ಬಂಧಿತ ಆರೋಪಿಗೆ ಸೋಂಕು: CCB ಕಚೇರಿ ಸೀಲ್‌ಡೌನ್‌, ಪೊಲೀಸ‌ರಿಗೂ ಕ್ವಾರಂಟೈನ್‌!

ಬೆಂಗಳೂರು: ಬಂಧಿತ ಆರೋಪಿಯೊಬ್ಬನಿಗೆ ಕೊರೊನಾ ಸೋಂಕು ಇರುವುದು ದೃಢವಾಗುತ್ತಿದ್ದಂತೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ ಪೊಲೀಸರಲ್ಲಿ ತಳಮಳ ಶುರುವಾಗಿದೆ. ಈ ಸಂಬಂಧ ಸೋಂಕಿತನ ಸಂಪರ್ಕದಲ್ಲಿದ್ದ ಏಳು ಜನ ಸಿಸಿಬಿ ಪೊಲೀಸ್‌ ಸಿಬ್ಬಂದಿಯನ್ನ ಕ್ವಾರಂಟೈನ್‌ ಮಾಡಲಾಗಿದೆ. ಇನ್ನುಳಿದ ಸಿಬ್ಬಂದಿ ಅಂದ್ರೆ ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಮಲ್ಲೇಶ್ವರದಲ್ಲಿರುವ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಕೊವಿಡ್‌-19 ಟೆಸ್ಟ್‌ಗೆ ಒಳಪಡಿಸಲಾಗಿದೆ. ಈ ಸಿಬ್ಬಂದಿಯ ಗಂಟಲು ದ್ರವದ ಸ್ಯಾಂಪಲ್‌ ಪಡೆದಿದ್ದು ಲ್ಯಾಬ್‌ ಪರೀಕ್ಷೆಗೆ ಕಳಿಸಲಾಗಿದೆ. ಇನ್ನೊಂದೆಡೆ ಕೇಂದ್ರ ಅಪರಾಧ ದಳದ ಕಚೇರಿಯನ್ನ(CCB) ತಕ್ಷಣದಿಂದಲೇ ಸೀಲ್‌ಡೌನ್‌ ಮಾಡಲಾಗಿದೆ. ಇದರ […]

ಬಂಧಿತ ಆರೋಪಿಗೆ ಸೋಂಕು: CCB ಕಚೇರಿ ಸೀಲ್‌ಡೌನ್‌, ಪೊಲೀಸ‌ರಿಗೂ ಕ್ವಾರಂಟೈನ್‌!
ಸಾಧು ಶ್ರೀನಾಥ್​

Updated on: Jun 12, 2020 | 5:00 PM

ಬೆಂಗಳೂರು: ಬಂಧಿತ ಆರೋಪಿಯೊಬ್ಬನಿಗೆ ಕೊರೊನಾ ಸೋಂಕು ಇರುವುದು ದೃಢವಾಗುತ್ತಿದ್ದಂತೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ ಪೊಲೀಸರಲ್ಲಿ ತಳಮಳ ಶುರುವಾಗಿದೆ.

ಈ ಸಂಬಂಧ ಸೋಂಕಿತನ ಸಂಪರ್ಕದಲ್ಲಿದ್ದ ಏಳು ಜನ ಸಿಸಿಬಿ ಪೊಲೀಸ್‌ ಸಿಬ್ಬಂದಿಯನ್ನ ಕ್ವಾರಂಟೈನ್‌ ಮಾಡಲಾಗಿದೆ. ಇನ್ನುಳಿದ ಸಿಬ್ಬಂದಿ ಅಂದ್ರೆ ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಮಲ್ಲೇಶ್ವರದಲ್ಲಿರುವ ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ಕೊವಿಡ್‌-19 ಟೆಸ್ಟ್‌ಗೆ ಒಳಪಡಿಸಲಾಗಿದೆ. ಈ ಸಿಬ್ಬಂದಿಯ ಗಂಟಲು ದ್ರವದ ಸ್ಯಾಂಪಲ್‌ ಪಡೆದಿದ್ದು ಲ್ಯಾಬ್‌ ಪರೀಕ್ಷೆಗೆ ಕಳಿಸಲಾಗಿದೆ.

ಇನ್ನೊಂದೆಡೆ ಕೇಂದ್ರ ಅಪರಾಧ ದಳದ ಕಚೇರಿಯನ್ನ(CCB) ತಕ್ಷಣದಿಂದಲೇ ಸೀಲ್‌ಡೌನ್‌ ಮಾಡಲಾಗಿದೆ. ಇದರ ಬೆನ್ನಲ್ಲೇ ಆರೋಗ್ಯಾಧಿಕಾರಿಗಳು ಸಿಸಿಬಿ ಕಚೇರಿಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್‌ ಮಾಡಿದ್ದಾರೆ.

Published On - 4:57 pm, Fri, 12 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us