AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕಿಂಗ್​ ಸೌಕರ್ಯವಿದ್ದರೆ ಮಾತ್ರ ವಾಹನ ಖರೀದಿಗೆ ಅನುಮತಿ: ಬಿಡಿಎ ಚಿಂತನೆ

ಬೆಂಗಳೂರು: ವಾಸಸ್ಥಳದ ಕಟ್ಟಡದಲ್ಲಿ ಪಾರ್ಕಿಂಗ್​ಗೆ ಸ್ಥಳಾವಕಾಶವಿದ್ದರೆ ಮಾತ್ರ ಇನ್ನು ಮುಂದೆ ವಾಹನ ಖರೀದಿಗೆ ಅನುಮತಿ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದರು. ನಗರದಲ್ಲಿ ಹೆಚ್ಚುತ್ತಿರುವ ವಾಹನ ಪಾರ್ಕಿಂಗ್ ಸಮಸ್ಯೆ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ಸಮಸ್ಯೆ ಪರಿಹರಿಸಲು ಇರುವ ಸಾಧ್ಯತೆಗಳ ಬಗ್ಗೆ ಮಾತನಾಡಿದರು. ನಗರದ ಹಲವೆಡೆ ಮನೆಯ ಮುಂಭಾಗದ ರಸ್ತೆ, ರಸ್ತೆಯ ಇಕ್ಕೆಲಗಳಲ್ಲಿ ಪಾರ್ಕಿಂಗ್​ ಮಾಡಲಾಗುತ್ತಿದೆ. ಸರ್ಕಾರಿ ಖಾಲಿ ನಿವೇಶನ ಗುರುತಿಸುವುದರೊಂದಿಗೆ, ಖಾಸಗಿ ಖಾಲಿ ನಿವೇಶನಗಳಲ್ಲಿಯೂ ಪಾರ್ಕಿಂಗ್​ಗೆ ಅವಕಾಶ ಕೊಡುವ […]

ಪಾರ್ಕಿಂಗ್​ ಸೌಕರ್ಯವಿದ್ದರೆ ಮಾತ್ರ ವಾಹನ ಖರೀದಿಗೆ ಅನುಮತಿ: ಬಿಡಿಎ ಚಿಂತನೆ
ಎಸ್​.ಆರ್.ವಿಶ್ವನಾಥ್
Ghanashyam D M | ಡಿ.ಎಂ.ಘನಶ್ಯಾಮ
|

Updated on:Dec 01, 2020 | 1:40 PM

Share

ಬೆಂಗಳೂರು: ವಾಸಸ್ಥಳದ ಕಟ್ಟಡದಲ್ಲಿ ಪಾರ್ಕಿಂಗ್​ಗೆ ಸ್ಥಳಾವಕಾಶವಿದ್ದರೆ ಮಾತ್ರ ಇನ್ನು ಮುಂದೆ ವಾಹನ ಖರೀದಿಗೆ ಅನುಮತಿ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದರು.

ನಗರದಲ್ಲಿ ಹೆಚ್ಚುತ್ತಿರುವ ವಾಹನ ಪಾರ್ಕಿಂಗ್ ಸಮಸ್ಯೆ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ಸಮಸ್ಯೆ ಪರಿಹರಿಸಲು ಇರುವ ಸಾಧ್ಯತೆಗಳ ಬಗ್ಗೆ ಮಾತನಾಡಿದರು.

ನಗರದ ಹಲವೆಡೆ ಮನೆಯ ಮುಂಭಾಗದ ರಸ್ತೆ, ರಸ್ತೆಯ ಇಕ್ಕೆಲಗಳಲ್ಲಿ ಪಾರ್ಕಿಂಗ್​ ಮಾಡಲಾಗುತ್ತಿದೆ. ಸರ್ಕಾರಿ ಖಾಲಿ ನಿವೇಶನ ಗುರುತಿಸುವುದರೊಂದಿಗೆ, ಖಾಸಗಿ ಖಾಲಿ ನಿವೇಶನಗಳಲ್ಲಿಯೂ ಪಾರ್ಕಿಂಗ್​ಗೆ ಅವಕಾಶ ಕೊಡುವ ಬಗ್ಗೆ ಬಿಬಿಎಂಪಿ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದರು.

ಪಾರ್ಕಿಂಗ್ ಸಮಸ್ಯೆ ಬಗ್ಗೆ ಪರಿಶೀಲಿಸಿ ಸಲಹೆ ನೀಡಲು ಸಮಿತಿ ರಚಿಸಲಾಗಿದೆ. ಸಮಿತಿ ವರದಿ ನೀಡಿದ ನಂತರ ಪರಿಹಾರದ ಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು.

ಪಾರ್ಕಿಂಗ್​ಗೆ ಜಾಗವಿಲ್ಲದೆ ಜನರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿಡಿಎನಲ್ಲಿ ಪ್ರಗತಿಗಿಂತ ಭ್ರಷ್ಟಾಚಾರವೇ ಹೆಚ್ಚು ಸದ್ದು ಮಾಡ್ತಿದೆ: BDA ನೂತನ ಅಧ್ಯಕ್ಷ S R ವಿಶ್ವನಾಥ್

Published On - 1:33 pm, Tue, 1 December 20

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು