AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಮಕ್​ ನೀಡಿ ಎಸ್ಕೇಪ್​ ಆಗ್ತಿದ್ದ ತ್ರಿಬಲ್​ ರೈಡಿಂಗ್ ಪುಂಡರ ಬೆನ್ನಟ್ಟಿದ BBMP Marshals

ಬೆಂಗಳೂರು: ದೇಶಾದ್ಯಂತ ಕೊರೊನಾ ತನ್ನ ಅಟ್ಟಹಾಸವನ್ನ ಮುಂದುವರಿಸಿದೆ. ಹಾಗಾಗಿ ಈ ಮಹಾಮಾರಿ ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರವು ಎಲ್ಲರೂ ಮಾಸ್ಕ್​ ಧರಿಸಿಕೊಂಡು ಓಡಾಡಬೇಕೆಂದು ನಿಯಮ ಕೂಡ ಜಾರಿ ಮಾಡಿದೆ. ಹಾಗಿದ್ರೂ ಕೂಡ ಕೆಲವರು ಇದಕ್ಕೆ ಡೋಂಟ್​ ಕೇರ್​ ಅನ್ನುತ್ತಾ ಓಡಾಡ್ತಿದ್ದಾರೆ. ಹೀಗಾಗಿ ದೇಶದೆಲ್ಲೆಡೆ ಇಂಥವರನ್ನು ಹಿಡಿದು ದಂಡ ವಿಧಿಸಲು ಆಯಾ ರಾಜ್ಯ ಸರ್ಕಾರಗಳು ಮುಂದಾಗಿವೆ. ಆಶ್ಚರ್ಯವೆಂದರೆ ಕೆಲವು ರಾಜ್ಯಗಳಲ್ಲಿ ಜಮೆಯಾದ ದಂಡದ ಮೊತ್ತ ಕೋಟ್ಯಂತರ ರೂಪಾಯಿಗಳಾಗಿವೆ. ಉದಾಹರಣೆಗೆ ಚಂಡೀಗಢದಲ್ಲಿ 3 ಕೋಟಿ, ಓಡಿಶಾದಲ್ಲಿ 1 ಕೋಟಿ ರೂಪಾಯಿಯಷ್ಟು […]

ಚಮಕ್​ ನೀಡಿ ಎಸ್ಕೇಪ್​ ಆಗ್ತಿದ್ದ ತ್ರಿಬಲ್​ ರೈಡಿಂಗ್ ಪುಂಡರ ಬೆನ್ನಟ್ಟಿದ BBMP Marshals
ಸಾಧು ಶ್ರೀನಾಥ್​
| Edited By: |

Updated on:Jun 15, 2020 | 4:20 PM

Share

ಬೆಂಗಳೂರು: ದೇಶಾದ್ಯಂತ ಕೊರೊನಾ ತನ್ನ ಅಟ್ಟಹಾಸವನ್ನ ಮುಂದುವರಿಸಿದೆ. ಹಾಗಾಗಿ ಈ ಮಹಾಮಾರಿ ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರವು ಎಲ್ಲರೂ ಮಾಸ್ಕ್​ ಧರಿಸಿಕೊಂಡು ಓಡಾಡಬೇಕೆಂದು ನಿಯಮ ಕೂಡ ಜಾರಿ ಮಾಡಿದೆ. ಹಾಗಿದ್ರೂ ಕೂಡ ಕೆಲವರು ಇದಕ್ಕೆ ಡೋಂಟ್​ ಕೇರ್​ ಅನ್ನುತ್ತಾ ಓಡಾಡ್ತಿದ್ದಾರೆ. ಹೀಗಾಗಿ ದೇಶದೆಲ್ಲೆಡೆ ಇಂಥವರನ್ನು ಹಿಡಿದು ದಂಡ ವಿಧಿಸಲು ಆಯಾ ರಾಜ್ಯ ಸರ್ಕಾರಗಳು ಮುಂದಾಗಿವೆ. ಆಶ್ಚರ್ಯವೆಂದರೆ ಕೆಲವು ರಾಜ್ಯಗಳಲ್ಲಿ ಜಮೆಯಾದ ದಂಡದ ಮೊತ್ತ ಕೋಟ್ಯಂತರ ರೂಪಾಯಿಗಳಾಗಿವೆ. ಉದಾಹರಣೆಗೆ ಚಂಡೀಗಢದಲ್ಲಿ 3 ಕೋಟಿ, ಓಡಿಶಾದಲ್ಲಿ 1 ಕೋಟಿ ರೂಪಾಯಿಯಷ್ಟು ದಂಡ ಪಾವತಿಸಿರುವ ಬಗ್ಗೆ ವರದಿಯಾಗಿದೆ.

ತ್ರಿಬಲ್ ರೈಡಿಂಗ್ ಮಾಡ್ತಿದ್ದ ಪುಂಡರ ಹಿಂದೆ ಚೇಸ್​! ಬೆಂಗಳೂರಿನಲ್ಲೂ ನಮ್ಮ ಬಿಬಿಎಂಪಿ ಮಾರ್ಷಲ್​ಗಳು ಮಾಸ್ಕ್​ ಹಾಕದವರನ್ನು ಹಿಡಿದು ದಂಡ ವಿಧಿಸುತ್ತಿದ್ದಾರೆ. ಹಾಗೆಯೇ ಇಂದೂ ಸಹ ಬ್ಯಾರಿಕೇಡ್​ ಹಾಕಿ ವಾಹನಗಳನ್ನು ತಡೆದು ಪರಿಶೀಲನೆ ನಡೆಸುತ್ತಿದ್ದರು. ಇದೆ ವೇಳೆ ಬೈಕ್​ನಲ್ಲಿ ತ್ರಿಬಲ್ ರೈಡಿಂಗ್ ಮಾಡುತ್ತಾ ಮೂವರು ಪುಂಡ ಮಹಾಶಯರು ಅಲ್ಲಿಗೆ ಬಂದರು. ಮುಂದಕ್ಕೆ ಸಾಗಿದರೆ ನಮ್ಮನೂ ಹಿಡಿದು ಫೈನ್ ಜಡೀತಾರೆ ಅಂತಾ ಯೋಚಿಸಿ ಹೇಗಾದ್ರೂ ಮಾಡಿ ತಪ್ಪಿಸಿಕೊಳ್ಬೇಕು ಅಂತಾ ಅಲ್ಲೇ ಪ್ಲಾನ್​ ಮಾಡಿದ್ರು. ಬ್ಯಾರಿಕೇಡ್​ ಬಳಿ ಬಂದ ಪುಂಡರನ್ನು ತಡೆಯಲು ಮುಂದಾದ ಮಾರ್ಷಲ್​ಗಳಿಗೆ ಚಮಕ್​ ಕೊಟ್ಟು ಎಸ್ಕೇಪ್​ ಆದರು. ಆದರೆ ತಪ್ಪಿಸಿಕೊಂಡ್ವಿ ಅಂತಾ ಅಂದುಕೊಂಡವರಿಗೆ ಶಾಕ್​ ಕಾದಿತ್ತು. ತಕ್ಷಣವೇ ಮಾರ್ಷಲ್​ಗಳು ಅವರನ್ನು ಬೆನ್ನಟ್ಟಿ ಹಿಡಿದರು.  

Published On - 1:37 pm, Mon, 15 June 20

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!