AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BDA ಅಕ್ರಮ ನೋಟಿಸ್ ಕೊಟ್ಟಾಗ ಇದ್ದ ಹೆಸರು.. ಎಫ್​ಐಆರ್​ನಲ್ಲಿ ಕಾಣದಂತೆ ಮಾಯವಾಯ್ತು! ಪ್ರಭಾವಿಗಳ ಕೈವಾಡ?

ಬಿಡಿಎ ಸೈಟ್ ಅಕ್ರಮವಾಗಿ ಅಲಾಟ್​ ಕೇಸ್​​ನಲ್ಲಿ FIR ನೋಟಿಸ್ ಕೊಟ್ಟಾಗ ಇದ್ದ ಹೆಸರು ಎಫ್​ಐಆರ್​ನಲ್ಲಿ ಮಂಗಮಾಯವಾಗಿದೆ. ನೋಟಿಸ್ ಕೊಟ್ಟಾಗ ಇದ್ದ ಹೆಸರು ಎಫ್​ಐಆರ್​ನಲ್ಲಿಲ್ಲ.

BDA ಅಕ್ರಮ ನೋಟಿಸ್ ಕೊಟ್ಟಾಗ ಇದ್ದ ಹೆಸರು.. ಎಫ್​ಐಆರ್​ನಲ್ಲಿ ಕಾಣದಂತೆ ಮಾಯವಾಯ್ತು! ಪ್ರಭಾವಿಗಳ ಕೈವಾಡ?
ಬಿಡಿಎ ಕಚೇರಿ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Mar 02, 2021 | 10:57 AM

Share

ಬೆಂಗಳೂರು: ಬಿಡಿಎ ಸೈಟ್ ಅಕ್ರಮವಾಗಿ ಅಲಾಟ್ ಆಗಿರುವ​ ಕೇಸ್​​ನಲ್ಲಿ ನೋಟಿಸ್ ಕೊಟ್ಟಾಗ ಇದ್ದ ಹೆಸರು ಎಫ್​ಐಆರ್​ನಲ್ಲಿ (FIR)  ಮಂಗಮಾಯವಾಗಿದೆ. ನೋಟಿಸ್ ಕೊಟ್ಟಾಗ ಇದ್ದ ಹೆಸರು ಎಫ್​ಐಆರ್​ನಲ್ಲಿಲ್ಲ. ಎಫ್​ಐಆರ್​ನಲ್ಲಿ ಆ ಹೆಸರು ಕೈ ಬಿಡಲು ಕಾರಣವೇನು? ಹೆಸರು ಕೈ ಬಿಡೋದ್ರ ಹಿಂದಿದ್ಯಾ ಪ್ರಭಾವಿಗಳ ಕೈವಾಡ? ಕೈ ಬಿಟ್ಟಿದ್ದು ಯಾರ ಹೆಸರನ್ನ? ಎಂಬುವುದರ ಮಾಹಿತಿ ಇಲ್ಲಿದೆ ಓದಿ.

ಅನಾಥ ಮಕ್ಕಳ ಆಭಿವೃದ್ದಿ ಸಂಘಕ್ಕೆ ನೀಡಿರೋ BDA ಸೈಟನ್ನು ಅಕ್ರಮವಾಗಿ ಅಲಾಟ್ ಮಾಡಿಕೊಂಡಿದ್ದ ಕೇಸ್​​ಗೆ ಸಂಬಂಧಿಸಿ ಬಿಡಿಎನಲ್ಲಿ ಕೆಲಸ ಮಾಡಿದ್ದ ನಾಲ್ವರು ಅಧಿಕಾರಿಗಳಿಗೆ ಬಿಡಿಎ ಆಯುಕ್ತ H.R.ಮಹದೇವ್ ನೋಟಿಸ್ ನೀಡಿದ್ದರು.

FIRನಲ್ಲಿ ಚಿದಾನಂದ ಹೆಸರಿಲ್ಲ.. ಅನಿಲ್ ಕುಮಾರ್​, ಸುಧಾ, ಭಾಸ್ಕರ್ ಸೇರಿ ನಾಲ್ವರು ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿತ್ತು. ಇದೇ ವಿಚಾರ ಸಂಬಂಧ ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿತ್ತು. ಆದ್ರೆ ಈಗ ಪೊಲೀಸರ FIR​​ನಲ್ಲಿ ಒಬ್ಬ ಅಧಿಕಾರಿಯ ಹೆಸರೇ ಇಲ್ಲ. ಕೇವಲ ಮೂವರು ಅಧಿಕಾರಿಗಳ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ದಾಖಲಾಗಿರೋ FIRನಲ್ಲಿ ಚಿದಾನಂದ ಹೆಸರಿಲ್ಲ.

ಇನ್ನು ಚಿದಾನಂದ ವಿರುದ್ಧ ನೋಟಿಸ್​​ನಲ್ಲಿ ಗಂಭೀರ ಆರೋಪ ಕೇಳಿ ಬಂದಿದ್ದವು. ನೋಟಿಸ್​​ನಲ್ಲಿ ಕ್ರಮ ಜರುಗಿಸುವ ಬಗ್ಗೆ ಎಚ್ಚರಿಕೆ ನೀಡಿದ್ದರು. ಸದ್ಯ ಚಿದಾನಂದ ಹೆಸರು ಮಾಯಾವಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಯಾಕೆ ದೂರಿನಲ್ಲಿ ಚಿದಾನಂದ ಹೆಸರು ಉಲ್ಲೇಖ ಮಾಡಿಲ್ಲ ಅನ್ನೋ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ.

ಅಷ್ಟೂ ಅಧಿಕಾರಿಗಳಿಗೆ ನೀಡಿರೋ ನೋಟಿಸ್​ನಲ್ಲಿ ಕ್ರಮ ಜರುಗಿಸೋ ಬಗ್ಗೆ ಎಚ್ಚರಿಕೆ ನೀಡಲಾಗಿತ್ತು. ನೋಟಿಸ್​ಗೆ ಉತ್ತರ ನೀಡುವಂತೆಯೂ ಸೂಚಿಸಲಾಗಿತ್ತು. ಆದ್ರೆ ಈಗ ಎಲ್ಲರ ವಿರುದ್ಧ FIR ದಾಖಲಾಗಿದ್ರು ಒಬ್ಬರ ಹೆಸರು ಮಿಸ್ ಆಗಿದೆ. ಇದಕ್ಕೆ ಕಾರಣವೇನು ಎಂಬುದು ತಿಳಿದು ಬರಬೇಕಿದೆ.

ಇದನ್ನೂ ಓದಿ: ಬಿಡಿಎಯಿಂದ ಮತ್ತೊಂದು ಹೊಸ ಲೇಔಟ್ ನಿರ್ಮಾಣ: ಸುಮಾರು 450 ಎಕರೆ ಜಮೀನು ಸ್ವಾಧೀನಕ್ಕೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್..!

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ