AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕರಡಿ ಕುಣಿತ ಘೋರ, ನಗರಸಭೆ ಮಾಜಿ ಸದಸ್ಯೆ ಮೇಲೆ ಭೀಕರ ದಾಳಿ

ರಾಮನಗರ: ಚನ್ನಪಟ್ಟಣ ನಗರದಲ್ಲಿ ಕರಡಿಯೊಂದು ಪ್ರತ್ಯಕ್ಷಗೊಂಡು, ಮಹಿಳೆ ಮೇಲೆ ಭೀಕರ ದಾಳಿ ನಡೆಸಿದೆ. ಚನ್ನಪಟ್ಟಣ ನಗರದ ಸುಣ್ಣದ ಕೇರಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಸುಮಾರಿಗೆ ಕರಡಿ ಕಾಣಿಸಿಕೊಂಡಿದೆ. ಇಡೀ ನಗರ ಪ್ರದಕ್ಷಿಣೆ ಹಾಕಿರುವ ಆ ಕರಡಿ ಬೆಳಗಿನ ಜಾವ ಆರು ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಬಂದ ನಗರಸಭಾ ಮಾಜಿ ಸದಸ್ಯೆ ಸಾಕಮ್ಮ (೬೫) ಎಂಬ ವೃದ್ಧೆಯ ಮೇಲೆ ಕಾಂಪೌಂಡ್ ನಲ್ಲಿಯೇ ಹಠಾತ್ ದಾಳಿ ನಡೆಸಿದೆ. ಕಾಂಪೌಂಡ್ ನಲ್ಲಿ ಅಡಗಿ ಕುಳಿತಿದ್ದ ಕರಡಿ ಏಕಾಏಕಿ‌ ಮಹಿಳೆಯ […]

ಈ ಕರಡಿ ಕುಣಿತ ಘೋರ, ನಗರಸಭೆ ಮಾಜಿ ಸದಸ್ಯೆ ಮೇಲೆ ಭೀಕರ ದಾಳಿ
ಸಾಧು ಶ್ರೀನಾಥ್​
| Edited By: |

Updated on:May 27, 2020 | 2:16 PM

Share

ರಾಮನಗರ: ಚನ್ನಪಟ್ಟಣ ನಗರದಲ್ಲಿ ಕರಡಿಯೊಂದು ಪ್ರತ್ಯಕ್ಷಗೊಂಡು, ಮಹಿಳೆ ಮೇಲೆ ಭೀಕರ ದಾಳಿ ನಡೆಸಿದೆ. ಚನ್ನಪಟ್ಟಣ ನಗರದ ಸುಣ್ಣದ ಕೇರಿಯಲ್ಲಿ ಬೆಳಗಿನ ಜಾವ 3 ಗಂಟೆಗೆ ಸುಮಾರಿಗೆ ಕರಡಿ ಕಾಣಿಸಿಕೊಂಡಿದೆ. ಇಡೀ ನಗರ ಪ್ರದಕ್ಷಿಣೆ ಹಾಕಿರುವ ಆ ಕರಡಿ ಬೆಳಗಿನ ಜಾವ ಆರು ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಬಂದ ನಗರಸಭಾ ಮಾಜಿ ಸದಸ್ಯೆ ಸಾಕಮ್ಮ (೬೫) ಎಂಬ ವೃದ್ಧೆಯ ಮೇಲೆ ಕಾಂಪೌಂಡ್ ನಲ್ಲಿಯೇ ಹಠಾತ್ ದಾಳಿ ನಡೆಸಿದೆ.

ಕಾಂಪೌಂಡ್ ನಲ್ಲಿ ಅಡಗಿ ಕುಳಿತಿದ್ದ ಕರಡಿ ಏಕಾಏಕಿ‌ ಮಹಿಳೆಯ ಮೇಲೆ ಎರಗಿದೆ. ಅವರ ಮುಖವನ್ನು ಸಂಪೂರ್ಣವಾಗಿ ಪರಚಿ ಹಾಕಿದೆ. ಸಹಾಯಕ್ಕೆ ತೆರಳಿದ ಅವರ ಪುತ್ರ ಸುಧೀರ್ (೪೦) ಮೇಲೆ ಸಹ ದಾಳಿ ನಡೆಸಿ, ಗಾಯಗೊಳಿಸಿದೆ. ಸಾಕಮ್ಮನವರಿಗೆ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸಂಜಯ ಗಾಂಧಿ ಆಸ್ಪತ್ರೆಗೆ ಕಳುಹಿಸಿಲಾಗಿದೆ.

ಕರಡಿ ದಾಳಿಯಿಂದ ಎಚ್ಚೆತ್ತುಕೊಂಡ ಸುತ್ತಮುತ್ತಲ ಜನರ ಕೂಗು ಜೋರಾದಂತೆ ಕರಡಿ ಪರಾರಿಯಾಗಿದೆ. ಘಟನೆ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:13 pm, Wed, 27 May 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ