AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರಾನಾ ಟೆಸ್ಟ್ ಹೆಸರಲ್ಲಿ ಗೂಂಡಾಗಿರಿ, ಪಾಲಿಕೆ ಸಿಬ್ಬಂದಿ ದರ್ಪಾಧಿಕಾರಕ್ಕೆ ಕೆರಳಿದ ಬೆಂಗಳೂರು ಜನ

ಬೆಂಗಳೂರು: ಮಹಾಮಾರಿ ಕೊರೊನಾ ಈಗಾಗಲೇ ಜನರಿಗೆ ನರಕದ ದರ್ಶನ ಮಾಡಿಸುತ್ತಿದೆ. ಈ ನಡುವೆ BBMP ಸಿಬ್ಬಂದಿ ಕೊರೊನಾ ಟೆಸ್ಟಿಂಗ್ ಹೆಸರಲ್ಲಿ ದರ್ಪ , ದೌರ್ಜನ್ಯವೆಸಗುತ್ತಿದೆ. ಕೊರೊನಾ ಟೆಸ್ಟ್ ಮಾಡಿಸೋಕೆ ಒಪ್ಪಲಿಲ್ಲ ಅಂದ್ರೆ ದಂಡವಲ್ಲ ಬದಲಿಗೆ ಯಾಮಾರಿದ್ರೆ ಏಟು ಬೀಳುತ್ತೆ. ಬೆಂಗಳೂರಿನಲ್ಲಿ ಜನರನ್ನು ಹೆದರಿಸಿ BBMP ಸಿಬ್ಬಂದಿ ಟೆಸ್ಟ್ ಮಾಡ್ತಿದ್ದಾರೆ. ಬಿಬಿಎಂಪಿ ಸಿಬ್ಬಂದಿಯ ಈ ನಡೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. HSR ಲೇಔಟ್​ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗ್ತಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ BBMP ಸಿಬ್ಬಂದಿ ಕಿರಿಕಿರಿ ಮಾಡಿದ್ದಾರೆ. […]

ಕೊರಾನಾ ಟೆಸ್ಟ್ ಹೆಸರಲ್ಲಿ ಗೂಂಡಾಗಿರಿ, ಪಾಲಿಕೆ ಸಿಬ್ಬಂದಿ ದರ್ಪಾಧಿಕಾರಕ್ಕೆ ಕೆರಳಿದ ಬೆಂಗಳೂರು ಜನ
ಆಯೇಷಾ ಬಾನು
|

Updated on: Oct 11, 2020 | 11:22 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಈಗಾಗಲೇ ಜನರಿಗೆ ನರಕದ ದರ್ಶನ ಮಾಡಿಸುತ್ತಿದೆ. ಈ ನಡುವೆ BBMP ಸಿಬ್ಬಂದಿ ಕೊರೊನಾ ಟೆಸ್ಟಿಂಗ್ ಹೆಸರಲ್ಲಿ ದರ್ಪ , ದೌರ್ಜನ್ಯವೆಸಗುತ್ತಿದೆ. ಕೊರೊನಾ ಟೆಸ್ಟ್ ಮಾಡಿಸೋಕೆ ಒಪ್ಪಲಿಲ್ಲ ಅಂದ್ರೆ ದಂಡವಲ್ಲ ಬದಲಿಗೆ ಯಾಮಾರಿದ್ರೆ ಏಟು ಬೀಳುತ್ತೆ. ಬೆಂಗಳೂರಿನಲ್ಲಿ ಜನರನ್ನು ಹೆದರಿಸಿ BBMP ಸಿಬ್ಬಂದಿ ಟೆಸ್ಟ್ ಮಾಡ್ತಿದ್ದಾರೆ.

ಬಿಬಿಎಂಪಿ ಸಿಬ್ಬಂದಿಯ ಈ ನಡೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. HSR ಲೇಔಟ್​ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗ್ತಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ BBMP ಸಿಬ್ಬಂದಿ ಕಿರಿಕಿರಿ ಮಾಡಿದ್ದಾರೆ. ಅದಕ್ಕೆ 5 ನಿಮಿಷ ಸಮಯ ಕೊಡಿ ಎಂದು ವಾಹನ ಚಾಲಕ ಕೇಳಿಕೊಂಡ್ರೂ ಅವಕಾಶ ಕೊಟ್ಟಿಲ್ಲವಂತೆ. ನಂತರ ಇವರ ನಡುವೆ ಜಗಳ ಶುರುವಾಗಿ ಪಾಲಿಕೆ ಸಿಬ್ಬಂದಿ ಶರ್ಟ್ ಹರಿದು ವಾಹನದ ಕೀ ಕಸಿದುಕೊಂಡು ದೌರ್ಜನ್ಯ ಮಾಡಿದ್ದಾರೆ ಅಂತಾ ನೊಂದವರು ಅಳಲು ತೋಡಿಕೊಂಡಿದ್ದಾರೆ.

ನಾನು ಈಗಾಗಲೇ ಟೆಸ್ಟ್ ಮಾಡಿಸಿಕೊಂಡಿದ್ದೇನೆ ನೆಗಟಿವ್ ಬಂದಿದೆ ಅಂದರು ಕೇಳದೇ ಹಲ್ಲೆ ಮಾಡಿದ್ದಾರೆ. ಈ ರೀತಿ ದೌರ್ಜನ್ಯದಿಂದ ಟೆಸ್ಟ್ ಮಾಡಿಸುವುದು ಸರಿಯಲ್ಲ. ನಮಗೆ ತುರ್ತು ಕೆಲಸವಿದೆ ಐದು ನಿಮಿಷ ಸಮಯ ಕೊಡಿ ಅಂದರು ಕೊಡಲಿಲ್ಲ. ಗುಂಡಾಗಳಂತೆ ನಾಲ್ಕೈದು ಸಿಬ್ಬಂದಿ ದೌರ್ಜನ್ಯ ನಡೆಸಿದ್ದಾರೆ. ಟೆಸ್ಟ್ ರಿಪೋರ್ಟ್ ಪಾಸಿಟಿವ್ ಬಂದ್ರೂ ಬೆಡ್ ಸೌಲಭ್ಯವನ್ನೂ ಸಹ ಮಾಡಲ್ಲ. ಆದ್ರೆ ಸುಮ್ಮನೆ ಟೆಸ್ಟಿಂಗ್ ಅಂತಾ ಚೆನ್ನಾಗಿದ್ದವರ ಮೇಲೆ ಗದಾಪ್ರಹಾರ ಮಾಡ್ತಾರೆ. ಈ ರೀತಿ ದೌರ್ಜನ್ಯದಿಂದ ಟೆಸ್ಟ್ ಮಾಡಿಸುವುದು ಎಷ್ಟರಮಟ್ಟಿಗೆ ಸರಿ ಎಂದು ದೌರ್ಜನ್ಯಕ್ಕೆ ಒಳಗಾದವರು ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಇನ್ನು ಸಾರ್ವಜನಿಕರ ಮೇಲಿನ ದೌರ್ಜನ್ಯದ ವಿಡಿಯೋ ಟಿವಿ9 ಗೆ ಲಭ್ಯವಾಗಿದೆ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ