AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂತ ಬಂಗಲೆಯಂತಾದ ಸುವರ್ಣಸೌಧ, ಸತತ 2ನೇ ಬಾರಿ ಬೆಳಗಾವಿ ಅಧಿವೇಶನ ರದ್ದು..

ಬೆಳಗಾವಿ: ಅದು ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳಿಗೆ ಧ್ವನಿಯಾಗಿ, ನಾಡದ್ರೋಹಿಗಳಿಗೆ ತಕ್ಕ ಉತ್ತರ ನೀಡುವಂತಹ ಸೌಧವಾಗಬೇಕಿತ್ತು. ಆದ್ರೆ ಸರ್ಕಾರದ ಬೇಜವಾಬ್ದಾರಿಗೆ ಆ ಬಂಗಲೆ ಇದೀಗ ಭೂತದ ಬಂಗಲೆಯಾಗಿ ಮಾರ್ಪಡುತ್ತಿದೆ. ರಾಜ್ಯ ಸರ್ಕಾರ ಮರಾಠಾ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸುವ ಮೂಲಕ ‌ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ಬೆನ್ನಲ್ಲೇ,  ಸರ್ಕಾರದ ಆ ಒಂದು ನಿರ್ಧಾರ ಇದೀಗ ಮತ್ತೆ ಉತ್ತರ ಕರ್ನಾಟಕ ಜನ ಹಾಗೂ ಕನ್ನಡಪರ ಸಂಘಟನೆಗಳನ್ನ ಕೆರಳಿಸುವಂತೆ ಮಾಡಿದೆ. ಸತತ 2ನೇ ಬಾರಿ ಬೆಳಗಾವಿ ಅಧಿವೇಶನ ರದ್ದು ಉತ್ತರ ಕರ್ನಾಟಕದ […]

ಭೂತ ಬಂಗಲೆಯಂತಾದ ಸುವರ್ಣಸೌಧ, ಸತತ 2ನೇ ಬಾರಿ ಬೆಳಗಾವಿ ಅಧಿವೇಶನ ರದ್ದು..
ಪೃಥ್ವಿಶಂಕರ
|

Updated on:Nov 20, 2020 | 10:03 AM

Share

ಬೆಳಗಾವಿ: ಅದು ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳಿಗೆ ಧ್ವನಿಯಾಗಿ, ನಾಡದ್ರೋಹಿಗಳಿಗೆ ತಕ್ಕ ಉತ್ತರ ನೀಡುವಂತಹ ಸೌಧವಾಗಬೇಕಿತ್ತು. ಆದ್ರೆ ಸರ್ಕಾರದ ಬೇಜವಾಬ್ದಾರಿಗೆ ಆ ಬಂಗಲೆ ಇದೀಗ ಭೂತದ ಬಂಗಲೆಯಾಗಿ ಮಾರ್ಪಡುತ್ತಿದೆ. ರಾಜ್ಯ ಸರ್ಕಾರ ಮರಾಠಾ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸುವ ಮೂಲಕ ‌ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ಬೆನ್ನಲ್ಲೇ,  ಸರ್ಕಾರದ ಆ ಒಂದು ನಿರ್ಧಾರ ಇದೀಗ ಮತ್ತೆ ಉತ್ತರ ಕರ್ನಾಟಕ ಜನ ಹಾಗೂ ಕನ್ನಡಪರ ಸಂಘಟನೆಗಳನ್ನ ಕೆರಳಿಸುವಂತೆ ಮಾಡಿದೆ.

ಸತತ 2ನೇ ಬಾರಿ ಬೆಳಗಾವಿ ಅಧಿವೇಶನ ರದ್ದು ಉತ್ತರ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನೂರಾರು ಕೋಟಿ ರೂಪಾಯಿ ವೆಚ್ಚ ಮಾಡಿ ಸುವರ್ಣ ವಿಧಾನಸೌಧ ಕಟ್ಟಲಾಯ್ತು. ಅಷ್ಟೇ ಅಲ್ಲ ಪ್ರತಿ ವರ್ಷ ಅಧಿವೇಶನ ನಡೆಸಲು ತೀರ್ಮಾನಿಸಲಾಯ್ತು. ಅದರಂತೆ ಉತ್ತರ ಕರ್ನಾಟಕದ ಜಿಲ್ಲೆಗಳ ಸಮಸ್ಯೆಗಳ ಬಗ್ಗೆ ಚಳಿಗಾಲ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುತ್ತಿತ್ತು.

ಆದರೆ ಕಳೆದ ಎರಡು ವರ್ಷಗಳಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಿಲ್ಲ. ಕಳೆದ ಬಾರಿ ಉಂಟಾದ ಭೀಕರ ಪ್ರವಾಹದ ನೆಪ ಹೇಳಿ ಅಧಿವೇಶನ ಮಾಡಲಿಲ್ಲ. ಈ ಬಾರಿ ಕೋವಿಡ್ ನೆಪ ಹೇಳಿ ಚಳಿಗಾಲದ ಅಧಿವೇಶನ ಬೆಂಗಳೂರಲ್ಲೇ ನಡೆಸಲು ತೀರ್ಮಾನಿಸಿರುವುದು ಈ ಭಾಗದ ಜನರ ಆಕ್ರೋಶ ಕಾರಣವಾಗಿದೆ.

ಭೂತ ಬಂಗಲೆಯಂತಾದ ಸುವರ್ಣಸೌಧ.. ಕಳೆದ ಎರಡು ವರ್ಷದಿಂದ ಸುವರ್ಣಸೌಧದ ನಿರ್ವಹಣೆ ಆಗಿಲ್ಲ. ಸ್ಪಟಿಕದಂತಿದ್ದ ಕಟ್ಟಡ ಇದೀಗ ಪಾಚಿ ಕಟ್ಟಿ ಕಂದು ಬಣ್ಣಕ್ಕೆ ತಿರುಗಿದೆ. ನಿರ್ವಹಣೆ ಮಾಡಲು ಹಣ ಕೂಡ ಸರ್ಕಾರ ನೀಡುತ್ತಿಲ್ಲ. ಇತ್ತ ಅಧಿವೇಶನವನ್ನು ಸಹ ಮಾಡುತ್ತಿಲ್ಲ. ಹೀಗಾಗಿ ಸುವರ್ಣಸೌಧವನ್ನ ಉಗ್ರಾಣ ಮಾಡಿಬಿಡಿ ಅಂತಾ ಕನ್ನಡಪರ ಸಂಘಟನೆ ಕಾರ್ಯಕರ್ತರು ಆಕ್ರೋಶವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯ ಸರ್ಕಾರ ಪದೇಪದೇ ಉತ್ತರ ಕರ್ನಾಟಕ ಹಾಗೂ ಗಡಿ ಜಿಲ್ಲೆಗಳನ್ನ ನಿರ್ಲಕ್ಷಿಸುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ‌‌. ಇದರ ಮಧ್ಯೆ ಸುವರ್ಣಸೌಧದಲ್ಲಿ ನಡೆಸುತ್ತಿದ್ದ ಚಳಿಗಾಲದ ಅಧಿವೇಶನಕ್ಕೂ ಬ್ರೇಕ್ ಹಾಕಿದೆ. ಇನ್ನಾದ್ರೂ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸುವರ್ಣಸೌಧ ಸದ್ಬಳಕೆಯಾಗಲಿ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡ್ತಿರುವ ಮಹಾರಾಷ್ಟ್ರ ನಾಯಕರ ಬಾಯಿ ಮುಚ್ಚಿಸುವ ಕೆಲಸಕ್ಕೆ ರಾಜ್ಯ ಸರ್ಕಾರ ಮುಂದಾಗಲಿ ಎಂಬುದು ಗಡಿಭಾಗದ ಕನ್ನಡಿಗರ ಒತ್ತಾಯ.

Published On - 8:33 am, Fri, 20 November 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು