬಗೆಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಯತ್ನಾಳ್, ಇದು ಕೇಂದ್ರ ಸರ್ಕಾರದ ಕಾರ್ಯಕ್ರಮ. ಕೇಂದ್ರ ನಾಯಕರ ಭಾವಚಿತ್ರಗಳನ್ನು ಬ್ಯಾನರ್​ನಲ್ಲಿ ಹಾಕಲಾಗಿದೆ. ಸಿಎಂ ಯಡಿಯೂರಪ್ಪನವರು ನಮ್ಮ ಹೃದಯದಲ್ಲಿ, ಮನದಲ್ಲಿದ್ದಾರೆ ಎಂದು ಸಮಜಾಯಿಷಿ ನೀಡಿದ್ದಾರೆ.

ಯತ್ನಾಳ್ ಒಬ್ಬ ಆರ್ಡಿನರಿ ಶಾಸಕ.. ಇಂಥ ವಿಷಯಗಳನ್ನು ಮಾತಾಡಲು ಅವರು​​ ಯಾರು? -ಡಿ.ವಿ.ಸದಾನಂದಗೌಡ

Published On - 2:30 pm, Fri, 25 December 20

ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ