14000 ಮಾಲೀಕರಿಗೆ BBMP ನೋಟಿಸ್, ಕನ್ನಡ ನಿರ್ಲಕ್ಷ್ಯಿಸಿದರೆ ಅಂಗಡಿ ಬಂದ್

ಬೆಂಗಳೂರು: ನಾಮಫಲಕದಲ್ಲಿ ಕನ್ನಡ ನಿರ್ಲಕ್ಷ್ಯಿಸಿದ 14,000 ಅಂಗಡಿ ಮಾಲೀಕರಿಗೆ ಬಿಬಿಎಂಪಿ ನೋಟಿಸ್ ನೀಡಿದೆ. ನಾಮಫಲಕಗಳಲ್ಲಿ ಶೇಕಡಾ 60ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿ ಮಾಡಬೇಕು ಎಂದು ಬಿಬಿಎಂಪಿ ಆದೇಶಿಸಿತ್ತು. ಅಲ್ಲದೆ ನವೆಂಬರ್ ಅಂತ್ಯದೊಳಗೆ ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಹೇಳಿತ್ತು. ಆದರೆ ಕೆಲವು ಹೋಟೆಲ್, ಮಾಲ್ ಮಾಲೀಕರು ಆದೇಶವನ್ನು ಪಾಲಿಸಿಲ್ಲ. ಹಾಗಾಗಿ ಬಿಬಿಎಂಪಿ ಆದೇಶ ಪಾಲಿಸದ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಿದೆ. ಇನೈದು ದಿನದಲ್ಲಿ ಕನ್ನಡ ಬೋರ್ಡ್ ಹಾಕದಿದ್ದರೆ ಉದ್ದಿಮೆ ಪರವಾನಗಿ ರದ್ದು ಮಾಡಿ, ಅಂಗಡಿಗಳನ್ನು ಸಹ ಮುಚ್ಚುವುದಾಗಿ […]

14000 ಮಾಲೀಕರಿಗೆ BBMP ನೋಟಿಸ್, ಕನ್ನಡ ನಿರ್ಲಕ್ಷ್ಯಿಸಿದರೆ ಅಂಗಡಿ ಬಂದ್
ಸಾಧು ಶ್ರೀನಾಥ್​

Updated on: Nov 22, 2019 | 11:24 AM

ಬೆಂಗಳೂರು: ನಾಮಫಲಕದಲ್ಲಿ ಕನ್ನಡ ನಿರ್ಲಕ್ಷ್ಯಿಸಿದ 14,000 ಅಂಗಡಿ ಮಾಲೀಕರಿಗೆ ಬಿಬಿಎಂಪಿ ನೋಟಿಸ್ ನೀಡಿದೆ. ನಾಮಫಲಕಗಳಲ್ಲಿ ಶೇಕಡಾ 60ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿ ಮಾಡಬೇಕು ಎಂದು ಬಿಬಿಎಂಪಿ ಆದೇಶಿಸಿತ್ತು. ಅಲ್ಲದೆ ನವೆಂಬರ್ ಅಂತ್ಯದೊಳಗೆ ಕನ್ನಡ ನಾಮಫಲಕ ಅಳವಡಿಸಬೇಕು ಎಂದು ಹೇಳಿತ್ತು.

ಆದರೆ ಕೆಲವು ಹೋಟೆಲ್, ಮಾಲ್ ಮಾಲೀಕರು ಆದೇಶವನ್ನು ಪಾಲಿಸಿಲ್ಲ. ಹಾಗಾಗಿ ಬಿಬಿಎಂಪಿ ಆದೇಶ ಪಾಲಿಸದ ಅಂಗಡಿ ಮಾಲೀಕರಿಗೆ ನೋಟಿಸ್ ನೀಡಿದೆ. ಇನೈದು ದಿನದಲ್ಲಿ ಕನ್ನಡ ಬೋರ್ಡ್ ಹಾಕದಿದ್ದರೆ ಉದ್ದಿಮೆ ಪರವಾನಗಿ ರದ್ದು ಮಾಡಿ, ಅಂಗಡಿಗಳನ್ನು ಸಹ ಮುಚ್ಚುವುದಾಗಿ ಎಚ್ಚರಿಕೆ ನೀಡಿದ್ದೇವೆ ಎಂದು ಮೇಯರ್ ಗೌತಮ್‌ಕುಮಾರ್ ತಿಳಿಸಿದ್ದಾರೆ.

Published On - 8:08 am, Fri, 22 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us