AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿ ಮೇಲೆ ಕರಡಿ ದಾಳಿ, ಕಾಡಂಚಿನ ಜನಕ್ಕೆ ಶುರುವಾಗಿದೆ ಭಯ..

ಹಾವೇರಿ: ಗೌಳೇರದೊಡ್ಡಿ, ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮ. ಇಲ್ಲಿ ನೂರಕ್ಕೂ ಅಧಿಕ‌ ಕುಟುಂಬಗಳು ವಾಸವಾಗಿವೆ. ಹೈನುಗಾರಿಕೆ ಬಿಟ್ಟರೆ ಇಲ್ಲಿನ ಜನರಿಗೆ ಬೇರೇನೂ ಗೊತ್ತಿಲ್ಲ. ಆದರೆ ಕಳೆದ ಕೆಲವು ದಿನಗಳಿಂದ ಇಲ್ಲಿನ ಜನರಿಗೆ ನೆಮ್ಮದಿಯೇ ಇಲ್ಲದಂತಾಗಿದೆ. ಅರಣ್ಯ ಪ್ರದೇಶದಲ್ಲಿರುವ ಗೌಳೇರದೊಡ್ಡಿ ಜನರಿಗೆ ಕರಡಿಯ ಕಾಟ ಶುರುವಾಗಿದೆ. ನೆಮ್ಮದಿ ಕೆಡಿಸಿರುವ ಕರಡಿ: ಗೌಳೇರದೊಡ್ಡಿಯಲ್ಲಿನ ಜನರು ಬೆಳಗ್ಗೆ ಮುಂಡಗೋಡ ಪಟ್ಟಣಕ್ಕೆ ಹೋಗಿ ಮನೆ ಮನೆಗೆ ಹಾಲು ಹಾಕಿ ಬರುತ್ತಾರೆ. ನಂತರ ಅರಣ್ಯದಲ್ಲಿ ಎಮ್ಮೆಗಳನ್ನು […]

ವ್ಯಕ್ತಿ ಮೇಲೆ ಕರಡಿ ದಾಳಿ, ಕಾಡಂಚಿನ ಜನಕ್ಕೆ ಶುರುವಾಗಿದೆ ಭಯ..
ಆಯೇಷಾ ಬಾನು
| Edited By: |

Updated on: Oct 19, 2020 | 1:20 PM

Share

ಹಾವೇರಿ: ಗೌಳೇರದೊಡ್ಡಿ, ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮ. ಇಲ್ಲಿ ನೂರಕ್ಕೂ ಅಧಿಕ‌ ಕುಟುಂಬಗಳು ವಾಸವಾಗಿವೆ. ಹೈನುಗಾರಿಕೆ ಬಿಟ್ಟರೆ ಇಲ್ಲಿನ ಜನರಿಗೆ ಬೇರೇನೂ ಗೊತ್ತಿಲ್ಲ. ಆದರೆ ಕಳೆದ ಕೆಲವು ದಿನಗಳಿಂದ ಇಲ್ಲಿನ ಜನರಿಗೆ ನೆಮ್ಮದಿಯೇ ಇಲ್ಲದಂತಾಗಿದೆ. ಅರಣ್ಯ ಪ್ರದೇಶದಲ್ಲಿರುವ ಗೌಳೇರದೊಡ್ಡಿ ಜನರಿಗೆ ಕರಡಿಯ ಕಾಟ ಶುರುವಾಗಿದೆ.

ನೆಮ್ಮದಿ ಕೆಡಿಸಿರುವ ಕರಡಿ: ಗೌಳೇರದೊಡ್ಡಿಯಲ್ಲಿನ ಜನರು ಬೆಳಗ್ಗೆ ಮುಂಡಗೋಡ ಪಟ್ಟಣಕ್ಕೆ ಹೋಗಿ ಮನೆ ಮನೆಗೆ ಹಾಲು ಹಾಕಿ ಬರುತ್ತಾರೆ. ನಂತರ ಅರಣ್ಯದಲ್ಲಿ ಎಮ್ಮೆಗಳನ್ನು ಮೇಯಿಸಲು ಹೋಗುತ್ತಾರೆ. ಹೀಗೆ ಎಮ್ಮೆ ಮೇಯಿಸಲು ಹೋದಾಗ ಕರಡಿ ದಾಳಿ ಮಾಡುತ್ತಿದೆ. ಕಳೆದ ಕೆಲವು ದಿನಗಳ ಹಿಂದಷ್ಟೆ ಮುಂಡಗೋಡ ತಾಲೂಕಿನ ವ್ಯಕ್ತಿಯೊಬ್ಬನ ಮೇಲೆ ಕರಡಿ ದಾಳಿ ಮಾಡಿತ್ತು.

ಈಗ ಗೌಳೇರದೊಡ್ಡಿಯ ರಾಮು ಎಡಗೆ ಎಂಬಾತನ ಮೇಲೆ ಕರಡಿ ದಾಳಿ ಮಾಡಿದೆ. ತಲೆ, ಎರಡು ಕೈ ಮತ್ತು ಕಾಲುಗಳಿಗೆ ಕಚ್ಚಿ, ಪರಚಿ ಕರಡಿ ಗಾಯಗೊಳಿಸಿದೆ. ಗಾಯಾಳುವಿಗೆ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದ ಗೌಳೇರದೊಡ್ಡಿಯ ಜನರಿಗೆ ನೆಮ್ಮದಿಯೇ ಇಲ್ಲದಂತಾಗಿದೆ.

ಕಳೆದ‌ ಕೆಲವು ದಿನಗಳಿಂದ ಕರಡಿ ಪದೇ ಪದೇ ಕಾಡಂಚಿನ ಜನರ ಮೇಲೆ ದಾಳಿ ಮಾಡುತ್ತಿದೆ. ದಾಳಿಯಿಂದ ಕಾಡಂಚಿನ ಜನರು ಭಯದ ವಾತಾವರಣದಲ್ಲಿ ಕಾಲ ಕಳೆಯುತ್ತಿದ್ದಾರೆ. ಅದರಲ್ಲೂ ಗೌಳೇರದೊಡ್ಡಿಯಲ್ಲಿನ ಜನರಿಗಂತೂ ಕರಡಿ ದಾಳಿ ಎಲ್ಲಿಲ್ಲದ ಭಯ ಸೃಷ್ಟಿಸಿದೆ.

ಅಲ್ದೆ ಗೌಳೇರದೊಡ್ಡಿ ಸಮೀಪದ ದುಂಡಸಿ, ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಲ್ಲೂ ಕರಡಿ ದಾಳಿಯಿಂದ ಆತಂಕದ ವಾತಾವಾರಣ ಸೃಷ್ಟಿಯಾಗಿದೆ. ಮುಂಡಗೋಡ ತಾಲೂಕಿನ ಓರ್ವ ಹಾಗೂ ಗೌಳೇರದೊಡ್ಡಿಯ ಓರ್ವನ ಮೇಲೆ ಕರಡಿ ದಾಳಿ ಮಾಡಿ ಗಾಯಗೊಳಿಸಿದ್ದರು ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಕರಡಿ ದಾಳಿ ಭೀತಿಗೆ ಒಳಗಾಗಿರುವ ಗೌಳೇರದೊಡ್ಡಿಯ ಜನರಲ್ಲಿನ ಆತಂಕವನ್ನು ದೂರ ಮಾಡಬೇಕಿದೆ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ