AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರಾನಾ ಟೆಸ್ಟ್ ಹೆಸರಲ್ಲಿ ಗೂಂಡಾಗಿರಿ, ಪಾಲಿಕೆ ಸಿಬ್ಬಂದಿ ದರ್ಪಾಧಿಕಾರಕ್ಕೆ ಕೆರಳಿದ ಬೆಂಗಳೂರು ಜನ

ಬೆಂಗಳೂರು: ಮಹಾಮಾರಿ ಕೊರೊನಾ ಈಗಾಗಲೇ ಜನರಿಗೆ ನರಕದ ದರ್ಶನ ಮಾಡಿಸುತ್ತಿದೆ. ಈ ನಡುವೆ BBMP ಸಿಬ್ಬಂದಿ ಕೊರೊನಾ ಟೆಸ್ಟಿಂಗ್ ಹೆಸರಲ್ಲಿ ದರ್ಪ , ದೌರ್ಜನ್ಯವೆಸಗುತ್ತಿದೆ. ಕೊರೊನಾ ಟೆಸ್ಟ್ ಮಾಡಿಸೋಕೆ ಒಪ್ಪಲಿಲ್ಲ ಅಂದ್ರೆ ದಂಡವಲ್ಲ ಬದಲಿಗೆ ಯಾಮಾರಿದ್ರೆ ಏಟು ಬೀಳುತ್ತೆ. ಬೆಂಗಳೂರಿನಲ್ಲಿ ಜನರನ್ನು ಹೆದರಿಸಿ BBMP ಸಿಬ್ಬಂದಿ ಟೆಸ್ಟ್ ಮಾಡ್ತಿದ್ದಾರೆ. ಬಿಬಿಎಂಪಿ ಸಿಬ್ಬಂದಿಯ ಈ ನಡೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. HSR ಲೇಔಟ್​ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗ್ತಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ BBMP ಸಿಬ್ಬಂದಿ ಕಿರಿಕಿರಿ ಮಾಡಿದ್ದಾರೆ. […]

ಕೊರಾನಾ ಟೆಸ್ಟ್ ಹೆಸರಲ್ಲಿ ಗೂಂಡಾಗಿರಿ, ಪಾಲಿಕೆ ಸಿಬ್ಬಂದಿ ದರ್ಪಾಧಿಕಾರಕ್ಕೆ ಕೆರಳಿದ ಬೆಂಗಳೂರು ಜನ
ಆಯೇಷಾ ಬಾನು
|

Updated on: Oct 11, 2020 | 11:22 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಈಗಾಗಲೇ ಜನರಿಗೆ ನರಕದ ದರ್ಶನ ಮಾಡಿಸುತ್ತಿದೆ. ಈ ನಡುವೆ BBMP ಸಿಬ್ಬಂದಿ ಕೊರೊನಾ ಟೆಸ್ಟಿಂಗ್ ಹೆಸರಲ್ಲಿ ದರ್ಪ , ದೌರ್ಜನ್ಯವೆಸಗುತ್ತಿದೆ. ಕೊರೊನಾ ಟೆಸ್ಟ್ ಮಾಡಿಸೋಕೆ ಒಪ್ಪಲಿಲ್ಲ ಅಂದ್ರೆ ದಂಡವಲ್ಲ ಬದಲಿಗೆ ಯಾಮಾರಿದ್ರೆ ಏಟು ಬೀಳುತ್ತೆ. ಬೆಂಗಳೂರಿನಲ್ಲಿ ಜನರನ್ನು ಹೆದರಿಸಿ BBMP ಸಿಬ್ಬಂದಿ ಟೆಸ್ಟ್ ಮಾಡ್ತಿದ್ದಾರೆ.

ಬಿಬಿಎಂಪಿ ಸಿಬ್ಬಂದಿಯ ಈ ನಡೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. HSR ಲೇಔಟ್​ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗ್ತಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ BBMP ಸಿಬ್ಬಂದಿ ಕಿರಿಕಿರಿ ಮಾಡಿದ್ದಾರೆ. ಅದಕ್ಕೆ 5 ನಿಮಿಷ ಸಮಯ ಕೊಡಿ ಎಂದು ವಾಹನ ಚಾಲಕ ಕೇಳಿಕೊಂಡ್ರೂ ಅವಕಾಶ ಕೊಟ್ಟಿಲ್ಲವಂತೆ. ನಂತರ ಇವರ ನಡುವೆ ಜಗಳ ಶುರುವಾಗಿ ಪಾಲಿಕೆ ಸಿಬ್ಬಂದಿ ಶರ್ಟ್ ಹರಿದು ವಾಹನದ ಕೀ ಕಸಿದುಕೊಂಡು ದೌರ್ಜನ್ಯ ಮಾಡಿದ್ದಾರೆ ಅಂತಾ ನೊಂದವರು ಅಳಲು ತೋಡಿಕೊಂಡಿದ್ದಾರೆ.

ನಾನು ಈಗಾಗಲೇ ಟೆಸ್ಟ್ ಮಾಡಿಸಿಕೊಂಡಿದ್ದೇನೆ ನೆಗಟಿವ್ ಬಂದಿದೆ ಅಂದರು ಕೇಳದೇ ಹಲ್ಲೆ ಮಾಡಿದ್ದಾರೆ. ಈ ರೀತಿ ದೌರ್ಜನ್ಯದಿಂದ ಟೆಸ್ಟ್ ಮಾಡಿಸುವುದು ಸರಿಯಲ್ಲ. ನಮಗೆ ತುರ್ತು ಕೆಲಸವಿದೆ ಐದು ನಿಮಿಷ ಸಮಯ ಕೊಡಿ ಅಂದರು ಕೊಡಲಿಲ್ಲ. ಗುಂಡಾಗಳಂತೆ ನಾಲ್ಕೈದು ಸಿಬ್ಬಂದಿ ದೌರ್ಜನ್ಯ ನಡೆಸಿದ್ದಾರೆ. ಟೆಸ್ಟ್ ರಿಪೋರ್ಟ್ ಪಾಸಿಟಿವ್ ಬಂದ್ರೂ ಬೆಡ್ ಸೌಲಭ್ಯವನ್ನೂ ಸಹ ಮಾಡಲ್ಲ. ಆದ್ರೆ ಸುಮ್ಮನೆ ಟೆಸ್ಟಿಂಗ್ ಅಂತಾ ಚೆನ್ನಾಗಿದ್ದವರ ಮೇಲೆ ಗದಾಪ್ರಹಾರ ಮಾಡ್ತಾರೆ. ಈ ರೀತಿ ದೌರ್ಜನ್ಯದಿಂದ ಟೆಸ್ಟ್ ಮಾಡಿಸುವುದು ಎಷ್ಟರಮಟ್ಟಿಗೆ ಸರಿ ಎಂದು ದೌರ್ಜನ್ಯಕ್ಕೆ ಒಳಗಾದವರು ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಇನ್ನು ಸಾರ್ವಜನಿಕರ ಮೇಲಿನ ದೌರ್ಜನ್ಯದ ವಿಡಿಯೋ ಟಿವಿ9 ಗೆ ಲಭ್ಯವಾಗಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ