ಪರಾರಿಯಾಗಿರುವ ಸಂಪತ್ ರಾಜ್​ಗೆ ಭಾರೀ ಹಿನ್ನಡೆ, ಎಲ್ಲೇ ಇದ್ರೂ ಪೊಲೀಸರಿಗೆ ಶರಣಾಗಲೇಬೇಕು

ಬೆಂಗಳೂರು: ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಗಲಭೆ ಪ್ರಕರಣದ ಬಳಿಕ ಪರಾರಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್​ಗೆ ಹೈಕೋರ್ಟ್​​ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರೀಗ ಎಲ್ಲೇ ಇದ್ರೂ ಪೊಲೀಸರಿಗೆ ಶರಣಾಗಲೇಬೇಕು ಎಂಬಂತಾಗಿದೆ. ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಗಲಭೆ ಪ್ರಕರಣಕ್ಕೆ ತಡೆಯಾಜ್ಞೆ ಕೋರಿ ಮಾಜಿ ಮೇಯರ್ ಸಂಪತ್ ರಾಜ್ ಅರ್ಜಿ ಸಲ್ಲಿಸಿದ್ದರು. ಆದರೆ ಸಿಸಿಬಿ ಪರ ಎಸ್ ಪಿಪಿ ಪ್ರಸನ್ನಕುಮಾರ್ ಅವರು ಇದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಸಂಪತ್ ರಾಜ್ ಪೊಲೀಸರ ವಿಚಾರಣೆ ತಪ್ಪಿಸಿಕೊಂಡಿದ್ದಾರೆ. ಕೊರೊನಾ ನೆಪ ಹೇಳಿ ಆಸ್ಪತ್ರೆ […]

ಪರಾರಿಯಾಗಿರುವ ಸಂಪತ್ ರಾಜ್​ಗೆ ಭಾರೀ ಹಿನ್ನಡೆ, ಎಲ್ಲೇ ಇದ್ರೂ ಪೊಲೀಸರಿಗೆ ಶರಣಾಗಲೇಬೇಕು
ಸಾಧು ಶ್ರೀನಾಥ್​

Updated on: Nov 04, 2020 | 4:35 PM

ಬೆಂಗಳೂರು: ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಗಲಭೆ ಪ್ರಕರಣದ ಬಳಿಕ ಪರಾರಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್​ಗೆ ಹೈಕೋರ್ಟ್​​ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರೀಗ ಎಲ್ಲೇ ಇದ್ರೂ ಪೊಲೀಸರಿಗೆ ಶರಣಾಗಲೇಬೇಕು ಎಂಬಂತಾಗಿದೆ.

ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಗಲಭೆ ಪ್ರಕರಣಕ್ಕೆ ತಡೆಯಾಜ್ಞೆ ಕೋರಿ ಮಾಜಿ ಮೇಯರ್ ಸಂಪತ್ ರಾಜ್ ಅರ್ಜಿ ಸಲ್ಲಿಸಿದ್ದರು. ಆದರೆ ಸಿಸಿಬಿ ಪರ ಎಸ್ ಪಿಪಿ ಪ್ರಸನ್ನಕುಮಾರ್ ಅವರು ಇದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಸಂಪತ್ ರಾಜ್ ಪೊಲೀಸರ ವಿಚಾರಣೆ ತಪ್ಪಿಸಿಕೊಂಡಿದ್ದಾರೆ. ಕೊರೊನಾ ನೆಪ ಹೇಳಿ ಆಸ್ಪತ್ರೆ ಸೇರಿದ್ದರು. 7 ವಾರ ಕಳೆದರೂ ಆಸ್ಪತ್ರೆಯಿಂದ ಹೊರಗೆ ಬಂದಿರಲಿಲ್ಲ. ಕೊರೊನಾ ಮತ್ತೆ ಬಂದಿದೆ ಎಂದೂ ನೆಪ ಹೇಳಿದ್ದರು.

ಈ ಮಧ್ಯೆ, ಪೊಲೀಸರ ಕಣ್ತಪ್ಪಿಸಿ, ಡಿಸ್ ಚಾರ್ಜ್ ಆಗಿದ್ದಾರೆ. ಈ ಬಗ್ಗೆ ಆಸ್ಪತ್ರೆಯವರು ಪೊಲೀಸರಿಗೆ ಮಾಹಿತಿ ನೀಡಿಲ್ಲ. ಈಗ ಸಂಪತ್ ರಾಜ್ ಪೊಲೀಸರ ಕೈಗೆ ಸಿಗದೇ ತಲೆಮರೆಸಿಕೊಂಡಿದ್ದಾರೆ. ಹಾಗಾಗಿ ಪ್ರಕರಣಕ್ಕೆ ತಡೆ ನೀಡದಂತೆ ಎಸ್ ಪಿಪಿ ಪ್ರಸನ್ನ ಕುಮಾರ್ ಅವರು ಪ್ರತಿ ವಾದ ಮಂಡಿಸಿದರು. ಹಾಗಾಗಿ, ಪ್ರಕರಣಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನ್ಯಾ.ಸೂರಜ್ ಗೋವಿಂದರಾಜ್ ನಿರಾಕರಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us