AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಿ ಒತ್ತುವರಿ ಲೆಕ್ಕಶೋಧ: ಸರ್ವೆ ಅಧಿಕಾರಿಗಳಿಗೆ ತಡೆ!

ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ ಹಾಗೂ ಮಂತ್ರಿ ಅಪಾರ್ಟ್​ಮೆಂಟ್​ ವಿರುದ್ಧ ಸರ್ಕಾರಿ ಜಾಗ ಒತ್ತುವರಿ ಆರೋಪ ಕೇಳಿಬಂದಿದ್ದು, ಒತ್ತುವರಿ ಜಾಗ ಗುರುತಿಸಲು ಸರ್ವೆಗಾಗಿ ಅಧಿಕಾರಿಗಳು ಬಂದಿದ್ದಾರೆ. ಆದ್ರೆ, ಮಂತ್ರಿಮಾಲ್​ ಸುತ್ತಮುತ್ತ ಸರ್ವೆಗಾಗಿ ಆಗಮಿಸಿದ್ದ ಅಧಿಕಾರಿಗಳ ಪ್ರವೇಶಕ್ಕೆ ತಡೆ ನೀಡಲಾಗಿದೆ. ಸರ್ವೆ ಅಧಿಕಾರಿಗಳಿಗೆ ತಡೆ: ಸಿಟಿ ಸರ್ವೆ ಮೇಲ್ವಿಚಾರಕ ರಂಗಯ್ಯ ನೇತೃತ್ವದ ಟೀಂ ಸರ್ವೆ ಕಾರ್ಯಕ್ಕೆ ಆಗಮಿಸಿದ್ದಾರೆ. ಸರ್ವೆಗೂ ಮುನ್ನ ಬಿಬಿಎಂಪಿ ಅಧಿಕಾರಿಗಳು ತಿಳುವಳಿಕೆ ನೋಟಿಸ್ ನೀಡಿದ್ದಾರೆ. ಆದ್ರೆ ಮಂತ್ರಿ ಮಾಲ್ ಆಡಳಿತ ಮಂಡಳಿ ನೋಟಿಸ್ ಸ್ವೀಕರಿಸಿಲ್ಲ. ಸರ್ವೆ ಅಧಿಕಾರಿಗಳಿಗೆ […]

ಮಂತ್ರಿ ಒತ್ತುವರಿ ಲೆಕ್ಕಶೋಧ: ಸರ್ವೆ ಅಧಿಕಾರಿಗಳಿಗೆ ತಡೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 28, 2020 | 1:45 PM

Share

ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ ಹಾಗೂ ಮಂತ್ರಿ ಅಪಾರ್ಟ್​ಮೆಂಟ್​ ವಿರುದ್ಧ ಸರ್ಕಾರಿ ಜಾಗ ಒತ್ತುವರಿ ಆರೋಪ ಕೇಳಿಬಂದಿದ್ದು, ಒತ್ತುವರಿ ಜಾಗ ಗುರುತಿಸಲು ಸರ್ವೆಗಾಗಿ ಅಧಿಕಾರಿಗಳು ಬಂದಿದ್ದಾರೆ. ಆದ್ರೆ, ಮಂತ್ರಿಮಾಲ್​ ಸುತ್ತಮುತ್ತ ಸರ್ವೆಗಾಗಿ ಆಗಮಿಸಿದ್ದ ಅಧಿಕಾರಿಗಳ ಪ್ರವೇಶಕ್ಕೆ ತಡೆ ನೀಡಲಾಗಿದೆ.

ಸರ್ವೆ ಅಧಿಕಾರಿಗಳಿಗೆ ತಡೆ: ಸಿಟಿ ಸರ್ವೆ ಮೇಲ್ವಿಚಾರಕ ರಂಗಯ್ಯ ನೇತೃತ್ವದ ಟೀಂ ಸರ್ವೆ ಕಾರ್ಯಕ್ಕೆ ಆಗಮಿಸಿದ್ದಾರೆ. ಸರ್ವೆಗೂ ಮುನ್ನ ಬಿಬಿಎಂಪಿ ಅಧಿಕಾರಿಗಳು ತಿಳುವಳಿಕೆ ನೋಟಿಸ್ ನೀಡಿದ್ದಾರೆ. ಆದ್ರೆ ಮಂತ್ರಿ ಮಾಲ್ ಆಡಳಿತ ಮಂಡಳಿ ನೋಟಿಸ್ ಸ್ವೀಕರಿಸಿಲ್ಲ. ಸರ್ವೆ ಅಧಿಕಾರಿಗಳಿಗೆ ಗೇಟ್ ಸಹ ತೆಗೆಯದೆ ಮಾಲ್ ಸೆಕ್ಯುರಿಟಿಗಳು ತಡೆ ನೀಡಿದ್ದಾರೆ.

ಅಪಾರ್ಟ್‌ಮೆಂಟ್‌ನಿಂದ ಸರ್ಕಾರಿ ಜಾಗ ಒತ್ತುವರಿ ಆರೋಪ ಹಿನ್ನೆಲೆಯಲ್ಲಿ ಜಾಗ ವಶಕ್ಕೆ ಪಡೆದುಕೊಳ್ಳಲು ಕಳೆದ ತಿಂಗಳು ಪ್ರಾದೇಶಿಕ ಆಯುಕ್ತರು, ಸಕ್ಷಮ ಪ್ರಾಧಿಕಾರ ನ್ಯಾಯಾಲಯ ಬಿಬಿಎಂಪಿಗೆ ಆದೇಶಿಸಿತ್ತು. ಸರ್ಕಾರಿ ಭೂಮಿ ವಾಪಸ್ ಪಡೆಯುವಂತೆ ಬಿಬಿಎಂಪಿಗೆ ಅಂದಿನ ಪ್ರಾದೇಶಿಕ ಆಯುಕ್ತರಾಗಿದ್ದ ಹರ್ಷ ಗುಪ್ತ ಆದೇಶಿಸಿದ್ದರು. ಈ ಬಗ್ಗೆ ಸರ್ವೆ ಮಾಡಿಕೊಡುವಂತೆ ಸರ್ವೆ ಇಲಾಖೆಗೆ ಬಿಬಿಎಂಪಿ ಪತ್ರ ಬರೆದಿತ್ತು.

ಅಲ್ಲದೆ, ಮಂತ್ರಿ ಗ್ರೀನ್ ಅಪಾರ್ಟ್​ಮೆಂಟ್​ನಲ್ಲಿ ಒಟ್ಟು 425 ಕುಟುಂಬಗಳು ವಾಸಮಾಡುತ್ತಿವೆ. ಮಂತ್ರಿ ಗ್ರೂಪ್​ನಿಂದ ಸರ್ಕಾರಿ ಜಾಗ ಒತ್ತುವರಿ ಆಗಿದೆ ಅಂತಾ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ದೂರು ನೀಡಿದ್ದರು. ಹೀಗಾಗಿ ಸರ್ಕಾರಿ ಜಾಗ ಪತ್ತೆಯಾದ್ರೆ ಮಂತ್ರಿ ಮಾಲ್ ತೆರುವು ಖಚಿತವಾಗಿದೆ.

Published On - 1:01 pm, Fri, 28 February 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ