AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ಮಂದಿಗೆ ಸಿಕ್ತು ರಿಲೀಫ್, ಎಂದಿನಂತೆ ಎಲ್ಲವೂ ಸ್ಟಾರ್ಟ್

ಬೆಂಗಳೂರು: ಒಂದು ವಾರದ ಲಾಕ್​ಡೌನ್​ನಿಂದ ಸಿಲಿಕಾನ್ ಸಿಟಿ ಮಂದಿಗೆ ಇಂದು ರಿಲೀಫ್ ಸಿಕ್ಕಿದೆ. ಇಂದಿನಿಂದ ಅನ್ ಲಾಕ್ 2.0 ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ನಗರದ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಬೆಳಗ್ಗೆಯೇ ಜನ ವಾಕಿಂಗ್, ಜಾಕಿಂಗ್ ಶುರು ಮಾಡಿದ್ದಾರೆ. ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಲಾಕ್​ಡೌನ್ ಹಿನ್ನೆಲೆಯಲ್ಲಿ ಕೆಲ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಇಂದಿನಿಂದ ‌ಲಾಕ್​ಡೌನ್ ಓಪನ್ ಆಗಿದ್ದು, ಬೆಳಂಬೆಳಗ್ಗೆ ಆಟೋ, ಓಲಾ, ಉಬರ್ ಕ್ಯಾಬ್​ಗಳು ಎಂದಿನಂತೆ ರಸ್ತೆಗಿಳಿದಿವೆ. ದೈನಂದಿನ ಕೆಲಸಗಳಲ್ಲಿ ಸಿಟಿ ಜನ ಬಿಜಿಯಾಗಿದ್ದಾರೆ. […]

ಸಿಟಿ ಮಂದಿಗೆ ಸಿಕ್ತು ರಿಲೀಫ್, ಎಂದಿನಂತೆ ಎಲ್ಲವೂ ಸ್ಟಾರ್ಟ್
ಆಯೇಷಾ ಬಾನು
|

Updated on:Jul 22, 2020 | 8:41 AM

Share

ಬೆಂಗಳೂರು: ಒಂದು ವಾರದ ಲಾಕ್​ಡೌನ್​ನಿಂದ ಸಿಲಿಕಾನ್ ಸಿಟಿ ಮಂದಿಗೆ ಇಂದು ರಿಲೀಫ್ ಸಿಕ್ಕಿದೆ. ಇಂದಿನಿಂದ ಅನ್ ಲಾಕ್ 2.0 ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ನಗರದ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಬೆಳಗ್ಗೆಯೇ ಜನ ವಾಕಿಂಗ್, ಜಾಕಿಂಗ್ ಶುರು ಮಾಡಿದ್ದಾರೆ.

ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಲಾಕ್​ಡೌನ್ ಹಿನ್ನೆಲೆಯಲ್ಲಿ ಕೆಲ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಇಂದಿನಿಂದ ‌ಲಾಕ್​ಡೌನ್ ಓಪನ್ ಆಗಿದ್ದು, ಬೆಳಂಬೆಳಗ್ಗೆ ಆಟೋ, ಓಲಾ, ಉಬರ್ ಕ್ಯಾಬ್​ಗಳು ಎಂದಿನಂತೆ ರಸ್ತೆಗಿಳಿದಿವೆ. ದೈನಂದಿನ ಕೆಲಸಗಳಲ್ಲಿ ಸಿಟಿ ಜನ ಬಿಜಿಯಾಗಿದ್ದಾರೆ.

ಬಸ್ ಸೇವೆ ಆರಂಭ ಲಾಕ್‌ಡೌನ್ ಅಂತ್ಯವಾಗಿರುವ ಹಿನ್ನೆಲೆ ಬಸ್ ಸೇವೆ ಆರಂಭವಾಗಿದೆ. ಬಿಎಂಟಿಸಿ ಬೆಳಗ್ಗೆ 6ರಿಂದ ರಾತ್ರಿ 8 ಗಂಟೆವರೆಗೆ ಮಾತ್ರ ಬಸ್‌ ಸಂಚಾರ ಮಾಡಲಿದೆ. ಇಂದು 1,500 ಬಿಎಂಟಿಸಿ ಬಸ್‌ಗಳು ರಸ್ತೆಗಿಳಿಯಲಿವೆ. ಕಂಟೇನ್ಮೆಂಟ್‌ ಜೋನ್‌ಗಳಲ್ಲಿ BMTC ಬಸ್ ಸಂಚಾರ ಇಲ್ಲ. ಮೆಜೆಸ್ಟಿಕ್‌ನಿಂದ ಜಿಲ್ಲೆಗಳಿಗೆ KSRTC ಬಸ್ ಸೇವೆ ಆರಂಭವಾಗಿದೆ.

ಉಣಬಡಿಸಲು ಹೋಟೆಲ್​ಗಳು ಸಿದ್ಧ ಇನ್ನು ಗ್ರಾಹಕರ ಟೇಬಲ್ ಸರ್ವೀಸ್​ಗೆ ಹೋಟೆಲ್​ಗಳಲ್ಲಿ ಸಿದ್ದತೆ ಜೋರಾಗಿದೆ. ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಸೇವೆ ಆರಂಭವಾಗಿದೆ. ಲಾಕ್​ಡೌನ್ ಇದ್ದ ಕಾರಣ ಕೇವಲ ಪಾರ್ಸಲ್​ಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಇಂದಿನಿಂದ ಎಂದಿನಂತೆ ಸಾಮಾಜಿಕ ಅಂತರ ಕಾಪಾಡಿಕೊಂಡು ಸಾರ್ವಜಕರಿಗೆ ಸೇವೆ ಒದಗಿಸಲಿರುವ ಹೋಟೆಲ್ ಗಳು ಮುಂದಾಗಿವೆ. ಹೋಟೆಲ್ ಪ್ರವೇಶಕ್ಕೂ ಮುನ್ನ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಆ ಬಳಿಕ ಕೈಗಳನ್ನು ಸ್ಯಾನಿಟೈಜ್ ಮಾಡಿ ಗ್ರಾಹಕರಿಗೆ ಒಳ ಪ್ರವೇಶಿಸಲು ಅವಕಾಶ ನೀಡಲಾಗುತ್ತೆ.

ಇಂದಿನಿಂದ ಎಎಲ್ಲವೂ ಸಹಜ ಸ್ಥಿತಿಗೆ ಮರಳಿದ್ದು, ಜನ ಹೆಚ್ಚಿನ ಎಚ್ಚರಿಕೆಯಿಂದಿರಬೇಕಿದೆ. ಲಾಕ್​ಡೌನ್ ಅಂತ್ಯವಾಗಿದೆ ಕೊರೊನಾ ಅಲ್ಲ. ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸಿ ತಮ್ಮ ತಮ್ಮ ಸುರಕ್ಷತೆಯಲ್ಲಿರಬೇಕಿದೆ. ನಮ್ಮ ಜೀವ ನಮ್ಮ ಕೈಯಲ್ಲಿದೆ.

Published On - 8:40 am, Wed, 22 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ