AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England | ಧೋನಿಯೊಂದಿಗೆ ಹೋಲಿಸುವ ಮಟ್ಟಕ್ಕೆ ಪಂತ್ ಮತ್ತು ಕಿಷನ್ ಬೆಳೆದದ್ದು ಹೆಮ್ಮೆಯ ವಿಚಾರ: ಸಬಾ ಕರೀಮ್

‘ಇಶಾನ್ ಕಿಷನ್ ಮತ್ತು ರಿಷಬ್ ಪಂತ್ ಇಬ್ಬರೂ 2016ರ ಅಂಡರ್-19 ವಿಶ್ವಕಪ್​ನಲ್ಲಿ ಆಡಿದ್ದಾರೆ. ಹಾಗಾಗಿ ಅವರಿಗೆ ಭದ್ರವಾದ ಅಡಿಪಾಯ ಸಿಕ್ಕಿದೆ. ಅಂತರರಾಷ್ಟ್ರೀಯ ಕ್ರಿಕೆಟ್​ನ ಹೊಣೆಗಾರಿಕೆಗಳನ್ನು ಅವರು ಅರ್ಥಮಾಡಿಕೊಂಡಿದ್ದಾರೆ ಮತ್ತು ತಮ್ಮ ಸಾಮರ್ಥ್ಯವನ್ನು ಹೇಗೆ ಸಾಬೀತು ಮಾಡಬೇಕೆನ್ನುವ ಅಂಶವನ್ನೂ ತಿಳಿದುಕೊಂಡಿದ್ದಾರೆ,’ ಎಂದು ಕರೀಮ್ ಹೇಳಿದರು.

India vs England | ಧೋನಿಯೊಂದಿಗೆ ಹೋಲಿಸುವ ಮಟ್ಟಕ್ಕೆ ಪಂತ್ ಮತ್ತು ಕಿಷನ್ ಬೆಳೆದದ್ದು ಹೆಮ್ಮೆಯ ವಿಚಾರ: ಸಬಾ ಕರೀಮ್
ರಿಷಭ್ ಪಂತ್ ಮತ್ತು ಇಶಾನ್ ಕಿಷನ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Mar 16, 2021 | 5:12 PM

Share

ರಿಷಭ್ ಪಂತ್ ಮತ್ತು ಇಶಾನ್ ಕಿಷನ್ ಯಾರು ಹಿತವರು ನಿಮಗೆ ಈ ಇಬ್ಬರೊಳಗೆ? ಇಂಥದೊಂದು ಚರ್ಚೆ ಶುರುವಾಗಿರೋದು ನಿಮ್ಮ ಗಮನಕ್ಕೂ ಬಂದಿರಬಹುದು. ಕ್ರಿಕೆಟ್ ಆಟವೇ ಹಾಗೆ. ಹೋಲಿಕೆಗಳು ಈ ಆಟದ ಅವಿಭಾಜ್ಯ ಅಂಗ. ಅಂದಕಾಲತ್ತಿಲ್ ನಡೆದುಕೊಂಡು ಬಂದಿರುವ ಪ್ರಕ್ರಿಯೆ ಇದು. ಪಂತ್ ಮತ್ತು ಕಿಷನ್ ಒಂದೇ ಕೆಟೆಗರಿಗೆ ಸೇರಿದ ಆಟಗಾರರು, ಅಂದರೆ ವಿಕೆಟ್​ಕೀಪರ್/ಬ್ಯಾಟ್ಸ್​ಮನ್​ಗಳು. ಬ್ಯಾಟಿಂಗ್ ವಿಷಯಕ್ಕೆ ಬಂದರೆ ಇಬ್ಬರೂ ಚೆಂಡಿರೋದೆ ಚಚ್ಚಲು ಎಂಬ ತತ್ವದಲ್ಲಿ ನಂಬಿಕೆ ಇಟ್ಟಿರುವವರು. ವಿಕೆಟ್​ ಹಿಂದೆ ಸಹ ಅವರಲ್ಲಿ ಉಲ್ಲೇಖಿಸಬಹುದಾದ ನ್ಯೂನತೆಗಳಿಲ್ಲ. ಭಾರತದ ಮಾಜಿ ವಿಕೆಟ್​ಕೀಪರ್/ಬ್ಯಾಟ್ಸ್​ಮನ್ ಮತ್ತು ಅಯ್ಕೆ ಸಮಿತಿಯ ಮಾಜಿ ಸದಸ್ಯ ಸಬಾ ಕರೀಮ್ ಅವರ ಪ್ರಕಾರ ಪಂತ್ ಮತ್ತು ಕಿಷನ್ ಇಬ್ಬರೂ ಕ್ರಿಕೆಟ್​ನ ಮೂರು ಆವೃತ್ತಿಗಳಿಗೆ ಸೂಟ್​ ಆಗುವ ಆಟಗಾರರು. ಟೆಸ್ಟ್​ ಕ್ರಿಕೆಟ್​ನಲ್ಲಿ ಪಂತ್ ತೋರಿದ ಪರಾಕ್ರಮಶಾಲಿ ಬ್ಯಾಟಿಂಗ್ ಪ್ರದರ್ಶನ ಮತ್ತು ತಾನಾಡಿದ ಮೊದಲ ಪಂದ್ಯದಲ್ಲೇ ಭರ್ಜರಿ ಅರ್ಧ ಶತಕ ಬಾರಿಸಿದ ಕಿಷನ್ ಅವರ ಬ್ಯಾಟಿಂಗ್ ನೋಡಿದ ನಂತರವೇ ಕರೀಮ್ ಈ ಅಭಿಪ್ರಾಯ ತಳೆದಿದ್ದಾರೆ.

ಸುದ್ದಿಸಂಸ್ಥೆಯೊಂದು ನಡೆಸಿದ ಚರ್ಚೆಯಲ್ಲಿ ಪಾಲ್ಗೊಂಡು ಮಾತಾಡಿದ ಕರೀಮ್; ಪಂತ್ ಮತ್ತು ಕಿಷನ್ ಇಬ್ಬರೂ ಮ್ಯಾಚ್​ವಿನ್ನರ್​ಗಳು ಮತ್ತು ಇಂಥ ಪ್ರಚಂಡ ಯುವ ಪ್ರತಿಭೆಗಳನ್ನು ಪಡೆದಿರುವ ಭಾರತ ಧನ್ಯ ಎಂದು ಹೇಳಿದರು. ‘ತಾವು ಮ್ಯಾಚ್​ವಿನ್ನರ್​ಗಳೆಂದು ಸಾಬೀತು ಮಾಡಲು ಇಬ್ಬರೂ ಪ್ರಯತ್ನಿಸಿದ್ದಾರೆ. ಹಿಂದೆ, ಪಂತ್ ಈ ಅಂಶವನ್ನು ಟೆಸ್ಟ್​ಗಳಲ್ಲಿ ಪ್ರೂವ್ ಮಾಡಿ ಸೀಮಿತ ಓವರ್​ಗಳ ಕ್ರಿಕೆಟ್​ಗೆ ವಾಪಸ್ಸಾದರು. ಈಗ ಕಿಷನ್ ತನಗೆ ದೊರೆತ ಮೊದಲ ಅವಕಾಶದಲ್ಲೇ ಪ್ರತಿಭೆಯನ್ನು ಮೆರೆದಿದ್ದಾರೆ, ಇಬ್ಬರ ಮೈಂಡ್​ಸೆಟ್​ ಒಂದೇ ರೀತಿಯಾಗಿದೆ’ ಎಂದು ಕರೀಮ್ ಹೇಳಿದರು.

‘ಕಿರು ಆವೃತ್ತಿಯ ಕ್ರಿಕೆಟ್​ನಲ್ಲಿ ಇಶಾನ್ ಕಿಷನ್ ಮತ್ತು ರಿಷಭ್ ಪಂತ್​ರಂಥ ಪಂದ್ಯ ಗೆದ್ದುಕೊಡಬಲ್ಲ ಸಾಮರ್ಥ್ಯದ ಆಟಗಾರರು ಭಾರತಕ್ಕೆ ಲಭ್ಯರಿರುವುದು ಅದೃಷ್ಟವೆಂದೇ ಹೇಳಬೇಕು. ಮುಂಬರುವ ದಿನಗಳಲ್ಲಿ ಇವರಿಬ್ಬರು, ಎಲ್ಲ ಮೂರು ಫಾರ್ಮಾಟ್​ಗಳಲ್ಲೂ ಭಾರತವನ್ನು ಪ್ರತಿನಿಧಿಸಲಿದ್ದಾರೆನ್ನುವ ಭರವಸೆ ನನಗಿದೆ,’ ಎಂದು ಕರೀಮ್ ಹೇಳಿದರು.

Saba Karim

ಸಬಾ ಕರೀಮ್

‘2016ರಲ್ಲಿ ಅಂಡರ್-19 ವಿಶ್ವಕಪ್​ನಲ್ಲಿ ಭಾಗವಹಿಸಿದ ಭಾರತದ ಎಳೆಯರ ತಂಡದ ಭಾಗವಾಗಿದ್ದ ಪಂತ್ ಮತ್ತು ಕಿಷನ್ ಆ ಟೂರ್ನಿಯಲ್ಲಿ ತೋರಿದ ಅಪ್ರತಿಮ ಪ್ರದರ್ಶನಗಳಿಂದ ಸೀನಿಯರ್​ ಟೀಮಿನಲ್ಲಿ ಆಡುವ ಅರ್ಹತೆ ಗಿಟ್ಟಿಸಿದ್ದಾರೆ. ಸದರಿ ಟೂರ್ನಿಯಲ್ಲಿ ಕಿಷನ್ ತಂಡವನ್ನು ಮುನ್ನಡೆಸಿದ್ದರೆ, ಪಂತ್ ಬ್ಯಾಟ್​ನಿಂದ ಉತ್ತಮ ಪ್ರದರ್ಶನಗಳನ್ನು ನೀಡಿದ್ದರು. ಕಿರಿ ವಯಸ್ಸಿನಲ್ಲಿ ಪಡೆದುಕೊಂಡ ಅನುಭವವೇ ಅವರು ಅಂತರರಾಷ್ಟ್ರೀಯ ಕ್ರಿಕೆಟ್​ನ ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಲು ನೆರವಾಗಿದೆ ಎಂದು ಕರೀಮ್ ಹೇಳಿದರು.

‘ಇಶಾನ್ ಕಿಷನ್ ಮತ್ತು ರಿಷಬ್ ಪಂತ್ ಇಬ್ಬರೂ 2016ರ ಅಂಡರ್-19 ವಿಶ್ವಕಪ್​ನಲ್ಲಿ ಆಡಿದ್ದಾರೆ. ಹಾಗಾಗಿ ಅವರಿಗೆ ಭದ್ರವಾದ ಅಡಿಪಾಯ ಸಿಕ್ಕಿದೆ. ಅಂತರರಾಷ್ಟ್ರೀಯ ಕ್ರಿಕೆಟ್​ನ ಹೊಣೆಗಾರಿಕೆಗಳನ್ನು ಅವರು ಅರ್ಥಮಾಡಿಕೊಂಡಿದ್ದಾರೆ ಮತ್ತು ತಮ್ಮ ಸಾಮರ್ಥ್ಯವನ್ನು ಹೇಗೆ ಸಾಬೀತು ಮಾಡಬೇಕೆನ್ನುವ ಅಂಶವನ್ನೂ ತಿಳಿದುಕೊಂಡಿದ್ದಾರೆ’ ಎಂದು ಕರೀಮ್ ಹೇಳಿದರು. ಯುವ ಆಟಗಾರನ್ನು ಹಿಂದಿನ ಗ್ರೇಟ್​ ಆಟಗಾರರಿಗೆ ಹೋಲಿಸುವುದು ಭಾರತದಲ್ಲಿ ಅನಿವಾರ್ಯ, ಪಂತ್ ಹಾಗೂ ಕಿಷನ್​ಗೆ ಅದರ ಬಗ್ಗೆ ಅರಿವಿದೆ ಎಂದು ಕರೀಮ್ ಹೇಳುತ್ತಾರೆ.

‘ನಿರ್ಭೀತಿಯ ಮನೋಭಾವ, ಬಿಗ್​ ಹಿಟ್ಟಿಂಗ್ ಮತ್ತು ವಿಕೆಟ್​ಗಳ ಹಿಂದೆ ತೋರುವ ಪ್ರದರ್ಶನಗಳಿಂದ ಅವರನ್ನು ಎಂ.ಎಸ್. ಧೋನಿಯೊಂದಿಗೆ ಹೋಲಿಸಲಾಗುತ್ತಿದೆ. ಇದಕ್ಕಿಂತ ದೊಡ್ಡ ಸಾಧನೆ ಅವರಿಗೆ ಮತ್ತೊಂದಿಲ್ಲ. ಮೈದಾನದಲ್ಲಿ ಕೆಚ್ಚೆದೆಯಿಂದ ಆಡಿ ಡೆವಿಲ್-ಮೇ-ಕೇರ್ ಧೋರಣೆ ಪ್ರದರ್ಶಿಸುವ ಪಂತ್ ಮತ್ತು ಕಿಷನ್ ಟೀಮಿಗೆ ತಾವು ಯಾವ ರೀತಿಯ ಸೇವೆ ಒದಗಿಸಬೇಕು ಅನ್ನುವುದನ್ನು ಗ್ರಹಿಸಿಕೊಂಡು ಲೆಕ್ಕಾಚಾರದ ರಿಸ್ಕ್​ಗಳೊಂದಿಗೆ ಬೆರಗು ಹುಟ್ಟಿಸುವ ಆಕ್ರಮಣಶೀಲತೆಯನ್ನು ಪ್ರದರ್ಶಿಸುತ್ತಿರುವುದು ಮನಸ್ಸಿಗೆ ಮುದ ನೀಡುತ್ತದೆ’ ಎಂದು ಕರೀಮ್ ಹೇಳಿದ್ದಾರೆ.

ಇದನ್ನೂ ಓದಿ: India vs England: ರೋಹಿತ್ ಆಡದಿರುವುದು ಬ್ರೇಕಿಂಗ್ ನ್ಯೂಸ್ ಎಂದ ಪಾರ್ಥೀವ್ ಪಟೇಲ್

Published On - 5:11 pm, Tue, 16 March 21

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್