AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಊರು ತುಂಬಾ ಕುರುಬರೇ ಇರೋದು! ಆದ್ರೆ ಗ್ರಾ.ಪಂ. ಚುನಾವಣೆಯಲ್ಲಿ ಈಶ್ವರಪ್ಪ ಅನ್ಯಾಯ ಮಾಡಿದರು!’ ಗ್ರಾಮಸ್ಥರ ಆಕ್ರೋಶ

ಎಸ್‌ಸಿ ಸಮುದಾಯವೇ ಇಲ್ಲದಿರುವ ಬೀರಯ್ಯನಪಾಳ್ಯ ಗ್ರಾಮಕ್ಕೆ ಎಸ್‌ಸಿ ಮಹಿಳಾ ಮೀಸಲಾತಿ ಪ್ರಕಟಿಸಿರುವುದು ಗ್ರಾಮಸ್ಥರ ಬೇಸರಕ್ಕೆ ಕಾರಣವಾಗಿದೆ. ಹಾಗೂ ಈ ಬಾರಿಯ ಚುನಾವಣೆಗೆ ಬೇರೆ ಗ್ರಾಮದಿಂದ ಅಭ್ಯರ್ಥಿಯನ್ನು ಕರೆತರಬೇಕಿದೆ.

‘ಊರು ತುಂಬಾ ಕುರುಬರೇ ಇರೋದು! ಆದ್ರೆ ಗ್ರಾ.ಪಂ. ಚುನಾವಣೆಯಲ್ಲಿ ಈಶ್ವರಪ್ಪ ಅನ್ಯಾಯ ಮಾಡಿದರು!’ ಗ್ರಾಮಸ್ಥರ ಆಕ್ರೋಶ
ಇಡೀ ಊರ ತುಂಬೆಲ್ಲ ಕುರುಬ ಸಮುದಾಯದ 160 ಮನೆಗಳ 438 ಮತಗಳಿರುವ ಗ್ರಾಮ
ಸಾಧು ಶ್ರೀನಾಥ್​
|

Updated on:Dec 08, 2020 | 4:55 PM

Share

ಸ್ವಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಊರಿನ ಯಾರೊಬ್ಬರೂ ಮೀಸಲಾತಿಗೆ ಬಾರದ ಕಾರಣ ಬೇರೊಂದು ಗ್ರಾಮದ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲು ಸ್ಥಾನ ನೀಡುವ ಮೂಲಕ ಸಚಿವ ಈಶ್ವರಪ್ಪ ಮತ್ತು ಜಿಲ್ಲಾಧಿಕಾರಿ ರವೀಂದ್ರ ತಮ್ಮದೇ ಸಮುದಾಯಕ್ಕೆ ಮೋಸ ಮಾಡಿದ್ದಾರೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬೀರಯ್ಯನಪಾಳ್ಯ ಗ್ರಾಮದ ತುಂಬಾ ಕುರುಬ ಸಮುದಾಯ ಮನೆಗಳಿದ್ದು ಒಟ್ಟು 438 ರಿಂದ 450 ಮತದಾರರಿದ್ದಾರೆ. ಪ್ರತಿವರ್ಷ ಬೀರಯ್ಯನಪಾಳ್ಯ ಗ್ರಾಮಕ್ಕೆ ಸಾಮಾನ್ಯ ಅಥವಾ 2ಎ ಅಡಿಯಲ್ಲಿ ಗ್ರಾಮ ಪಂಚಾಯತಿ ಚುನಾವಣೆಗೆ ಮೀಸಲಾತಿ ಪ್ರಕಟಿಸಲಾಗುತ್ತಿತ್ತು.

ಆದ್ರೆ ಈ ವರ್ಷ ಎಸ್‌ಸಿ ಸಮುದಾಯವೇ ಇಲ್ಲದಿರುವ ಗ್ರಾಮಕ್ಕೆ ಎಸ್‌ಸಿ ಮಹಿಳಾ ಮೀಸಲಾತಿ ಪ್ರಕಟಿಸಿರುವುದು ಗ್ರಾಮಸ್ಥರ ಬೇಸರಕ್ಕೆ ಕಾರಣವಾಗಿದೆ. ಹಾಗೂ ಈ ಬಾರಿಯ ಚುನಾವಣೆಗೆ ಬೇರೆ ಗ್ರಾಮದಿಂದ ಅಭ್ಯರ್ಥಿಯನ್ನು ಕರೆತರಬೇಕಿದೆ.

ಗ್ರಾಮೀಣಾಭಿವೃದ್ಧಿ ಸಚಿವ ಕೆ‌ಎಸ್‌ ಈಶ್ವರಪ್ಪ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ರವೀಂದ್ರ ಸಹ ಕುರುಬ ಸಮುದಾಯದವರಾಗಿದ್ದು, ಆಡಳಿತ ಯಂತ್ರವೇ ತಮ್ಮ ಪರವಾಗಿ ನಿಲ್ಲದೇ ನಮ್ಮ ಸಮುದಾಯಕ್ಕೆ ದ್ರೋಹ ಮಾಡಿದೆ ಎಂದು ಬೀರಯ್ಯನಪಾಳ್ಯ ಗ್ರಾಮದ ‍ಚುನಾವಣಾ ಆಕಾಂಕ್ಷಿಗಳು ಹಾಗೂ ಗ್ರಾಮಸ್ಥರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಬೀರಯ್ಯನಪಾಳ್ಯ ಗ್ರಾಮವು ಸಾಮಾಜಿಕ ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದು ಸ್ವ ಗ್ರಾಮದಲ್ಲಿ ಚುನಾಯಿತ ಸದಸ್ಯರಿದ್ದರೆ ಅಭಿವೃದ್ದಿ ಮಾಡಬಹುದಾಗಿದೆ. ಆದರೆ ನೆರೆ ಗ್ರಾಮದ ಸದಸ್ಯರನ್ನ ಆಯ್ಕೆ ಮಾಡಿದರೆ ಪ್ರತಿಯೊಂದು ಕೆಲಸಕ್ಕೂ ನೆರೆ ಗ್ರಾಮಕ್ಕೆ ಅಲೆಯಬೇಕಿದೆ.

ಅಷ್ಟೆ ಅಲ್ಲದೆ ನಮ್ಮ ಊರಿನ ಅಭಿವೃದ್ದಿ ವಿಚಾರದಲ್ಲಿ ನೆರೆ ಗ್ರಾಮದವರಿಗೆ ಆಸಕ್ತಿ ಇರುವುದಿಲ್ಲ. ಮುಂದಿನ ದಿನಗಳಲ್ಲಿ ಅಭಿವೃದ್ದಿ ಕುಂಟಿತವಾದರೆ ಈಗ ಪ್ರಕಟವಾಗಿರುವ ಮೀಸಲಾತಿ ಪಟ್ಟಿ ಹಾಗೂ ಪಟ್ಟಿ ಹೊರಡಿಸಿರುವ ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾಡಳಿತವೇ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 4:53 pm, Tue, 8 December 20

Follow Us
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!