AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಿ ಒತ್ತುವರಿ ಲೆಕ್ಕಶೋಧ: ಸರ್ವೆ ಅಧಿಕಾರಿಗಳಿಗೆ ತಡೆ!

ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ ಹಾಗೂ ಮಂತ್ರಿ ಅಪಾರ್ಟ್​ಮೆಂಟ್​ ವಿರುದ್ಧ ಸರ್ಕಾರಿ ಜಾಗ ಒತ್ತುವರಿ ಆರೋಪ ಕೇಳಿಬಂದಿದ್ದು, ಒತ್ತುವರಿ ಜಾಗ ಗುರುತಿಸಲು ಸರ್ವೆಗಾಗಿ ಅಧಿಕಾರಿಗಳು ಬಂದಿದ್ದಾರೆ. ಆದ್ರೆ, ಮಂತ್ರಿಮಾಲ್​ ಸುತ್ತಮುತ್ತ ಸರ್ವೆಗಾಗಿ ಆಗಮಿಸಿದ್ದ ಅಧಿಕಾರಿಗಳ ಪ್ರವೇಶಕ್ಕೆ ತಡೆ ನೀಡಲಾಗಿದೆ. ಸರ್ವೆ ಅಧಿಕಾರಿಗಳಿಗೆ ತಡೆ: ಸಿಟಿ ಸರ್ವೆ ಮೇಲ್ವಿಚಾರಕ ರಂಗಯ್ಯ ನೇತೃತ್ವದ ಟೀಂ ಸರ್ವೆ ಕಾರ್ಯಕ್ಕೆ ಆಗಮಿಸಿದ್ದಾರೆ. ಸರ್ವೆಗೂ ಮುನ್ನ ಬಿಬಿಎಂಪಿ ಅಧಿಕಾರಿಗಳು ತಿಳುವಳಿಕೆ ನೋಟಿಸ್ ನೀಡಿದ್ದಾರೆ. ಆದ್ರೆ ಮಂತ್ರಿ ಮಾಲ್ ಆಡಳಿತ ಮಂಡಳಿ ನೋಟಿಸ್ ಸ್ವೀಕರಿಸಿಲ್ಲ. ಸರ್ವೆ ಅಧಿಕಾರಿಗಳಿಗೆ […]

ಮಂತ್ರಿ ಒತ್ತುವರಿ ಲೆಕ್ಕಶೋಧ: ಸರ್ವೆ ಅಧಿಕಾರಿಗಳಿಗೆ ತಡೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 28, 2020 | 1:45 PM

Share

ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ ಹಾಗೂ ಮಂತ್ರಿ ಅಪಾರ್ಟ್​ಮೆಂಟ್​ ವಿರುದ್ಧ ಸರ್ಕಾರಿ ಜಾಗ ಒತ್ತುವರಿ ಆರೋಪ ಕೇಳಿಬಂದಿದ್ದು, ಒತ್ತುವರಿ ಜಾಗ ಗುರುತಿಸಲು ಸರ್ವೆಗಾಗಿ ಅಧಿಕಾರಿಗಳು ಬಂದಿದ್ದಾರೆ. ಆದ್ರೆ, ಮಂತ್ರಿಮಾಲ್​ ಸುತ್ತಮುತ್ತ ಸರ್ವೆಗಾಗಿ ಆಗಮಿಸಿದ್ದ ಅಧಿಕಾರಿಗಳ ಪ್ರವೇಶಕ್ಕೆ ತಡೆ ನೀಡಲಾಗಿದೆ.

ಸರ್ವೆ ಅಧಿಕಾರಿಗಳಿಗೆ ತಡೆ: ಸಿಟಿ ಸರ್ವೆ ಮೇಲ್ವಿಚಾರಕ ರಂಗಯ್ಯ ನೇತೃತ್ವದ ಟೀಂ ಸರ್ವೆ ಕಾರ್ಯಕ್ಕೆ ಆಗಮಿಸಿದ್ದಾರೆ. ಸರ್ವೆಗೂ ಮುನ್ನ ಬಿಬಿಎಂಪಿ ಅಧಿಕಾರಿಗಳು ತಿಳುವಳಿಕೆ ನೋಟಿಸ್ ನೀಡಿದ್ದಾರೆ. ಆದ್ರೆ ಮಂತ್ರಿ ಮಾಲ್ ಆಡಳಿತ ಮಂಡಳಿ ನೋಟಿಸ್ ಸ್ವೀಕರಿಸಿಲ್ಲ. ಸರ್ವೆ ಅಧಿಕಾರಿಗಳಿಗೆ ಗೇಟ್ ಸಹ ತೆಗೆಯದೆ ಮಾಲ್ ಸೆಕ್ಯುರಿಟಿಗಳು ತಡೆ ನೀಡಿದ್ದಾರೆ.

ಅಪಾರ್ಟ್‌ಮೆಂಟ್‌ನಿಂದ ಸರ್ಕಾರಿ ಜಾಗ ಒತ್ತುವರಿ ಆರೋಪ ಹಿನ್ನೆಲೆಯಲ್ಲಿ ಜಾಗ ವಶಕ್ಕೆ ಪಡೆದುಕೊಳ್ಳಲು ಕಳೆದ ತಿಂಗಳು ಪ್ರಾದೇಶಿಕ ಆಯುಕ್ತರು, ಸಕ್ಷಮ ಪ್ರಾಧಿಕಾರ ನ್ಯಾಯಾಲಯ ಬಿಬಿಎಂಪಿಗೆ ಆದೇಶಿಸಿತ್ತು. ಸರ್ಕಾರಿ ಭೂಮಿ ವಾಪಸ್ ಪಡೆಯುವಂತೆ ಬಿಬಿಎಂಪಿಗೆ ಅಂದಿನ ಪ್ರಾದೇಶಿಕ ಆಯುಕ್ತರಾಗಿದ್ದ ಹರ್ಷ ಗುಪ್ತ ಆದೇಶಿಸಿದ್ದರು. ಈ ಬಗ್ಗೆ ಸರ್ವೆ ಮಾಡಿಕೊಡುವಂತೆ ಸರ್ವೆ ಇಲಾಖೆಗೆ ಬಿಬಿಎಂಪಿ ಪತ್ರ ಬರೆದಿತ್ತು.

ಅಲ್ಲದೆ, ಮಂತ್ರಿ ಗ್ರೀನ್ ಅಪಾರ್ಟ್​ಮೆಂಟ್​ನಲ್ಲಿ ಒಟ್ಟು 425 ಕುಟುಂಬಗಳು ವಾಸಮಾಡುತ್ತಿವೆ. ಮಂತ್ರಿ ಗ್ರೂಪ್​ನಿಂದ ಸರ್ಕಾರಿ ಜಾಗ ಒತ್ತುವರಿ ಆಗಿದೆ ಅಂತಾ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ದೂರು ನೀಡಿದ್ದರು. ಹೀಗಾಗಿ ಸರ್ಕಾರಿ ಜಾಗ ಪತ್ತೆಯಾದ್ರೆ ಮಂತ್ರಿ ಮಾಲ್ ತೆರುವು ಖಚಿತವಾಗಿದೆ.

Published On - 1:01 pm, Fri, 28 February 20

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’