Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ ಒಪ್ಪಿದ್ರೆ ಡಿಸೆಂಬರ್​ನಲ್ಲಿ ಬಿಬಿಎಂಪಿ ಯುದ್ಧಕ್ಕೆ ಮುಹೂರ್ತ ಫಿಕ್ಸ್?

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳ ಅಧಿಕಾರಾವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಹರಸಾಹಸ ಪಡಲಾಗುತ್ತಿದೆ. ಡಿಸೆಂಬರ್​ನಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಬಿಬಿಎಂಪಿ ಪುನರ್ ರಚನಾ ಸಮಿತಿ ನವೆಂಬರ್ ಅಂತ್ಯದೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲ್ಲಿದ್ದು, ರಾಜ್ಯಸರ್ಕಾರ ಹಸಿರು ನಿಶಾನೆ ನೀಡಿದರೆ ಡಿಸೆಂಬರ್ ಅಂತ್ಯದೊಳಗೆ ಬಿಬಿಎಂಪಿಯ ಚುನಾವಣೆ ನಡೆಯುವ ಸಾಧ್ಯತೆ ಇದೆ. ಬೆಂಗಳೂರು ಪ್ರತ್ಯೇಕ ಕಾಯ್ದೆ ರಚನಾ ಜಂಟಿ ಸಲಹಾ ಸಮಿತಿ, ಬಿಬಿಎಂಪಿ ಪುನರ್ ರಚನಾ ಸಮಿತಿ ನಿಗದಿತ ಅವಧಿಯಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆ […]

ಸರ್ಕಾರ ಒಪ್ಪಿದ್ರೆ ಡಿಸೆಂಬರ್​ನಲ್ಲಿ ಬಿಬಿಎಂಪಿ ಯುದ್ಧಕ್ಕೆ ಮುಹೂರ್ತ ಫಿಕ್ಸ್?
ಬಿಬಿಎಂಪಿ
Follow us
ಆಯೇಷಾ ಬಾನು
|

Updated on:Sep 10, 2020 | 9:18 AM

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳ ಅಧಿಕಾರಾವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಹರಸಾಹಸ ಪಡಲಾಗುತ್ತಿದೆ. ಡಿಸೆಂಬರ್​ನಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಈ ಬಗ್ಗೆ ಬಿಬಿಎಂಪಿ ಪುನರ್ ರಚನಾ ಸಮಿತಿ ನವೆಂಬರ್ ಅಂತ್ಯದೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲ್ಲಿದ್ದು, ರಾಜ್ಯಸರ್ಕಾರ ಹಸಿರು ನಿಶಾನೆ ನೀಡಿದರೆ ಡಿಸೆಂಬರ್ ಅಂತ್ಯದೊಳಗೆ ಬಿಬಿಎಂಪಿಯ ಚುನಾವಣೆ ನಡೆಯುವ ಸಾಧ್ಯತೆ ಇದೆ. ಬೆಂಗಳೂರು ಪ್ರತ್ಯೇಕ ಕಾಯ್ದೆ ರಚನಾ ಜಂಟಿ ಸಲಹಾ ಸಮಿತಿ, ಬಿಬಿಎಂಪಿ ಪುನರ್ ರಚನಾ ಸಮಿತಿ ನಿಗದಿತ ಅವಧಿಯಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿ ಸರ್ಕಾರ ವರದಿಗೆ ಅನುಮೋದನೆ ನೀಡಿದರೆ ಬಿಬಿಎಂಪಿಯ ಹೊಸ 225 ವಾರ್ಡ್​ಗಳಿಗೆ ಡಿಸೆಂಬರ್ ವೇಳೆಗೆ ಚುನಾವಣೆ ನಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಬಿಬಿಎಂಪಿ ಪುನರ್ ರಚನೆ ಮತ್ತು ಬೆಂಗಳೂರಿಗೆ ಪ್ರತ್ಯೇಕ ಕಾಯ್ದೆ ರಚನೆಗೆ ಸಂಬಂಧಸಿದಂತೆ ಶಾಸಕ ಎಸ್.ರಘು ಅಧ್ಯಕ್ಷತೆಯಲ್ಲಿ ನಗರದ ಬಿಜೆಪಿಯ 11, ಕಾಂಗ್ರೆಸ್ ಆರು ಹಾಗೂ ಜೆಡಿಎಸ್ ಪಕ್ಷದ ಮೂರು ಮಂದಿ ಶಾಸಕರ ನೇತೃತ್ವದಲ್ಲಿ ರಚಿಸಲಾದ ಜಂಟಿ ಸದನ ಸಮಿತಿ ಈಗಾಗಲೇ ಮೂರು ಬಾರಿ ಸಭೆ ನಡೆಸಿದೆ. ಸಮಿತಿ ಸಭೆಯಲ್ಲಿ ಒಟ್ಟು 80 ಅಂಶಗಳನ್ನು ಇಟ್ಟುಕೊಂಡು ಬಿಬಿಎಂಪಿಗೆ ಹೊಸ ಕಾಯ್ದೆ ಹಾಗೂ ಪುನರ್ ರಚನೆ ಪ್ರಕ್ರಿಯೆ ನಡೆಯುತ್ತಿದ್ದು, ಮೇಯರ್ ಹಾಗೂ ಉಪ ಮೇಯರ್ ಅಧಿಕಾರ ಅವಧಿಯನ್ನು 12 ತಿಂಗಳಿನಿಂದ 30 ತಿಂಗಳಿಗೆ (1 ವರ್ಷದಿಂದ ಎರಡೂವರೆ ವರ್ಷಕ್ಕೆ) ಏರಿಕೆ ಮಾಡುವುದು. ಪಾಲಿಕೆ ವಾರ್ಡ್ ಸಂಖ್ಯೆಗಳನ್ನು 198ರಿಂದ 225ಕ್ಕೆ ಏರಿಕೆ ಮಾಡುವುದು ಎಂಬ ಸಮಿತಿ ವರದಿಯನ್ನ ನವೆಂಬರ್ ಒಳಗೆ ನೀಡಲು ಸಮಿತಿ ಸದಸ್ಯರು ತೀರ್ಮಾನಿಸಿದ್ದಾರೆ.

Published On - 9:17 am, Thu, 10 September 20

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ