AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಕೊರೊನಾ ರುದ್ರತಾಂಡವಕ್ಕೆ ಕಾರಣಱರು ಗೊತ್ತಾ?

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮಿತಿ ಮೀರುತ್ತಿದೆ. ನಿತ್ಯ ಎರಡು, ಮೂರು ಸಾವಿರ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಆದರೆ ಸೋಂಕಿತರ ಸಂಖ್ಯೆ ಏರಿಕೆಯಾಗುವುದಕ್ಕೆ ಕಾರಣ ಹೋಮ್ ಐಸೋಲೇಷನ್ ಹಾಗೂ ಬಿಬಿಎಂಪಿಯ ನಿರ್ಲಕ್ಷ್ಯವೇ ಎನ್ನಲಾಗುತ್ತಿದೆ. ಹೋಮ್ ಐಸೋಲೇಷನ್​ನಲ್ಲಿ ಇಲ್ಲ ಸೋಂಕಿತರು: ಒಟ್ಟು 64 ಸಾವಿರ ಸಕ್ರಿಯ ಕೇಸ್​ಗಳಿದ್ದು, ಈ ಪೈಕಿ 37 ಸಾವಿರಕ್ಕೂ ಅಧಿಕ ಸೋಂಕಿತರು ಹೋಮ್‌ ಐಸೋಲೇಷನ್​ನಲ್ಲಿದ್ದಾರೆ. ಇದುವರೆಗೂ 9,39,229 ಜನ ಪ್ರೈಮರಿ ಕಾಂಟ್ಯಾಕ್ಟ್, 11,00,888 ಜನ ಸೆಕೆಂಡರಿ ಕಾಂಟ್ಯಾಕ್ಟ್ ಗಳಿದ್ದಾರೆ. ಆದರೆ ಸೋಂಕಿತರಿಗೆ ಮೂಗುದಾರ […]

ರಾಜಧಾನಿಯಲ್ಲಿ ಕೊರೊನಾ ರುದ್ರತಾಂಡವಕ್ಕೆ ಕಾರಣಱರು ಗೊತ್ತಾ?
ಆಯೇಷಾ ಬಾನು
|

Updated on: Oct 22, 2020 | 10:19 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮಿತಿ ಮೀರುತ್ತಿದೆ. ನಿತ್ಯ ಎರಡು, ಮೂರು ಸಾವಿರ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಆದರೆ ಸೋಂಕಿತರ ಸಂಖ್ಯೆ ಏರಿಕೆಯಾಗುವುದಕ್ಕೆ ಕಾರಣ ಹೋಮ್ ಐಸೋಲೇಷನ್ ಹಾಗೂ ಬಿಬಿಎಂಪಿಯ ನಿರ್ಲಕ್ಷ್ಯವೇ ಎನ್ನಲಾಗುತ್ತಿದೆ.

ಹೋಮ್ ಐಸೋಲೇಷನ್​ನಲ್ಲಿ ಇಲ್ಲ ಸೋಂಕಿತರು: ಒಟ್ಟು 64 ಸಾವಿರ ಸಕ್ರಿಯ ಕೇಸ್​ಗಳಿದ್ದು, ಈ ಪೈಕಿ 37 ಸಾವಿರಕ್ಕೂ ಅಧಿಕ ಸೋಂಕಿತರು ಹೋಮ್‌ ಐಸೋಲೇಷನ್​ನಲ್ಲಿದ್ದಾರೆ. ಇದುವರೆಗೂ 9,39,229 ಜನ ಪ್ರೈಮರಿ ಕಾಂಟ್ಯಾಕ್ಟ್, 11,00,888 ಜನ ಸೆಕೆಂಡರಿ ಕಾಂಟ್ಯಾಕ್ಟ್ ಗಳಿದ್ದಾರೆ. ಆದರೆ ಸೋಂಕಿತರಿಗೆ ಮೂಗುದಾರ ಹಾಕುವವರೆ ಇಲ್ಲದಂತಾಗಿದೆ. ಸೋಂಕಿತರ‌‌‌ನ್ನ ಮಾನಿಟರ್ ಮಾಡುವಲ್ಲಿ ಬಿಬಿಎಂಪಿ ವಿಫಲವಾಗಿದೆ. ಸೋಂಕಿತರು ಬಿಂದಾಸಾಗಿ ಓಡಾಡಿಕೊಂಡಿದ್ದಾರೆ. ಸಾರ್ವಜನಿಕ ವಲಯದಲ್ಲಿ, ಮಾರ್ಕೆಟ್, ಬಿಎಂಟಿಸಿ ಬಸ್, ಮಾಲ್ ಅಂತ ಸುತ್ತಾಡುತ್ತಿದ್ದಾರೆ. ಹಿಂದೆ ಕೈಗೆ ಸಿಲ್ ಹಾಕಿ ಸೋಂಕಿತರನ್ನ ಗುರುತು ಮಾಡ್ತಿದ್ರು. ಆದರೆ ಈಗ ಸೋಂಕಿತರಿಗೆ ಸೀಲ್ ಹಾಕದ ಕಾರಣ ಎಲ್ಲೆಂದರಲ್ಲಿ ಓಡಾಡುತ್ತಿದ್ದಾರೆ. ಬಿಬಿಎಂಪಿ ಕರೆ ಮಾಡಿದ್ರೆ ಮನೆಯಲ್ಲಿದ್ದೇವೆಂದು ಸುಳ್ಳು ಮಾಹಿತಿ ನೀಡ್ತಿದ್ದಾರೆ. ಸೋಂಕಿತರ ಬೇಕಾಬಿಟ್ಟಿ ಓಡಾಟದಿಂದ ಕೊರೊನಾ ಹರಡುತ್ತಿದೆ.

ಹೋಂ​ ಐಸೋಲೇಷನ್​ನಲ್ಲಿರೋ ಬಗ್ಗೆ ಬಿಬಿಎಂಪಿ ನಿರ್ಲಕ್ಷ್ಯವಹಿಸುತ್ತಿದೆ. ಹೋಮ್​ ಐಸೋಲೇಷನ್​ನಲ್ಲಿರೋರ ಮಾನಿಟರಿಂಗ್ ಇಲ್ಲ. ಖುದ್ದು ಸಿಬ್ಬಂದಿ ಹಾಜರಾಗಿ ಮಾಹಿತಿಯನ್ನ ಪಡೆಯಬೇಕಿತ್ತು. ಆದರೆ ಕೇವಲ ಕರೆ ಮಾಡಿ ಮಾಹಿತಿ ಪಡೆಯುತ್ತಿದೆ. ಪ್ರತಿ ಐಸೋಲೇಷನ್​​ ಇದ್ದವರ ಮಾಹಿತಿ ಸಂಗ್ರಹದಲ್ಲಿ ವಿಫಲವಾಗಿದೆ. ಬಿಬಿಎಂಪಿ ಪ್ರಕಾರ 37 ಸಾವಿರ ಸೋಂಕಿತರು ಐಸೋಲೇಷನ್​ನಲ್ಲಿದ್ದಾರೆ. ಆದರೆ ಕೆಲವರು ಮಾತ್ರ ಐಸೋಲೇಷನ್​ನಲ್ಲಿದ್ದಾರೆ. ಉಳಿದವರ ಕಥೆ ಗೊತ್ತಿಲ್ಲ.

ಬೆಂಗಳೂರಿನಲ್ಲಿ ಪತ್ತೆಯಾದ ಬಹುತೇಕ ಸೋಂಕಿತರು ನಾಪತ್ತೆ: ಇನ್ನು ಸಂಪರ್ಕಕ್ಕೆ ಸಿಗದ ಐದು ಸಾವಿರ ಕೊರೊನಾ ಸೋಂಕಿತರಿದ್ದಾರೆ. ಅವರೆಲ್ಲ ತಪ್ಪು ವಿಳಾಸ, ಮೊಬೈಲ್ ಸ್ವಿಚ್​ಆಫ್ ಮಾಡಿಕೊಂಡಿದ್ದಾರೆ. ಈ ಸೋಂಕಿತರು ಪೊಲೀಸರ ನೆರವು ಪಡೆದರೂ ಪತ್ತೆಯಾಗುತ್ತಿಲ್ಲ. ಕೆಲ ಸೋಂಕಿತರು ದಸರಾ, ವೀಕ್​ ಎಂಟ್​ ಪಾರ್ಟಿಗಳಲ್ಲಿ ಭಾಗಿಯಾಗುತ್ತಿರುವ ಶಂಕೆ ಇದೆ. ಐಸೋಲೇಷನ್​ನಲ್ಲಿರುವವರ ಮೇಲೆ ನಿಗಾ ಇಡದೆ ಪಾಲಿಕೆ ನಿರ್ಲಕ್ಷ್ಯವಹಿಸುತ್ತಿದೆ. ಇದರಿಂದ ವ್ಯಾಪಕವಾಗಿ ಸೋಂಕು ಹರಡುತ್ತಿದೆ ಎಂದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ