AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಊರು ತುಂಬಾ ಕುರುಬರೇ ಇರೋದು! ಆದ್ರೆ ಗ್ರಾ.ಪಂ. ಚುನಾವಣೆಯಲ್ಲಿ ಈಶ್ವರಪ್ಪ ಅನ್ಯಾಯ ಮಾಡಿದರು!’ ಗ್ರಾಮಸ್ಥರ ಆಕ್ರೋಶ

ಎಸ್‌ಸಿ ಸಮುದಾಯವೇ ಇಲ್ಲದಿರುವ ಬೀರಯ್ಯನಪಾಳ್ಯ ಗ್ರಾಮಕ್ಕೆ ಎಸ್‌ಸಿ ಮಹಿಳಾ ಮೀಸಲಾತಿ ಪ್ರಕಟಿಸಿರುವುದು ಗ್ರಾಮಸ್ಥರ ಬೇಸರಕ್ಕೆ ಕಾರಣವಾಗಿದೆ. ಹಾಗೂ ಈ ಬಾರಿಯ ಚುನಾವಣೆಗೆ ಬೇರೆ ಗ್ರಾಮದಿಂದ ಅಭ್ಯರ್ಥಿಯನ್ನು ಕರೆತರಬೇಕಿದೆ.

‘ಊರು ತುಂಬಾ ಕುರುಬರೇ ಇರೋದು! ಆದ್ರೆ ಗ್ರಾ.ಪಂ. ಚುನಾವಣೆಯಲ್ಲಿ ಈಶ್ವರಪ್ಪ ಅನ್ಯಾಯ ಮಾಡಿದರು!’ ಗ್ರಾಮಸ್ಥರ ಆಕ್ರೋಶ
ಇಡೀ ಊರ ತುಂಬೆಲ್ಲ ಕುರುಬ ಸಮುದಾಯದ 160 ಮನೆಗಳ 438 ಮತಗಳಿರುವ ಗ್ರಾಮ
Follow us
ಸಾಧು ಶ್ರೀನಾಥ್​
|

Updated on:Dec 08, 2020 | 4:55 PM

ಸ್ವಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಊರಿನ ಯಾರೊಬ್ಬರೂ ಮೀಸಲಾತಿಗೆ ಬಾರದ ಕಾರಣ ಬೇರೊಂದು ಗ್ರಾಮದ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲು ಸ್ಥಾನ ನೀಡುವ ಮೂಲಕ ಸಚಿವ ಈಶ್ವರಪ್ಪ ಮತ್ತು ಜಿಲ್ಲಾಧಿಕಾರಿ ರವೀಂದ್ರ ತಮ್ಮದೇ ಸಮುದಾಯಕ್ಕೆ ಮೋಸ ಮಾಡಿದ್ದಾರೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬೀರಯ್ಯನಪಾಳ್ಯ ಗ್ರಾಮದ ತುಂಬಾ ಕುರುಬ ಸಮುದಾಯ ಮನೆಗಳಿದ್ದು ಒಟ್ಟು 438 ರಿಂದ 450 ಮತದಾರರಿದ್ದಾರೆ. ಪ್ರತಿವರ್ಷ ಬೀರಯ್ಯನಪಾಳ್ಯ ಗ್ರಾಮಕ್ಕೆ ಸಾಮಾನ್ಯ ಅಥವಾ 2ಎ ಅಡಿಯಲ್ಲಿ ಗ್ರಾಮ ಪಂಚಾಯತಿ ಚುನಾವಣೆಗೆ ಮೀಸಲಾತಿ ಪ್ರಕಟಿಸಲಾಗುತ್ತಿತ್ತು.

ಆದ್ರೆ ಈ ವರ್ಷ ಎಸ್‌ಸಿ ಸಮುದಾಯವೇ ಇಲ್ಲದಿರುವ ಗ್ರಾಮಕ್ಕೆ ಎಸ್‌ಸಿ ಮಹಿಳಾ ಮೀಸಲಾತಿ ಪ್ರಕಟಿಸಿರುವುದು ಗ್ರಾಮಸ್ಥರ ಬೇಸರಕ್ಕೆ ಕಾರಣವಾಗಿದೆ. ಹಾಗೂ ಈ ಬಾರಿಯ ಚುನಾವಣೆಗೆ ಬೇರೆ ಗ್ರಾಮದಿಂದ ಅಭ್ಯರ್ಥಿಯನ್ನು ಕರೆತರಬೇಕಿದೆ.

ಗ್ರಾಮೀಣಾಭಿವೃದ್ಧಿ ಸಚಿವ ಕೆ‌ಎಸ್‌ ಈಶ್ವರಪ್ಪ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ರವೀಂದ್ರ ಸಹ ಕುರುಬ ಸಮುದಾಯದವರಾಗಿದ್ದು, ಆಡಳಿತ ಯಂತ್ರವೇ ತಮ್ಮ ಪರವಾಗಿ ನಿಲ್ಲದೇ ನಮ್ಮ ಸಮುದಾಯಕ್ಕೆ ದ್ರೋಹ ಮಾಡಿದೆ ಎಂದು ಬೀರಯ್ಯನಪಾಳ್ಯ ಗ್ರಾಮದ ‍ಚುನಾವಣಾ ಆಕಾಂಕ್ಷಿಗಳು ಹಾಗೂ ಗ್ರಾಮಸ್ಥರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಬೀರಯ್ಯನಪಾಳ್ಯ ಗ್ರಾಮವು ಸಾಮಾಜಿಕ ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದು ಸ್ವ ಗ್ರಾಮದಲ್ಲಿ ಚುನಾಯಿತ ಸದಸ್ಯರಿದ್ದರೆ ಅಭಿವೃದ್ದಿ ಮಾಡಬಹುದಾಗಿದೆ. ಆದರೆ ನೆರೆ ಗ್ರಾಮದ ಸದಸ್ಯರನ್ನ ಆಯ್ಕೆ ಮಾಡಿದರೆ ಪ್ರತಿಯೊಂದು ಕೆಲಸಕ್ಕೂ ನೆರೆ ಗ್ರಾಮಕ್ಕೆ ಅಲೆಯಬೇಕಿದೆ.

ಅಷ್ಟೆ ಅಲ್ಲದೆ ನಮ್ಮ ಊರಿನ ಅಭಿವೃದ್ದಿ ವಿಚಾರದಲ್ಲಿ ನೆರೆ ಗ್ರಾಮದವರಿಗೆ ಆಸಕ್ತಿ ಇರುವುದಿಲ್ಲ. ಮುಂದಿನ ದಿನಗಳಲ್ಲಿ ಅಭಿವೃದ್ದಿ ಕುಂಟಿತವಾದರೆ ಈಗ ಪ್ರಕಟವಾಗಿರುವ ಮೀಸಲಾತಿ ಪಟ್ಟಿ ಹಾಗೂ ಪಟ್ಟಿ ಹೊರಡಿಸಿರುವ ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾಡಳಿತವೇ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 4:53 pm, Tue, 8 December 20

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ