AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೃಹತ್ ಬೆಂಗಳೂರು ಅಲ್ಲ ಸ್ವಾಮಿ.. ಗ್ರೇಟರ್​ ಬೆಂಗಳೂರು! ಅದಕ್ಕೇ ನಗರಕ್ಕೆ 52 ವಾರ್ಡ್​ ಸೇರ್ಪಡೆ

ಬೆಂಗಳೂರು: ನಗರದ ರಾಜಕೀಯ ನಾಯಕರಿಗೆ ಸದ್ಯಕ್ಕೆ ಅತಿ ಹೆಚ್ಚು ಗೊಂದಲ ಉಂಟುಮಾಡಿರುವುದು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿರುವ ವಾರ್ಡ್​ ಸಂಖ್ಯೆ. ಇದೀಗ, BBMP ವಾಡ್೯ ಹೆಚ್ಚಳದ ಗೊಂದಲಕ್ಕೆ ಶಾಸಕ ರಘು ತೆರೆ ಎಳೆದಿದ್ದಾರೆ. ಬಿಬಿಎಂಪಿಗೆ ಇದೀಗ ಹೊಸದಾಗಿ 26 ಅಲ್ಲ 52 ವಾಡ್೯ಗಳು ಸೇರ್ಪಡೆಯಾಗಲಿದೆ ಎಂದು ಶಾಸಕರು ತಿಳಿಸಿದ್ದಾರೆ. ಹಾಗಾಗಿ, ನಗರದಲ್ಲಿ ವಾರ್ಡ್​ಗಳ ಸಂಖ್ಯೆ 198ರಿಂದ 250 ಕ್ಕೆ ಏರಲಿದೆ. ಜೊತೆಗೆ, 250 ವಾಡ್೯ಗಳು ಆದ ಬಳಿಕ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಗ್ರೇಟರ್ ಬೆಂಗಳೂರು ಆಗಲಿದೆ […]

ಬೃಹತ್ ಬೆಂಗಳೂರು ಅಲ್ಲ ಸ್ವಾಮಿ.. ಗ್ರೇಟರ್​ ಬೆಂಗಳೂರು! ಅದಕ್ಕೇ ನಗರಕ್ಕೆ 52 ವಾರ್ಡ್​ ಸೇರ್ಪಡೆ
KUSHAL V
| Edited By: |

Updated on: Sep 22, 2020 | 11:19 AM

Share

ಬೆಂಗಳೂರು: ನಗರದ ರಾಜಕೀಯ ನಾಯಕರಿಗೆ ಸದ್ಯಕ್ಕೆ ಅತಿ ಹೆಚ್ಚು ಗೊಂದಲ ಉಂಟುಮಾಡಿರುವುದು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿರುವ ವಾರ್ಡ್​ ಸಂಖ್ಯೆ. ಇದೀಗ, BBMP ವಾಡ್೯ ಹೆಚ್ಚಳದ ಗೊಂದಲಕ್ಕೆ ಶಾಸಕ ರಘು ತೆರೆ ಎಳೆದಿದ್ದಾರೆ.

ಬಿಬಿಎಂಪಿಗೆ ಇದೀಗ ಹೊಸದಾಗಿ 26 ಅಲ್ಲ 52 ವಾಡ್೯ಗಳು ಸೇರ್ಪಡೆಯಾಗಲಿದೆ ಎಂದು ಶಾಸಕರು ತಿಳಿಸಿದ್ದಾರೆ. ಹಾಗಾಗಿ, ನಗರದಲ್ಲಿ ವಾರ್ಡ್​ಗಳ ಸಂಖ್ಯೆ 198ರಿಂದ 250 ಕ್ಕೆ ಏರಲಿದೆ. ಜೊತೆಗೆ, 250 ವಾಡ್೯ಗಳು ಆದ ಬಳಿಕ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಗ್ರೇಟರ್ ಬೆಂಗಳೂರು ಆಗಲಿದೆ ಎಂಬ ಮಾಹಿತಿಯನ್ನು ಜಂಟಿ ಪರಿಶೀಲನಾ ಸಮಿತಿ ಅಧ್ಯಕ್ಷ ರಘು ತಿಳಿಸಿದ್ದಾರೆ.

ಜೊತೆಗೆ, ಮೇಯರ್ ಅಧಿಕಾರ ಅವಧಿ ಕೂಡಾ ಹೆಚ್ಚಳವಾಗಲಿದ್ದು ಕೇವಲ ಒಂದು ವರ್ಷ ಇದ್ದ ಮೇಯರ್ ಅಧಿಕಾರ ಅವಧಿಯನ್ನು ಎರಡೂವರೆ ವರ್ಷಕ್ಕೆ ಏರಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ. ಇದಲ್ಲದೆ, 12 ಸ್ಥಾಯಿ ಸಮಿತಿಗಳಿಂದ 8 ಸ್ಥಾಯಿ ಸಮಿತಿಗಳಿಗೆ ಇಳಿಸಲು ನಿರ್ಧಾರ ಕೈಗೊಳ್ಳಲಿದೆ.

ಆದರೆ, ಮುಖ್ಯವಾದ ವಿಷಯವೆಂದರೆ, ಪಾಲಿಕೆಯ ವ್ಯಾಪ್ತಿಗೆ ಯಾವುದೇ ಹೊಸ ಪ್ರದೇಶಗಳ ಸೇರ್ಪಡೆ ಆಗುವುದಿಲ್ಲ. ಬಿಬಿಎಂಪಿ ವಿಸ್ತೀರ್ಣದಲ್ಲೇ ಇರುವ ವಾರ್ಡ್​ಗಳ ಪುನರ್​ವಿಂಗಡಣೆ ಮಾಡಲಾಗಿದೆ ಎಂದು ರಘು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಯುಕ್ತರಿಗಿರುವ ಅಧಿಕಾರವನ್ನ ಜಂಟಿ ಆಯುಕ್ತರಿಗೆ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.

ಸದ್ಯ ಈಗಿರುವ ಕೌನ್ಸಿಲ್ ಸಭಾಂಗಣದಲ್ಲೇ ಅಧಿವೇಶನ ಮುಂದುವರೆಸಲು ಚಿಂತನೆ ನಡೆಸಲಾಗಿದೆ. ಇದೀಗ, ಬಿಬಿಎಂಪಿ ಸ್ಥಳೀಯ ಸಂಸ್ಥೆಗಳ ವಿಸ್ತೀರ್ಣದಲ್ಲಿ ಭಾರತದ ಅತಿ ದೊಡ್ಡ ಸ್ಥಳೀಯ ಸಂಸ್ಥೆ ಆಗಲಿದೆ ಎಂದು ವಿಧಾನಸೌಧದಲ್ಲಿ ಜಂಟಿ ಪರಿಶೀಲನಾ ಸಮಿತಿ ಅಧ್ಯಕ್ಷ ಎಸ್. ರಘು ಹೇಳಿಕೆ ನೀಡಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!