AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಿ ಒತ್ತುವರಿ ಲೆಕ್ಕಶೋಧ: ಸರ್ವೆ ಅಧಿಕಾರಿಗಳಿಗೆ ತಡೆ!

ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ ಹಾಗೂ ಮಂತ್ರಿ ಅಪಾರ್ಟ್​ಮೆಂಟ್​ ವಿರುದ್ಧ ಸರ್ಕಾರಿ ಜಾಗ ಒತ್ತುವರಿ ಆರೋಪ ಕೇಳಿಬಂದಿದ್ದು, ಒತ್ತುವರಿ ಜಾಗ ಗುರುತಿಸಲು ಸರ್ವೆಗಾಗಿ ಅಧಿಕಾರಿಗಳು ಬಂದಿದ್ದಾರೆ. ಆದ್ರೆ, ಮಂತ್ರಿಮಾಲ್​ ಸುತ್ತಮುತ್ತ ಸರ್ವೆಗಾಗಿ ಆಗಮಿಸಿದ್ದ ಅಧಿಕಾರಿಗಳ ಪ್ರವೇಶಕ್ಕೆ ತಡೆ ನೀಡಲಾಗಿದೆ. ಸರ್ವೆ ಅಧಿಕಾರಿಗಳಿಗೆ ತಡೆ: ಸಿಟಿ ಸರ್ವೆ ಮೇಲ್ವಿಚಾರಕ ರಂಗಯ್ಯ ನೇತೃತ್ವದ ಟೀಂ ಸರ್ವೆ ಕಾರ್ಯಕ್ಕೆ ಆಗಮಿಸಿದ್ದಾರೆ. ಸರ್ವೆಗೂ ಮುನ್ನ ಬಿಬಿಎಂಪಿ ಅಧಿಕಾರಿಗಳು ತಿಳುವಳಿಕೆ ನೋಟಿಸ್ ನೀಡಿದ್ದಾರೆ. ಆದ್ರೆ ಮಂತ್ರಿ ಮಾಲ್ ಆಡಳಿತ ಮಂಡಳಿ ನೋಟಿಸ್ ಸ್ವೀಕರಿಸಿಲ್ಲ. ಸರ್ವೆ ಅಧಿಕಾರಿಗಳಿಗೆ […]

ಮಂತ್ರಿ ಒತ್ತುವರಿ ಲೆಕ್ಕಶೋಧ: ಸರ್ವೆ ಅಧಿಕಾರಿಗಳಿಗೆ ತಡೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 28, 2020 | 1:45 PM

Share

ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ ಹಾಗೂ ಮಂತ್ರಿ ಅಪಾರ್ಟ್​ಮೆಂಟ್​ ವಿರುದ್ಧ ಸರ್ಕಾರಿ ಜಾಗ ಒತ್ತುವರಿ ಆರೋಪ ಕೇಳಿಬಂದಿದ್ದು, ಒತ್ತುವರಿ ಜಾಗ ಗುರುತಿಸಲು ಸರ್ವೆಗಾಗಿ ಅಧಿಕಾರಿಗಳು ಬಂದಿದ್ದಾರೆ. ಆದ್ರೆ, ಮಂತ್ರಿಮಾಲ್​ ಸುತ್ತಮುತ್ತ ಸರ್ವೆಗಾಗಿ ಆಗಮಿಸಿದ್ದ ಅಧಿಕಾರಿಗಳ ಪ್ರವೇಶಕ್ಕೆ ತಡೆ ನೀಡಲಾಗಿದೆ.

ಸರ್ವೆ ಅಧಿಕಾರಿಗಳಿಗೆ ತಡೆ: ಸಿಟಿ ಸರ್ವೆ ಮೇಲ್ವಿಚಾರಕ ರಂಗಯ್ಯ ನೇತೃತ್ವದ ಟೀಂ ಸರ್ವೆ ಕಾರ್ಯಕ್ಕೆ ಆಗಮಿಸಿದ್ದಾರೆ. ಸರ್ವೆಗೂ ಮುನ್ನ ಬಿಬಿಎಂಪಿ ಅಧಿಕಾರಿಗಳು ತಿಳುವಳಿಕೆ ನೋಟಿಸ್ ನೀಡಿದ್ದಾರೆ. ಆದ್ರೆ ಮಂತ್ರಿ ಮಾಲ್ ಆಡಳಿತ ಮಂಡಳಿ ನೋಟಿಸ್ ಸ್ವೀಕರಿಸಿಲ್ಲ. ಸರ್ವೆ ಅಧಿಕಾರಿಗಳಿಗೆ ಗೇಟ್ ಸಹ ತೆಗೆಯದೆ ಮಾಲ್ ಸೆಕ್ಯುರಿಟಿಗಳು ತಡೆ ನೀಡಿದ್ದಾರೆ.

ಅಪಾರ್ಟ್‌ಮೆಂಟ್‌ನಿಂದ ಸರ್ಕಾರಿ ಜಾಗ ಒತ್ತುವರಿ ಆರೋಪ ಹಿನ್ನೆಲೆಯಲ್ಲಿ ಜಾಗ ವಶಕ್ಕೆ ಪಡೆದುಕೊಳ್ಳಲು ಕಳೆದ ತಿಂಗಳು ಪ್ರಾದೇಶಿಕ ಆಯುಕ್ತರು, ಸಕ್ಷಮ ಪ್ರಾಧಿಕಾರ ನ್ಯಾಯಾಲಯ ಬಿಬಿಎಂಪಿಗೆ ಆದೇಶಿಸಿತ್ತು. ಸರ್ಕಾರಿ ಭೂಮಿ ವಾಪಸ್ ಪಡೆಯುವಂತೆ ಬಿಬಿಎಂಪಿಗೆ ಅಂದಿನ ಪ್ರಾದೇಶಿಕ ಆಯುಕ್ತರಾಗಿದ್ದ ಹರ್ಷ ಗುಪ್ತ ಆದೇಶಿಸಿದ್ದರು. ಈ ಬಗ್ಗೆ ಸರ್ವೆ ಮಾಡಿಕೊಡುವಂತೆ ಸರ್ವೆ ಇಲಾಖೆಗೆ ಬಿಬಿಎಂಪಿ ಪತ್ರ ಬರೆದಿತ್ತು.

ಅಲ್ಲದೆ, ಮಂತ್ರಿ ಗ್ರೀನ್ ಅಪಾರ್ಟ್​ಮೆಂಟ್​ನಲ್ಲಿ ಒಟ್ಟು 425 ಕುಟುಂಬಗಳು ವಾಸಮಾಡುತ್ತಿವೆ. ಮಂತ್ರಿ ಗ್ರೂಪ್​ನಿಂದ ಸರ್ಕಾರಿ ಜಾಗ ಒತ್ತುವರಿ ಆಗಿದೆ ಅಂತಾ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ದೂರು ನೀಡಿದ್ದರು. ಹೀಗಾಗಿ ಸರ್ಕಾರಿ ಜಾಗ ಪತ್ತೆಯಾದ್ರೆ ಮಂತ್ರಿ ಮಾಲ್ ತೆರುವು ಖಚಿತವಾಗಿದೆ.

Published On - 1:01 pm, Fri, 28 February 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ