AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಕ್ರಾಂತಿಯ ಮೂಲಕ ವಿಶ್ವಕ್ಕೆ ಮಾದರಿಯಾಗಿದ್ದ ಕೋಟೆ ಇಂದು ಅವಸಾನದತ್ತ

ಬೀದರ್: ಭಾರತದ ಇತಿಹಾಸದಲ್ಲಿಯೇ ಅದೂ 12ನೇ ಶತಮಾನದಲ್ಲಿ ಸಮಾನತೆ ಮತ್ತು ಕಾಯಕ ತತ್ವದ ಮೂಲಕ ಕ್ರಾಂತಿಯನ್ನುಂಟು ಮಾಡಿದ್ದು ಕ್ರಾಂತಿಯೋಗಿ ಬಸವಣ್ಣ ಮತ್ತು ಬಿಜ್ಜಳದ ರಾಜ. ಆದ್ರೆ ಬಸವ-ಬಿಜ್ಜಳರ ಬಸವಕಲ್ಯಾಣ ಕೋಟೆ ಇಂದು ಅವನತಿಯತ್ತ ಸಾಗಿದೆ. ಇದಕ್ಕೆ ಕಾರಣ ಆಳುವ ಸರ್ಕಾರಗಳ ಸತತ ನಿರ್ಲಕ್ಷ್ಯ. ಹೌದು ಸಮಾನತೆ ತತ್ವದಡಿ ಕ್ರಾಂತಿಯ ಮೂಲಕ ಅಣ್ಣ ಬಸವಣ್ಣನ ಕಾಯಕ ಭೂಮಿಯಾದ ಬೀದರ್ ಜಿಲ್ಲೆಯ ಬಸವಕಲ್ಯಾಣ ಅಭಿವೃದ್ಧಿಪಡಿಸಿ ಅಂತಾರಾಷ್ಟ್ರೀಯ ಪ್ರವಾಸಿ ಕೇಂದ್ರವನ್ನಾಗಿಸಬೇಕು ಎನ್ನುವ ಸರ್ಕಾರಗಳ ನಿರ್ಧಾರ ಕೇವಲ ಘೋಷಣೆಯಾಗಿಯೇ ಉಳಿದಿದೆ. ಚುನಾವಣೆ ವೇಳೆ […]

ಅಂದು ಕ್ರಾಂತಿಯ ಮೂಲಕ ವಿಶ್ವಕ್ಕೆ ಮಾದರಿಯಾಗಿದ್ದ ಕೋಟೆ ಇಂದು ಅವಸಾನದತ್ತ
Guru
| Edited By: |

Updated on:Jul 14, 2020 | 2:06 PM

Share

ಬೀದರ್: ಭಾರತದ ಇತಿಹಾಸದಲ್ಲಿಯೇ ಅದೂ 12ನೇ ಶತಮಾನದಲ್ಲಿ ಸಮಾನತೆ ಮತ್ತು ಕಾಯಕ ತತ್ವದ ಮೂಲಕ ಕ್ರಾಂತಿಯನ್ನುಂಟು ಮಾಡಿದ್ದು ಕ್ರಾಂತಿಯೋಗಿ ಬಸವಣ್ಣ ಮತ್ತು ಬಿಜ್ಜಳದ ರಾಜ. ಆದ್ರೆ ಬಸವ-ಬಿಜ್ಜಳರ ಬಸವಕಲ್ಯಾಣ ಕೋಟೆ ಇಂದು ಅವನತಿಯತ್ತ ಸಾಗಿದೆ. ಇದಕ್ಕೆ ಕಾರಣ ಆಳುವ ಸರ್ಕಾರಗಳ ಸತತ ನಿರ್ಲಕ್ಷ್ಯ.

ಹೌದು ಸಮಾನತೆ ತತ್ವದಡಿ ಕ್ರಾಂತಿಯ ಮೂಲಕ ಅಣ್ಣ ಬಸವಣ್ಣನ ಕಾಯಕ ಭೂಮಿಯಾದ ಬೀದರ್ ಜಿಲ್ಲೆಯ ಬಸವಕಲ್ಯಾಣ ಅಭಿವೃದ್ಧಿಪಡಿಸಿ ಅಂತಾರಾಷ್ಟ್ರೀಯ ಪ್ರವಾಸಿ ಕೇಂದ್ರವನ್ನಾಗಿಸಬೇಕು ಎನ್ನುವ ಸರ್ಕಾರಗಳ ನಿರ್ಧಾರ ಕೇವಲ ಘೋಷಣೆಯಾಗಿಯೇ ಉಳಿದಿದೆ. ಚುನಾವಣೆ ವೇಳೆ ಬಸವಕಲ್ಯಾಣವನ್ನು ವಿಶ್ವ ಪ್ರಸಿದ್ಧ ಪ್ರವಾಸಿ ತಾಣವನ್ನಾಗಿಸಲು ನೂರಾರು ಕೋಟಿ ರೂಪಾಯಿ ಅನುದಾನ ನೀಡುವ ರಾಜಕಾರಣಿಗಳ ಭರವಸೆ ಕೇವಲ ಭರವಸೆಯಾಗಿಯೇ ಉಳಿದಿದೆ.

ಕೋಟೆಯ ದುಃಸ್ಥಿತಿಯಿಂದ ಕಡಿಮೆಯಾಗುತ್ತಿದೆ ಪ್ರವಾಸಿಗರ ಸಂಖ್ಯೆ ಪ್ರತಿ ವರ್ಷ ಬಸವಕಲ್ಯಾಣಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದ್ದರೂ ಕೋಟೆ ನೋಡುವ ಜನರ ಸಂಖ್ಯೆ ಕಡಿಮೆಯಾಗುತ್ತಿದೆ. ಇದಕ್ಕೆ ಕಾರಣ ಕೋಟೆಯ ದುಃಸ್ಥಿತಿ. ವಿದ್ಯಾರ್ಥಿಗಳು ಸೇರಿದಂತೆ ಪ್ರತಿ ವರ್ಷ ಸರಾಸರಿ 30 ಸಾವಿರ ಪ್ರವಾಸಿಗರು ಕಲ್ಯಾಣಕ್ಕೆ ಭೇಟಿ ನೀಡುತ್ತಾರೆ.

ಕೋಟೆ ಮತ್ತು ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡುವರಿಗೆ ತಲಾ 4 ರೂಪಾಯಿ ಮಕ್ಕಳಿಗೆ 2 ರೂಪಾಯಿ ಟಿಕೆಟ್ ವ್ಯವಸ್ಥೆ ಮಾಡಿದ್ದು, ಪ್ರತಿವರ್ಷ ಲಕ್ಷಾಂತರ ರೂಪಾಯಿ ಸಂಗ್ರಹ ಮಾಡಲಾಗುತ್ತಿದೆ, ಅದರ ಆದ್ರೆ ಸದ್ವಿನಿಯೋಗ ಆಗುತ್ತಿಲ್ಲ.

ಗತ ಇತಿಹಾಸ ತಿಳಿಸಲು ಗೈಡ್‌ಗಳೇ ಇಲ್ಲ ಈ ಕೋಟೆಯ ಒಳಗೆ ಬಾರುದ್ ಇಡುವ ಕೋಣೆ, ಕೈದಿಗಳ ಜೈಲು, ರಂಗ ಮಹಲ್, ತೋಪುಗಳು ನೋಡುಗರ ಗಮನ ಸೆಳೆಯುತ್ತವೆ. ಆದ್ರೆ ಕೋಟೆ ಮತ್ತು ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಮಾಹಿತಿ ನೀಡುವ ಗೈಡ್​ಗಳ ಕೊರತೆ ಇದೆ.

ಪ್ರವಾಸಿಗರು ಸುಮ್ಮನೆ ಒಂದು ಸುತ್ತುಹಾಕಿ ಮರಳಿ ಹೋಗುತ್ತಿದ್ದಾರೆ. ಗತಕಾಲದ ಇತಿಹಾಸ ತಿಳಿಸುವ ಕಾರ್ಯ ಇಲ್ಲಿ ನಡೆಯಬೇಕು. ಈ ಬಗ್ಗೆ ಕೋಟೆಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಪ್ರಾಚ್ಯವಸ್ತು ಮತ್ತು ಸಂಗ್ರಹಾಲಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎನ್ನುವುದು ಪ್ರವಾಸಿಗರ ಅಭಿಪ್ರಾಯ

ಪಾಳು ಬಿದ್ದಿದೆ ಐತಿಹಾಸಿಕ ಕೋಟೆ ಕೋಟೆ ಆವರಣದಲ್ಲಿ ಗಿಡಮರಗಳು ಬೆಳೆದು ಅವಶೇಷಗಳು ಹಾಗೂ ಗೋಡೆಗಳು ಹಾಳಾಗುತ್ತಿದ್ದು, ಯಾವ ಸಂದರ್ಭದಲ್ಲಾದರೂ ಕುಸಿಯುವಂತೆ ಕಾಣುತ್ತಿವೆ. ಸರ್ಕಾರ ಪ್ರವಾಸಿ ತಾಣವನ್ನಾಗಿ ಬೆಳೆಸುವ ಜೊತೆಗೆ ಮೂಲ ಸೌಕರ್ಯ ಕಲ್ಪಿಸಬೇಕಿದೆ. ಕೋಟೆ ಆವರಣ ಸ್ವಚ್ಛಗೊಳಿಸಿ ಉದ್ಯಾನ ಬೆಳೆಸಿ ಆಕರ್ಷಣೀಯ ತಾಣವಾಗಿಸಬೇಕು. ಗೈಡ್ ನೇಮಕ ಮಾಡಬೇಕು, ಸ್ಮಾರಕಗಳ ಸ್ಥಳದಲ್ಲಿ ಅವುಗಳ ಇತಿಹಾಸವಿರುವ ಫಲಕ ಹಾಕಬೇಕು. ಇದರಿಂದ ಪ್ರವಾಸಿಗರಿಗೆ ಸರಿಯಾದ ಮಾಹಿತಿ ಸಿಗುತ್ತದೆ ಎನ್ನುವುದು ಸ್ಥಳೀಯರ ಆಗ್ರಹ.

115 ಏಕರೆ ವಿಸ್ತಾರದ ಐತಿಹಾಸಿಕ ಕೋಟೆ 12ನೇ ಶತಮಾನಕ್ಕಿಂತ ಪೂರ್ವದಲ್ಲಿಯೇ 115 ಎಕರೆ ಪ್ರದೇಶದಲ್ಲಿ ಕರಿ ಕಲ್ಲಿನಿಂದ ಈ ಐತಿಹಾಸಿಕ ಕೋಟೆಯನ್ನ ಕಟ್ಟಲಾಗಿದೆ. ಬಿಜ್ಜಳ ರಾಜ ಸೇರದಿದಂತೆ ಹತ್ತಾರು ರಾಜಮಹಾರಾಜರು ಈ ಕೋಟೆಯನ್ನ ಆಳಿದ್ದಾರೆ. ವಿಶಾಲ ಪ್ರವೇಶ ದ್ವಾರ, ಪ್ರಾಂಗಣ, ಅಂತರ ಗೋಪುರಗಳು, 150 ಅಡಿ ಎತ್ತರದ ಗೋಡೆಗಳು ಈ ಕೋಟೆಯ ವೈಶಿಷ್ಟ್ಯ. ಕೋಟೆಯನ್ನೋಮ್ಮೇ ಸುತ್ತು ಹಾಕಿದರೆ ಶಿಲ್ಪ ಕಲೆಯ ವೈಭವ ಕಣ್ಣ ಮುಂದೆ ಬಿಚ್ಚಿಕೊಳ್ಳುತ್ತದೆ. ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ.

ಇಂಥ ಅಪೂರ್ವ ಕೆತ್ತನೆಗಳು ನಿಧಾನವಾಗಿ ನಶಿಸಿಹೋಗುತ್ತಿರುವುದು ಕಲಾ ಪ್ರೀಯರಿಗೆ ನಿರಾಸೆ ಮೂಡಿಸಿದೆ. ಹೀಗಾಗಿ ಇಂಥ ಕೋಟೆ ಹಾಳಾಗದಂತೆ ಸಂರಕ್ಷಿಸಿ ಮುಂದಿನ ಪೀಳಿಗೆಗೆ ಭವ್ಯ ಪರಂಪರೆಯನ್ನು ಪರಿಚಯಿಸುವವಂತಾಗಬೇಕು. ಜಿಲ್ಲಾಡಳಿತ ಹಾಗೂ ಪುರಾತತ್ವ ಇಲಾಖೆ ಕೋಟೆಯ ಜಿರ್ಣೋದ್ದಾರಕ್ಕೆ ಸೂಕ್ತ ಕ್ರಮ ಕೈಗೊಂಡು ಸಂರಕ್ಷಣೆಯತ್ತ ಗಮನಹರಿಸಬೇಕೆನ್ನುವುದು ಸ್ಥಳೀಯರ ಆಗ್ರಹ. -ಸುರೇಶ್ ನಾಯಕ್

Published On - 1:56 pm, Tue, 14 July 20

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?