AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಹೂರ್ತ ಫಿಕ್ಸ್ ಮಾಡಿ ನಾಲ್ವರು ಸಿಬ್ಬಂದಿ ಮನೆಗಳ ಮೇಲೆ ದಾಳಿ ಮಾಡಿದೆವು: BDA ಅಧ್ಯಕ್ಷ ಎಸ್ ಆರ್ ವಿಶ್ವನಾಥ್

ಅಕ್ರಮದಲ್ಲಿ ಭಾಗಿಯಾಗಿದ್ದ ಬಿಡಿಎ ಅಧಿಕಾರಿಗಳ ಮನೆ ಮೇಲೆ ಬಿಡಿಎ ಕಮಿಷನರ್ ಹೆಚ್.ಆರ್.‌ ಮಹದೇವ್ ಮತ್ತು ಅಧ್ಯಕ್ಷ ಎಸ್ ಆರ್ ವಿಶ್ವನಾಥ್ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಫ್ಲಾನ್ ಫಿಕ್ಸ್ ಮಾಡಿಕೊಂಡೇ ದಾಳಿ ನಡೆಸಿದ್ದಾಗಿ ಅವರು ತಿಳಿಸಿದ್ದಾರೆ.

ಮುಹೂರ್ತ ಫಿಕ್ಸ್ ಮಾಡಿ ನಾಲ್ವರು ಸಿಬ್ಬಂದಿ ಮನೆಗಳ ಮೇಲೆ ದಾಳಿ ಮಾಡಿದೆವು: BDA ಅಧ್ಯಕ್ಷ ಎಸ್ ಆರ್ ವಿಶ್ವನಾಥ್
guruganesh bhat
|

Updated on: Dec 04, 2020 | 6:20 PM

Share

ಬೆಂಗಳೂರು: ಬಿಡಿಎ ಜಾಗೃತ‌ ದಳ ಮತ್ತು ಪೊಲೀಸರು ಡಿಸಿಪಿ ಅನುಚೇತ್ ನೇತೃತ್ವದಲ್ಲಿ ಬಿಡಿಎ ಅಧಿಕಾರಿಗಳ ಮನೆ ಮೇಲೆ ಇಂದು ಬೆಳಗ್ಗೆ ದಾಳಿ ನಡೆಸಿದ್ದು, ಮೇಲ್ನೋಟಕ್ಕೆ ನೂರಾರು ಕೋಟಿ ಅಕ್ರಮ ನಡೆಸಿರುವುದು ಬೆಳಕಿಗೆ ಬಂದಿದೆ.

‘ಬಿಡಿಎ ಅಧಿಕಾರಿಗಳ ಮನೆ ಮೇಲಿನ ದಾಳಿಯಲ್ಲಿ 10 ಲಕ್ಷ ನಗದು ಪತ್ತೆಯಾಗಿದೆ. ಬಿಡಿಎ ನಲ್ಲಿ ಆಗಬೇಕಾದ ಅಲಾಟ್ಮೆಂಟ್ ಪತ್ರಗಳನ್ನು ತಯಾರಿಸುತ್ತಿದ್ದ ದಾಖಲೆಗಳು ಸಿಕ್ಕಿವೆ. ಇನ್ನೂ ಹೆಚ್ಚಿನ ಪರಿಶೀಲನೆ ಮುಂದುವರೆದಿದೆ’ ಎಂದು ಬಿಡಿಎ ಕಮಿಷನರ್ ಹೆಚ್.ಆರ್.‌ ಮಹದೇವ್ ಹೇಳಿದರು.

ಮುಹೂರ್ತ ಫಿಕ್ಸ್ ಮಾಡಿಯೇ ದಾಳಿ ಮಾಡಿದ್ವಿ.. ಮಾಧ್ಯಮದವರೊಂದಿಗೆ ಮಾತನಾಡಿದ BDA ಅಧ್ಯಕ್ಷ ಎಸ್ ಆರ್ ವಿಶ್ವನಾಥ್, ‘ನಾನು ಮತ್ತು ಪೊಲೀಸ್ ಆಯುಕ್ತರು ಮುಹೂರ್ತ ಫಿಕ್ಸ್ ಮಾಡಿಕೊಂಡು BDA ಸಿಬ್ಬಂದಿ ಮನೆ ಮೇಲೆ ದಾಳಿ ಮಾಡಿದ್ದೇವೆ. ಉಪಕಾರ್ಯದರ್ಶಿ ಮತ್ತು ತಹಶೀಲ್ದಾರರೊಬ್ಬರು ಅಕ್ರಮದಲ್ಲಿ ಶಾಮೀಲಾಗಿದ್ದಾರೆ. ಯಾರೇ ತಪ್ಪು ಮಾಡಿದರೂ ನಿರ್ದಾಕ್ಷಿಣ್ಯ ಕ್ರಮ ಜರುಗಿಸುತ್ತೇವೆ’ ಎಂದು ತಿಳಿಸಿದರು.

ಇಂದರ್ ಎಂಬ ಏಜೆಂಟ್ ಜೊತೆ ಸೇರಿ ಅಧಿಕಾರಿಗಳು ಅಕ್ರಮ ಎಸಗಿರುವುದು ಪತ್ತೆಯಾಗಿದೆ. ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳನ್ನು ತಕ್ಷಣ ಸಸ್ಪೆಂಡ್ ಮಾಡಲಾಗುವುದು ಎಂದು ಅವರು ಹೇಳಿದರು.

ಯಾರ ಮನೆ ಮೇಲೆ ನಡೆದಿದೆ ದಾಳಿ?

ಡಿ ಎಸ್ ಶಿವೇಗೌಡ, ತಹಶೀಲ್ದಾರ್ ಕಮಲಮ್ಮ ಮನೆ ಗುಮಾಸ್ತರಾದ ಪವಿತ್ರ, ಸಂಪತ್​ರ ಬಳಿ ಅಕ್ರಮದ ಸುಳಿವು ಸಿಕ್ಕಿದ್ದ ಕಾರಣ ಬಿಡಿಎ ಜಾಗೃತ‌ ದಳ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದರು.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ