AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಊರು ತುಂಬಾ ಕುರುಬರೇ ಇರೋದು! ಆದ್ರೆ ಗ್ರಾ.ಪಂ. ಚುನಾವಣೆಯಲ್ಲಿ ಈಶ್ವರಪ್ಪ ಅನ್ಯಾಯ ಮಾಡಿದರು!’ ಗ್ರಾಮಸ್ಥರ ಆಕ್ರೋಶ

ಎಸ್‌ಸಿ ಸಮುದಾಯವೇ ಇಲ್ಲದಿರುವ ಬೀರಯ್ಯನಪಾಳ್ಯ ಗ್ರಾಮಕ್ಕೆ ಎಸ್‌ಸಿ ಮಹಿಳಾ ಮೀಸಲಾತಿ ಪ್ರಕಟಿಸಿರುವುದು ಗ್ರಾಮಸ್ಥರ ಬೇಸರಕ್ಕೆ ಕಾರಣವಾಗಿದೆ. ಹಾಗೂ ಈ ಬಾರಿಯ ಚುನಾವಣೆಗೆ ಬೇರೆ ಗ್ರಾಮದಿಂದ ಅಭ್ಯರ್ಥಿಯನ್ನು ಕರೆತರಬೇಕಿದೆ.

‘ಊರು ತುಂಬಾ ಕುರುಬರೇ ಇರೋದು! ಆದ್ರೆ ಗ್ರಾ.ಪಂ. ಚುನಾವಣೆಯಲ್ಲಿ ಈಶ್ವರಪ್ಪ ಅನ್ಯಾಯ ಮಾಡಿದರು!’ ಗ್ರಾಮಸ್ಥರ ಆಕ್ರೋಶ
ಇಡೀ ಊರ ತುಂಬೆಲ್ಲ ಕುರುಬ ಸಮುದಾಯದ 160 ಮನೆಗಳ 438 ಮತಗಳಿರುವ ಗ್ರಾಮ
Follow us
ಸಾಧು ಶ್ರೀನಾಥ್​
|

Updated on:Dec 08, 2020 | 4:55 PM

ಸ್ವಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಊರಿನ ಯಾರೊಬ್ಬರೂ ಮೀಸಲಾತಿಗೆ ಬಾರದ ಕಾರಣ ಬೇರೊಂದು ಗ್ರಾಮದ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲು ಸ್ಥಾನ ನೀಡುವ ಮೂಲಕ ಸಚಿವ ಈಶ್ವರಪ್ಪ ಮತ್ತು ಜಿಲ್ಲಾಧಿಕಾರಿ ರವೀಂದ್ರ ತಮ್ಮದೇ ಸಮುದಾಯಕ್ಕೆ ಮೋಸ ಮಾಡಿದ್ದಾರೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬೀರಯ್ಯನಪಾಳ್ಯ ಗ್ರಾಮದ ತುಂಬಾ ಕುರುಬ ಸಮುದಾಯ ಮನೆಗಳಿದ್ದು ಒಟ್ಟು 438 ರಿಂದ 450 ಮತದಾರರಿದ್ದಾರೆ. ಪ್ರತಿವರ್ಷ ಬೀರಯ್ಯನಪಾಳ್ಯ ಗ್ರಾಮಕ್ಕೆ ಸಾಮಾನ್ಯ ಅಥವಾ 2ಎ ಅಡಿಯಲ್ಲಿ ಗ್ರಾಮ ಪಂಚಾಯತಿ ಚುನಾವಣೆಗೆ ಮೀಸಲಾತಿ ಪ್ರಕಟಿಸಲಾಗುತ್ತಿತ್ತು.

ಆದ್ರೆ ಈ ವರ್ಷ ಎಸ್‌ಸಿ ಸಮುದಾಯವೇ ಇಲ್ಲದಿರುವ ಗ್ರಾಮಕ್ಕೆ ಎಸ್‌ಸಿ ಮಹಿಳಾ ಮೀಸಲಾತಿ ಪ್ರಕಟಿಸಿರುವುದು ಗ್ರಾಮಸ್ಥರ ಬೇಸರಕ್ಕೆ ಕಾರಣವಾಗಿದೆ. ಹಾಗೂ ಈ ಬಾರಿಯ ಚುನಾವಣೆಗೆ ಬೇರೆ ಗ್ರಾಮದಿಂದ ಅಭ್ಯರ್ಥಿಯನ್ನು ಕರೆತರಬೇಕಿದೆ.

ಗ್ರಾಮೀಣಾಭಿವೃದ್ಧಿ ಸಚಿವ ಕೆ‌ಎಸ್‌ ಈಶ್ವರಪ್ಪ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ರವೀಂದ್ರ ಸಹ ಕುರುಬ ಸಮುದಾಯದವರಾಗಿದ್ದು, ಆಡಳಿತ ಯಂತ್ರವೇ ತಮ್ಮ ಪರವಾಗಿ ನಿಲ್ಲದೇ ನಮ್ಮ ಸಮುದಾಯಕ್ಕೆ ದ್ರೋಹ ಮಾಡಿದೆ ಎಂದು ಬೀರಯ್ಯನಪಾಳ್ಯ ಗ್ರಾಮದ ‍ಚುನಾವಣಾ ಆಕಾಂಕ್ಷಿಗಳು ಹಾಗೂ ಗ್ರಾಮಸ್ಥರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಬೀರಯ್ಯನಪಾಳ್ಯ ಗ್ರಾಮವು ಸಾಮಾಜಿಕ ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದು ಸ್ವ ಗ್ರಾಮದಲ್ಲಿ ಚುನಾಯಿತ ಸದಸ್ಯರಿದ್ದರೆ ಅಭಿವೃದ್ದಿ ಮಾಡಬಹುದಾಗಿದೆ. ಆದರೆ ನೆರೆ ಗ್ರಾಮದ ಸದಸ್ಯರನ್ನ ಆಯ್ಕೆ ಮಾಡಿದರೆ ಪ್ರತಿಯೊಂದು ಕೆಲಸಕ್ಕೂ ನೆರೆ ಗ್ರಾಮಕ್ಕೆ ಅಲೆಯಬೇಕಿದೆ.

ಅಷ್ಟೆ ಅಲ್ಲದೆ ನಮ್ಮ ಊರಿನ ಅಭಿವೃದ್ದಿ ವಿಚಾರದಲ್ಲಿ ನೆರೆ ಗ್ರಾಮದವರಿಗೆ ಆಸಕ್ತಿ ಇರುವುದಿಲ್ಲ. ಮುಂದಿನ ದಿನಗಳಲ್ಲಿ ಅಭಿವೃದ್ದಿ ಕುಂಟಿತವಾದರೆ ಈಗ ಪ್ರಕಟವಾಗಿರುವ ಮೀಸಲಾತಿ ಪಟ್ಟಿ ಹಾಗೂ ಪಟ್ಟಿ ಹೊರಡಿಸಿರುವ ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾಡಳಿತವೇ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 4:53 pm, Tue, 8 December 20

ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ