AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಿ ಒತ್ತುವರಿ ಲೆಕ್ಕಶೋಧ: ಸರ್ವೆ ಅಧಿಕಾರಿಗಳಿಗೆ ತಡೆ!

ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ ಹಾಗೂ ಮಂತ್ರಿ ಅಪಾರ್ಟ್​ಮೆಂಟ್​ ವಿರುದ್ಧ ಸರ್ಕಾರಿ ಜಾಗ ಒತ್ತುವರಿ ಆರೋಪ ಕೇಳಿಬಂದಿದ್ದು, ಒತ್ತುವರಿ ಜಾಗ ಗುರುತಿಸಲು ಸರ್ವೆಗಾಗಿ ಅಧಿಕಾರಿಗಳು ಬಂದಿದ್ದಾರೆ. ಆದ್ರೆ, ಮಂತ್ರಿಮಾಲ್​ ಸುತ್ತಮುತ್ತ ಸರ್ವೆಗಾಗಿ ಆಗಮಿಸಿದ್ದ ಅಧಿಕಾರಿಗಳ ಪ್ರವೇಶಕ್ಕೆ ತಡೆ ನೀಡಲಾಗಿದೆ. ಸರ್ವೆ ಅಧಿಕಾರಿಗಳಿಗೆ ತಡೆ: ಸಿಟಿ ಸರ್ವೆ ಮೇಲ್ವಿಚಾರಕ ರಂಗಯ್ಯ ನೇತೃತ್ವದ ಟೀಂ ಸರ್ವೆ ಕಾರ್ಯಕ್ಕೆ ಆಗಮಿಸಿದ್ದಾರೆ. ಸರ್ವೆಗೂ ಮುನ್ನ ಬಿಬಿಎಂಪಿ ಅಧಿಕಾರಿಗಳು ತಿಳುವಳಿಕೆ ನೋಟಿಸ್ ನೀಡಿದ್ದಾರೆ. ಆದ್ರೆ ಮಂತ್ರಿ ಮಾಲ್ ಆಡಳಿತ ಮಂಡಳಿ ನೋಟಿಸ್ ಸ್ವೀಕರಿಸಿಲ್ಲ. ಸರ್ವೆ ಅಧಿಕಾರಿಗಳಿಗೆ […]

ಮಂತ್ರಿ ಒತ್ತುವರಿ ಲೆಕ್ಕಶೋಧ: ಸರ್ವೆ ಅಧಿಕಾರಿಗಳಿಗೆ ತಡೆ!
ಸಾಧು ಶ್ರೀನಾಥ್​
|

Updated on:Feb 28, 2020 | 1:45 PM

Share

ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ ಹಾಗೂ ಮಂತ್ರಿ ಅಪಾರ್ಟ್​ಮೆಂಟ್​ ವಿರುದ್ಧ ಸರ್ಕಾರಿ ಜಾಗ ಒತ್ತುವರಿ ಆರೋಪ ಕೇಳಿಬಂದಿದ್ದು, ಒತ್ತುವರಿ ಜಾಗ ಗುರುತಿಸಲು ಸರ್ವೆಗಾಗಿ ಅಧಿಕಾರಿಗಳು ಬಂದಿದ್ದಾರೆ. ಆದ್ರೆ, ಮಂತ್ರಿಮಾಲ್​ ಸುತ್ತಮುತ್ತ ಸರ್ವೆಗಾಗಿ ಆಗಮಿಸಿದ್ದ ಅಧಿಕಾರಿಗಳ ಪ್ರವೇಶಕ್ಕೆ ತಡೆ ನೀಡಲಾಗಿದೆ.

ಸರ್ವೆ ಅಧಿಕಾರಿಗಳಿಗೆ ತಡೆ: ಸಿಟಿ ಸರ್ವೆ ಮೇಲ್ವಿಚಾರಕ ರಂಗಯ್ಯ ನೇತೃತ್ವದ ಟೀಂ ಸರ್ವೆ ಕಾರ್ಯಕ್ಕೆ ಆಗಮಿಸಿದ್ದಾರೆ. ಸರ್ವೆಗೂ ಮುನ್ನ ಬಿಬಿಎಂಪಿ ಅಧಿಕಾರಿಗಳು ತಿಳುವಳಿಕೆ ನೋಟಿಸ್ ನೀಡಿದ್ದಾರೆ. ಆದ್ರೆ ಮಂತ್ರಿ ಮಾಲ್ ಆಡಳಿತ ಮಂಡಳಿ ನೋಟಿಸ್ ಸ್ವೀಕರಿಸಿಲ್ಲ. ಸರ್ವೆ ಅಧಿಕಾರಿಗಳಿಗೆ ಗೇಟ್ ಸಹ ತೆಗೆಯದೆ ಮಾಲ್ ಸೆಕ್ಯುರಿಟಿಗಳು ತಡೆ ನೀಡಿದ್ದಾರೆ.

ಅಪಾರ್ಟ್‌ಮೆಂಟ್‌ನಿಂದ ಸರ್ಕಾರಿ ಜಾಗ ಒತ್ತುವರಿ ಆರೋಪ ಹಿನ್ನೆಲೆಯಲ್ಲಿ ಜಾಗ ವಶಕ್ಕೆ ಪಡೆದುಕೊಳ್ಳಲು ಕಳೆದ ತಿಂಗಳು ಪ್ರಾದೇಶಿಕ ಆಯುಕ್ತರು, ಸಕ್ಷಮ ಪ್ರಾಧಿಕಾರ ನ್ಯಾಯಾಲಯ ಬಿಬಿಎಂಪಿಗೆ ಆದೇಶಿಸಿತ್ತು. ಸರ್ಕಾರಿ ಭೂಮಿ ವಾಪಸ್ ಪಡೆಯುವಂತೆ ಬಿಬಿಎಂಪಿಗೆ ಅಂದಿನ ಪ್ರಾದೇಶಿಕ ಆಯುಕ್ತರಾಗಿದ್ದ ಹರ್ಷ ಗುಪ್ತ ಆದೇಶಿಸಿದ್ದರು. ಈ ಬಗ್ಗೆ ಸರ್ವೆ ಮಾಡಿಕೊಡುವಂತೆ ಸರ್ವೆ ಇಲಾಖೆಗೆ ಬಿಬಿಎಂಪಿ ಪತ್ರ ಬರೆದಿತ್ತು.

ಅಲ್ಲದೆ, ಮಂತ್ರಿ ಗ್ರೀನ್ ಅಪಾರ್ಟ್​ಮೆಂಟ್​ನಲ್ಲಿ ಒಟ್ಟು 425 ಕುಟುಂಬಗಳು ವಾಸಮಾಡುತ್ತಿವೆ. ಮಂತ್ರಿ ಗ್ರೂಪ್​ನಿಂದ ಸರ್ಕಾರಿ ಜಾಗ ಒತ್ತುವರಿ ಆಗಿದೆ ಅಂತಾ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ದೂರು ನೀಡಿದ್ದರು. ಹೀಗಾಗಿ ಸರ್ಕಾರಿ ಜಾಗ ಪತ್ತೆಯಾದ್ರೆ ಮಂತ್ರಿ ಮಾಲ್ ತೆರುವು ಖಚಿತವಾಗಿದೆ.

Published On - 1:01 pm, Fri, 28 February 20

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ