AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಿ ಒತ್ತುವರಿ ಲೆಕ್ಕಶೋಧ: ಸರ್ವೆ ಅಧಿಕಾರಿಗಳಿಗೆ ತಡೆ!

ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ ಹಾಗೂ ಮಂತ್ರಿ ಅಪಾರ್ಟ್​ಮೆಂಟ್​ ವಿರುದ್ಧ ಸರ್ಕಾರಿ ಜಾಗ ಒತ್ತುವರಿ ಆರೋಪ ಕೇಳಿಬಂದಿದ್ದು, ಒತ್ತುವರಿ ಜಾಗ ಗುರುತಿಸಲು ಸರ್ವೆಗಾಗಿ ಅಧಿಕಾರಿಗಳು ಬಂದಿದ್ದಾರೆ. ಆದ್ರೆ, ಮಂತ್ರಿಮಾಲ್​ ಸುತ್ತಮುತ್ತ ಸರ್ವೆಗಾಗಿ ಆಗಮಿಸಿದ್ದ ಅಧಿಕಾರಿಗಳ ಪ್ರವೇಶಕ್ಕೆ ತಡೆ ನೀಡಲಾಗಿದೆ. ಸರ್ವೆ ಅಧಿಕಾರಿಗಳಿಗೆ ತಡೆ: ಸಿಟಿ ಸರ್ವೆ ಮೇಲ್ವಿಚಾರಕ ರಂಗಯ್ಯ ನೇತೃತ್ವದ ಟೀಂ ಸರ್ವೆ ಕಾರ್ಯಕ್ಕೆ ಆಗಮಿಸಿದ್ದಾರೆ. ಸರ್ವೆಗೂ ಮುನ್ನ ಬಿಬಿಎಂಪಿ ಅಧಿಕಾರಿಗಳು ತಿಳುವಳಿಕೆ ನೋಟಿಸ್ ನೀಡಿದ್ದಾರೆ. ಆದ್ರೆ ಮಂತ್ರಿ ಮಾಲ್ ಆಡಳಿತ ಮಂಡಳಿ ನೋಟಿಸ್ ಸ್ವೀಕರಿಸಿಲ್ಲ. ಸರ್ವೆ ಅಧಿಕಾರಿಗಳಿಗೆ […]

ಮಂತ್ರಿ ಒತ್ತುವರಿ ಲೆಕ್ಕಶೋಧ: ಸರ್ವೆ ಅಧಿಕಾರಿಗಳಿಗೆ ತಡೆ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 28, 2020 | 1:45 PM

Share

ಬೆಂಗಳೂರು: ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ ಹಾಗೂ ಮಂತ್ರಿ ಅಪಾರ್ಟ್​ಮೆಂಟ್​ ವಿರುದ್ಧ ಸರ್ಕಾರಿ ಜಾಗ ಒತ್ತುವರಿ ಆರೋಪ ಕೇಳಿಬಂದಿದ್ದು, ಒತ್ತುವರಿ ಜಾಗ ಗುರುತಿಸಲು ಸರ್ವೆಗಾಗಿ ಅಧಿಕಾರಿಗಳು ಬಂದಿದ್ದಾರೆ. ಆದ್ರೆ, ಮಂತ್ರಿಮಾಲ್​ ಸುತ್ತಮುತ್ತ ಸರ್ವೆಗಾಗಿ ಆಗಮಿಸಿದ್ದ ಅಧಿಕಾರಿಗಳ ಪ್ರವೇಶಕ್ಕೆ ತಡೆ ನೀಡಲಾಗಿದೆ.

ಸರ್ವೆ ಅಧಿಕಾರಿಗಳಿಗೆ ತಡೆ: ಸಿಟಿ ಸರ್ವೆ ಮೇಲ್ವಿಚಾರಕ ರಂಗಯ್ಯ ನೇತೃತ್ವದ ಟೀಂ ಸರ್ವೆ ಕಾರ್ಯಕ್ಕೆ ಆಗಮಿಸಿದ್ದಾರೆ. ಸರ್ವೆಗೂ ಮುನ್ನ ಬಿಬಿಎಂಪಿ ಅಧಿಕಾರಿಗಳು ತಿಳುವಳಿಕೆ ನೋಟಿಸ್ ನೀಡಿದ್ದಾರೆ. ಆದ್ರೆ ಮಂತ್ರಿ ಮಾಲ್ ಆಡಳಿತ ಮಂಡಳಿ ನೋಟಿಸ್ ಸ್ವೀಕರಿಸಿಲ್ಲ. ಸರ್ವೆ ಅಧಿಕಾರಿಗಳಿಗೆ ಗೇಟ್ ಸಹ ತೆಗೆಯದೆ ಮಾಲ್ ಸೆಕ್ಯುರಿಟಿಗಳು ತಡೆ ನೀಡಿದ್ದಾರೆ.

ಅಪಾರ್ಟ್‌ಮೆಂಟ್‌ನಿಂದ ಸರ್ಕಾರಿ ಜಾಗ ಒತ್ತುವರಿ ಆರೋಪ ಹಿನ್ನೆಲೆಯಲ್ಲಿ ಜಾಗ ವಶಕ್ಕೆ ಪಡೆದುಕೊಳ್ಳಲು ಕಳೆದ ತಿಂಗಳು ಪ್ರಾದೇಶಿಕ ಆಯುಕ್ತರು, ಸಕ್ಷಮ ಪ್ರಾಧಿಕಾರ ನ್ಯಾಯಾಲಯ ಬಿಬಿಎಂಪಿಗೆ ಆದೇಶಿಸಿತ್ತು. ಸರ್ಕಾರಿ ಭೂಮಿ ವಾಪಸ್ ಪಡೆಯುವಂತೆ ಬಿಬಿಎಂಪಿಗೆ ಅಂದಿನ ಪ್ರಾದೇಶಿಕ ಆಯುಕ್ತರಾಗಿದ್ದ ಹರ್ಷ ಗುಪ್ತ ಆದೇಶಿಸಿದ್ದರು. ಈ ಬಗ್ಗೆ ಸರ್ವೆ ಮಾಡಿಕೊಡುವಂತೆ ಸರ್ವೆ ಇಲಾಖೆಗೆ ಬಿಬಿಎಂಪಿ ಪತ್ರ ಬರೆದಿತ್ತು.

ಅಲ್ಲದೆ, ಮಂತ್ರಿ ಗ್ರೀನ್ ಅಪಾರ್ಟ್​ಮೆಂಟ್​ನಲ್ಲಿ ಒಟ್ಟು 425 ಕುಟುಂಬಗಳು ವಾಸಮಾಡುತ್ತಿವೆ. ಮಂತ್ರಿ ಗ್ರೂಪ್​ನಿಂದ ಸರ್ಕಾರಿ ಜಾಗ ಒತ್ತುವರಿ ಆಗಿದೆ ಅಂತಾ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ದೂರು ನೀಡಿದ್ದರು. ಹೀಗಾಗಿ ಸರ್ಕಾರಿ ಜಾಗ ಪತ್ತೆಯಾದ್ರೆ ಮಂತ್ರಿ ಮಾಲ್ ತೆರುವು ಖಚಿತವಾಗಿದೆ.

Published On - 1:01 pm, Fri, 28 February 20

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ