AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಚುನಾವಣೆ ಮುಂದೂಡುವಿಕೆಗೆ ಸರ್ಕಾರಿ ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ನಾಳೆ ವಿಚಾರಣೆ

2007ರಲ್ಲಿ ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 198ಕ್ಕೆ ಹೆಚ್ಚಿಸಲಾಗಿತ್ತು. ಆ ಬಳಿಕ ನಗರದಲ್ಲಿ ಜನಸಂಖ್ಯೆ ಹೆಚ್ಚಳವಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ವಾರ್ಡ್‌ಗಳ ಸಂಖ್ಯೆ ಹೆಚ್ಚಿಸುವ ಅಗತ್ಯವಿದೆ ಎಂಬುದು ಸರ್ಕಾರದ ವಾದ.

BBMP ಚುನಾವಣೆ ಮುಂದೂಡುವಿಕೆಗೆ ಸರ್ಕಾರಿ ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ನಾಳೆ ವಿಚಾರಣೆ
ಸುಪ್ರೀಂ ಕೋರ್ಟ್
ರಶ್ಮಿ ಕಲ್ಲಕಟ್ಟ
| Updated By: ಸಾಧು ಶ್ರೀನಾಥ್​|

Updated on: Dec 17, 2020 | 11:16 AM

Share

ಬೆಂಗಳೂರು: ಬಿಬಿಎಂಪಿ ಚುನಾವಣೆ ಮುಂದೂಡುವಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಇದರ ವಿಚಾರಣೆ ನಾಳೆ (ಡಿಸೆಂಬರ್ 18) ನಡೆಯಲಿದೆ.

1976ರ ಕೆಎಂಸಿ ಕಾಯ್ದೆಗೆ (ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ) ತಿದ್ದುಪಡಿ ತಂದು ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಬಿಬಿಎಂಪಿ ಚುನಾವಣೆಯನ್ನು ನಡೆಸಿರಲಿಲ್ಲ. ಆದರೆ, ಬಿಬಿಎಂಪಿ ಚುನಾಯಿತ ಕೌನ್ಸಿಲ್ ಅವಧಿ 2020 ಸೆಪ್ಟೆಂಬರ್ 10ಕ್ಕೆ ಮುಗಿದಿತ್ತು. ಚುನಾವಣೆ ನಡೆಸಲು ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್‌ ಮುಖಂಡರಾದ ಎಂ.ಶಿವರಾಜು ಹಾಗೂ ಅಬ್ದುಲ್‌ ವಾಜಿದ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದರ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ವಿಭಾಗೀಯ ಪೀಠವು, ವಾರ್ಡ್‌ವಾರು ಮೀಸಲಾತಿಯ ಅಂತಿಮ ಪಟ್ಟಿ ಪ್ರಕಟವಾದ ಆರು ವಾರಗಳ ಒಳಗೆ ಚುನಾವಣೆ ಪೂರ್ಣಗೊಳಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.  ಆಗ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಡಿ. 10ರಂದು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

2007ರಲ್ಲಿ ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 198ಕ್ಕೆ ಹೆಚ್ಚಿಸಲಾಗಿತ್ತು. ಆ ಬಳಿಕ ನಗರದಲ್ಲಿ ಜನಸಂಖ್ಯೆ ಹೆಚ್ಚಳವಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ವಾರ್ಡ್‌ಗಳ ಸಂಖ್ಯೆ ಹೆಚ್ಚಿಸುವ ಅಗತ್ಯವಿದೆ ಎಂಬುದು ಸರ್ಕಾರದ ವಾದ. ಬೆಂಗಳೂರು ನಗರದ ಸುಧಾರಣೆಗಾಗಿ ವಾರ್ಡ್‌ಗಳ ಸಂಖ್ಯೆಯನ್ನು 198ರಿಂದ 243ಕ್ಕೆ ಹೆಚ್ಚಿಸುವ ಉದ್ದೇಶದಿಂದ ಕೆಎಂಸಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ಸರ್ಕಾರ ಮೇಲ್ಮನವಿ ಅರ್ಜಿಯಲ್ಲಿ ಹೇಳಿದೆ.

ತಕ್ಷಣ ಬಿಬಿಎಂಪಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ