AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ಮಂದಿಗೆ ಸಿಕ್ತು ರಿಲೀಫ್, ಎಂದಿನಂತೆ ಎಲ್ಲವೂ ಸ್ಟಾರ್ಟ್

ಬೆಂಗಳೂರು: ಒಂದು ವಾರದ ಲಾಕ್​ಡೌನ್​ನಿಂದ ಸಿಲಿಕಾನ್ ಸಿಟಿ ಮಂದಿಗೆ ಇಂದು ರಿಲೀಫ್ ಸಿಕ್ಕಿದೆ. ಇಂದಿನಿಂದ ಅನ್ ಲಾಕ್ 2.0 ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ನಗರದ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಬೆಳಗ್ಗೆಯೇ ಜನ ವಾಕಿಂಗ್, ಜಾಕಿಂಗ್ ಶುರು ಮಾಡಿದ್ದಾರೆ. ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಲಾಕ್​ಡೌನ್ ಹಿನ್ನೆಲೆಯಲ್ಲಿ ಕೆಲ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಇಂದಿನಿಂದ ‌ಲಾಕ್​ಡೌನ್ ಓಪನ್ ಆಗಿದ್ದು, ಬೆಳಂಬೆಳಗ್ಗೆ ಆಟೋ, ಓಲಾ, ಉಬರ್ ಕ್ಯಾಬ್​ಗಳು ಎಂದಿನಂತೆ ರಸ್ತೆಗಿಳಿದಿವೆ. ದೈನಂದಿನ ಕೆಲಸಗಳಲ್ಲಿ ಸಿಟಿ ಜನ ಬಿಜಿಯಾಗಿದ್ದಾರೆ. […]

ಸಿಟಿ ಮಂದಿಗೆ ಸಿಕ್ತು ರಿಲೀಫ್, ಎಂದಿನಂತೆ ಎಲ್ಲವೂ ಸ್ಟಾರ್ಟ್
ಆಯೇಷಾ ಬಾನು
ಆಯೇಷಾ ಬಾನು|

Updated on:Jul 22, 2020 | 8:41 AM

Share

ಬೆಂಗಳೂರು: ಒಂದು ವಾರದ ಲಾಕ್​ಡೌನ್​ನಿಂದ ಸಿಲಿಕಾನ್ ಸಿಟಿ ಮಂದಿಗೆ ಇಂದು ರಿಲೀಫ್ ಸಿಕ್ಕಿದೆ. ಇಂದಿನಿಂದ ಅನ್ ಲಾಕ್ 2.0 ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ನಗರದ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಬೆಳಗ್ಗೆಯೇ ಜನ ವಾಕಿಂಗ್, ಜಾಕಿಂಗ್ ಶುರು ಮಾಡಿದ್ದಾರೆ.

ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಲಾಕ್​ಡೌನ್ ಹಿನ್ನೆಲೆಯಲ್ಲಿ ಕೆಲ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಇಂದಿನಿಂದ ‌ಲಾಕ್​ಡೌನ್ ಓಪನ್ ಆಗಿದ್ದು, ಬೆಳಂಬೆಳಗ್ಗೆ ಆಟೋ, ಓಲಾ, ಉಬರ್ ಕ್ಯಾಬ್​ಗಳು ಎಂದಿನಂತೆ ರಸ್ತೆಗಿಳಿದಿವೆ. ದೈನಂದಿನ ಕೆಲಸಗಳಲ್ಲಿ ಸಿಟಿ ಜನ ಬಿಜಿಯಾಗಿದ್ದಾರೆ.

ಬಸ್ ಸೇವೆ ಆರಂಭ ಲಾಕ್‌ಡೌನ್ ಅಂತ್ಯವಾಗಿರುವ ಹಿನ್ನೆಲೆ ಬಸ್ ಸೇವೆ ಆರಂಭವಾಗಿದೆ. ಬಿಎಂಟಿಸಿ ಬೆಳಗ್ಗೆ 6ರಿಂದ ರಾತ್ರಿ 8 ಗಂಟೆವರೆಗೆ ಮಾತ್ರ ಬಸ್‌ ಸಂಚಾರ ಮಾಡಲಿದೆ. ಇಂದು 1,500 ಬಿಎಂಟಿಸಿ ಬಸ್‌ಗಳು ರಸ್ತೆಗಿಳಿಯಲಿವೆ. ಕಂಟೇನ್ಮೆಂಟ್‌ ಜೋನ್‌ಗಳಲ್ಲಿ BMTC ಬಸ್ ಸಂಚಾರ ಇಲ್ಲ. ಮೆಜೆಸ್ಟಿಕ್‌ನಿಂದ ಜಿಲ್ಲೆಗಳಿಗೆ KSRTC ಬಸ್ ಸೇವೆ ಆರಂಭವಾಗಿದೆ.

ಉಣಬಡಿಸಲು ಹೋಟೆಲ್​ಗಳು ಸಿದ್ಧ ಇನ್ನು ಗ್ರಾಹಕರ ಟೇಬಲ್ ಸರ್ವೀಸ್​ಗೆ ಹೋಟೆಲ್​ಗಳಲ್ಲಿ ಸಿದ್ದತೆ ಜೋರಾಗಿದೆ. ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಸೇವೆ ಆರಂಭವಾಗಿದೆ. ಲಾಕ್​ಡೌನ್ ಇದ್ದ ಕಾರಣ ಕೇವಲ ಪಾರ್ಸಲ್​ಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಇಂದಿನಿಂದ ಎಂದಿನಂತೆ ಸಾಮಾಜಿಕ ಅಂತರ ಕಾಪಾಡಿಕೊಂಡು ಸಾರ್ವಜಕರಿಗೆ ಸೇವೆ ಒದಗಿಸಲಿರುವ ಹೋಟೆಲ್ ಗಳು ಮುಂದಾಗಿವೆ. ಹೋಟೆಲ್ ಪ್ರವೇಶಕ್ಕೂ ಮುನ್ನ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಆ ಬಳಿಕ ಕೈಗಳನ್ನು ಸ್ಯಾನಿಟೈಜ್ ಮಾಡಿ ಗ್ರಾಹಕರಿಗೆ ಒಳ ಪ್ರವೇಶಿಸಲು ಅವಕಾಶ ನೀಡಲಾಗುತ್ತೆ.

ಇಂದಿನಿಂದ ಎಎಲ್ಲವೂ ಸಹಜ ಸ್ಥಿತಿಗೆ ಮರಳಿದ್ದು, ಜನ ಹೆಚ್ಚಿನ ಎಚ್ಚರಿಕೆಯಿಂದಿರಬೇಕಿದೆ. ಲಾಕ್​ಡೌನ್ ಅಂತ್ಯವಾಗಿದೆ ಕೊರೊನಾ ಅಲ್ಲ. ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸಿ ತಮ್ಮ ತಮ್ಮ ಸುರಕ್ಷತೆಯಲ್ಲಿರಬೇಕಿದೆ. ನಮ್ಮ ಜೀವ ನಮ್ಮ ಕೈಯಲ್ಲಿದೆ.

Published On - 8:40 am, Wed, 22 July 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು