AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿಯಲ್ಲಿ ಸೋಂಕಿತರ ಸಾವಿನ ಸಂಖ್ಯೆ ಗಣನೀಯವಾಗಿ ಏರುತ್ತಿದೆ, ಯಾಕೆ?

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಇತ್ತೀಚೆಗೆ ಸೋಂಕಿತರ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಅಚ್ಚರಿಯ ಸಂಗತಿಯೆಂದರೆ, ಶೇಕಡಾ 90ರಷ್ಟು ಸೋಂಕಿತರು ಆಸ್ಪತ್ರೆಗೆ ಸೇರಿದ ಮೂರು ದಿನದಲ್ಲೇ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ, ಮರಣ ಪ್ರಮಾಣದ ಏರಿಕೆಗೆ ಕಾರಣವೇನು ಎಂದು ತಿಳಿಯಲು ಬಿಬಿಎಂಪಿ ಮುಂದಾಗಿದೆ. ಮಾಹಿತಿ ಸಂಗ್ರಹಕ್ಕೆ ಮುಂದಾಗಿರೋ ಬಿಬಿಎಂಪಿಯ ವರದಿಯಲ್ಲಿ ಈ ಕೆಲವು ಕಾರಣಗಳು ತಿಳಿದುಬಂದಿದೆ. ಅವುಗಳೇನೆಂದರೆ, ಕೊರೊನಾ ಸೋಂಕಿತರನ್ನ ಆಸ್ಪತ್ರೆಗೆ ಸೇರಿಸೋದ್ರಲ್ಲಿ ವಿಳಂಬವಾಗುತ್ತಿದೆ. ಇದಕ್ಕೆ ಒಂದು ಕಾರಣ ಕೊವಿಡ್ ಟೆಸ್ಟ್ ರಿಪೋರ್ಟ್ ಬರಲು ಐದಾರು ದಿನ ತಡವಾಗುತ್ತಿದೆ. ಪರೀಕ್ಷಾ ವರದಿ […]

ರಾಜಧಾನಿಯಲ್ಲಿ ಸೋಂಕಿತರ ಸಾವಿನ ಸಂಖ್ಯೆ ಗಣನೀಯವಾಗಿ ಏರುತ್ತಿದೆ, ಯಾಕೆ?
ಕೊರೊನಾ ಟೆಸ್ಟ್
KUSHAL V
| Edited By: |

Updated on:Jul 11, 2020 | 1:04 PM

Share

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ಇತ್ತೀಚೆಗೆ ಸೋಂಕಿತರ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಅಚ್ಚರಿಯ ಸಂಗತಿಯೆಂದರೆ, ಶೇಕಡಾ 90ರಷ್ಟು ಸೋಂಕಿತರು ಆಸ್ಪತ್ರೆಗೆ ಸೇರಿದ ಮೂರು ದಿನದಲ್ಲೇ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ, ಮರಣ ಪ್ರಮಾಣದ ಏರಿಕೆಗೆ ಕಾರಣವೇನು ಎಂದು ತಿಳಿಯಲು ಬಿಬಿಎಂಪಿ ಮುಂದಾಗಿದೆ.

ಮಾಹಿತಿ ಸಂಗ್ರಹಕ್ಕೆ ಮುಂದಾಗಿರೋ ಬಿಬಿಎಂಪಿಯ ವರದಿಯಲ್ಲಿ ಈ ಕೆಲವು ಕಾರಣಗಳು ತಿಳಿದುಬಂದಿದೆ. ಅವುಗಳೇನೆಂದರೆ, ಕೊರೊನಾ ಸೋಂಕಿತರನ್ನ ಆಸ್ಪತ್ರೆಗೆ ಸೇರಿಸೋದ್ರಲ್ಲಿ ವಿಳಂಬವಾಗುತ್ತಿದೆ. ಇದಕ್ಕೆ ಒಂದು ಕಾರಣ ಕೊವಿಡ್ ಟೆಸ್ಟ್ ರಿಪೋರ್ಟ್ ಬರಲು ಐದಾರು ದಿನ ತಡವಾಗುತ್ತಿದೆ. ಪರೀಕ್ಷಾ ವರದಿ ಬರೋ ಮುನ್ನ ಆಸ್ಪತ್ರೆಗಳು ಸೋಂಕಿತರನ್ನ ದಾಖಲಿಸಿಕೊಳ್ಳುತ್ತಿಲ್ಲ. ರಿಪೋರ್ಟ್ ಬರುವಷ್ಟರಲ್ಲಿ ಸೋಂಕಿತರ ಆರೋಗ್ಯ ಸ್ಥಿತಿ ಮತ್ತಷ್ಟು ಇಳಿಮುಖವಾಗಿರುತ್ತದೆ. ಹಾಗಾಗಿ, ಆಸ್ಪತ್ರೆಗೆ ಸೇರಿದ ಕೆಲವು ದಿನಗಳಲ್ಲೇ ಸೋಂಕಿಗೆ ಉಸಿರು ಚೆಲ್ಲುತ್ತಿದ್ದಾರೆ.

ಜೊತೆಗೆ, ಬೆಂಗಳೂರಲ್ಲಿ ನಾನಾ ಕಾಯಿಲೆಯಿಂದ ಬಳಲುವವರು ಹೆಚ್ಚಿದ್ದಾರೆ. ಆದರೆ, ಇವರು ಮುಂಚಿತವಾಗಿ ಕೊವಿಡ್​ ಟೆಸ್ಟ್ ಮಾಡಿಸಿಕೊಳ್ಳುತ್ತಿಲ್ಲ. ಒಂದು ವೇಳೆ ಅವರು ಮೊದಲೇ ಟೆಸ್ಟ್​ ಮಾಡಿಸಿಕೊಂಡು ಅದರಲ್ಲಿ ಪಾಸಿಟಿವ್​ ಬಂದರೇ ಕೂಡಲೇ ಚಿಕಿತ್ಸೆ ನೀಡಬಹುದು. ಆದರೆ, ಇದು ಆಗುತ್ತಿಲ್ಲ. ಹೀಗಾಗಿ, ಇದು ಕೂಡ ಒಂದು ಕಾರಣವಾಗಿದೆ ಎಂದು ಬಿಬಿಎಂಪಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

Published On - 8:50 am, Sat, 11 July 20

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​