AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾಹಿತ ಮಹಿಳೆ ಜೋಡಿ ಕೊಲೆ: ಐವರು ಅರೆಸ್ಟ್, ಬಹಿರಂಗವಾಯ್ತು ಕೊಲೆ ರಹಸ್ಯ!

ಬೆಳಗಾವಿ: ಮಚ್ಛೆ ಗ್ರಾಮದಲ್ಲಿ ವಿವಾಹಿತ ಮಹಿಳೆಯರಿಬ್ಬರ ಜೋಡಿ ಕೊಲೆ ಪ್ರಕರಣ ಸಂಬಂಧ ಮಹಿಳೆ ಸೇರಿ ಐವರು ಆರೋಪಿಗಳನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಡಿಸಿಪಿ ವಿಕ್ರಂ ಆಮಟೆ ಸುದ್ದಿಗೋಷ್ಠಿ ನಡೆಸಿದ್ದಾರೆ. ಸೆಪ್ಟೆಂಬರ್ 26ರ ಸಂಜೆ 4 ಗಂಟೆಗೆ ವಾಕಿಂಗ್‌ಗೆ ಹೋಗಿದ್ದ ಗರ್ಭಿಣಿ ಸೇರಿ ಇಬ್ಬರು ಮಹಿಳೆಯರನ್ನುಆರೋಪಿಗಳು ಕೊಲೆ ಮಾಡಿದ್ದರು. ರೋಹಿಣಿ ಹುಲಮನಿ(23), ರಾಜಶ್ರೀ ಬನ್ನೂರ್(21) ಮೃತರು. ಈ ಪ್ರಕರಣ ಸಂಬಂಧ ಕಾಳೇನಟ್ಟಿ ಗ್ರಾಮದ ಕಲ್ಪನಾ ಬಸರಿಮರದ(35), ಮಹಾರಾಷ್ಟ್ರ ಮೂಲದ ಮಹೇಶ್ ನಾಯಿಕ್, ಬೆಳಗುಂದಿ […]

ವಿವಾಹಿತ ಮಹಿಳೆ ಜೋಡಿ ಕೊಲೆ: ಐವರು ಅರೆಸ್ಟ್, ಬಹಿರಂಗವಾಯ್ತು ಕೊಲೆ ರಹಸ್ಯ!
ಆಯೇಷಾ ಬಾನು
| Edited By: |

Updated on: Oct 02, 2020 | 1:56 PM

Share

ಬೆಳಗಾವಿ: ಮಚ್ಛೆ ಗ್ರಾಮದಲ್ಲಿ ವಿವಾಹಿತ ಮಹಿಳೆಯರಿಬ್ಬರ ಜೋಡಿ ಕೊಲೆ ಪ್ರಕರಣ ಸಂಬಂಧ ಮಹಿಳೆ ಸೇರಿ ಐವರು ಆರೋಪಿಗಳನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಡಿಸಿಪಿ ವಿಕ್ರಂ ಆಮಟೆ ಸುದ್ದಿಗೋಷ್ಠಿ ನಡೆಸಿದ್ದಾರೆ.

ಸೆಪ್ಟೆಂಬರ್ 26ರ ಸಂಜೆ 4 ಗಂಟೆಗೆ ವಾಕಿಂಗ್‌ಗೆ ಹೋಗಿದ್ದ ಗರ್ಭಿಣಿ ಸೇರಿ ಇಬ್ಬರು ಮಹಿಳೆಯರನ್ನುಆರೋಪಿಗಳು ಕೊಲೆ ಮಾಡಿದ್ದರು. ರೋಹಿಣಿ ಹುಲಮನಿ(23), ರಾಜಶ್ರೀ ಬನ್ನೂರ್(21) ಮೃತರು. ಈ ಪ್ರಕರಣ ಸಂಬಂಧ ಕಾಳೇನಟ್ಟಿ ಗ್ರಾಮದ ಕಲ್ಪನಾ ಬಸರಿಮರದ(35), ಮಹಾರಾಷ್ಟ್ರ ಮೂಲದ ಮಹೇಶ್ ನಾಯಿಕ್, ಬೆಳಗುಂದಿ ಗ್ರಾಮದ ರಾಹುಲ್ ಪಾಟೀಲ್, ಗಣೇಶಪುರದ ರೋಹಿತ್ ವಡ್ಡರ್, ಕಾಳೇನಟ್ಟಿ ಗ್ರಾಮದ ಶಾನೂರ್ ಬನ್ನಾರನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತೆ ಅಂತ ಕೊಲೆ ಮಾಡಿಸಿದಳು: ಆರೋಪಿ ಕಲ್ಪನಾ ಕೊಲೆಯಾದ ರೋಹಿಣಿ ಗಂಡ ಗಂಗಪ್ಪನ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಅಲ್ಲದೆ ಗಂಗಪ್ಪನಿಗೆ ಅವಶ್ಯಕತೆ ಇದ್ದಾಗ ಹಣ ನೀಡುತ್ತಿದ್ದಳು. ಆದರೆ ಗಂಗಪ್ಪ ರೋಹಿಣಿ ಜೊತೆ ಮದುವೆಯಾದ ಬಳಿಕ ಕಲ್ಪನಾಳನ್ನು ದೂರ ಮಾಡಿದ್ದ.

ಅಕ್ರಮ ಸಂಬಂಧಕ್ಕೆ ರೋಹಿಣಿ ಅಡ್ಡಿಯಾಗಿದ್ದಳೆಂದು ಸಂಚು ರೂಪಿಸಿ ತನ್ನ ಸಂಬಂಧಿ ಮಹೇಶ ನಾಯಕ್‌ಗೆ ಹೇಳಿಸಿ ಕಲ್ಪನಾಳ ಹತ್ಯೆ ಮಾಡಿಸಿದ್ದಾಳೆ. ಆರೋಪಿಗಳು ರೋಹಿಣಿ ಜೊತೆ ವಾಕಿಂಗ್‌ಗೆ ಹೋಗಿದ್ದ ಜಯಶ್ರೀಯನ್ನು ಹತ್ಯೆಗೈದು ಪರಾರಿಯಾಗಿದ್ರು. ಸದ್ಯ ಈಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ