AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ಮಂದಿಗೆ ಸಿಕ್ತು ರಿಲೀಫ್, ಎಂದಿನಂತೆ ಎಲ್ಲವೂ ಸ್ಟಾರ್ಟ್

ಬೆಂಗಳೂರು: ಒಂದು ವಾರದ ಲಾಕ್​ಡೌನ್​ನಿಂದ ಸಿಲಿಕಾನ್ ಸಿಟಿ ಮಂದಿಗೆ ಇಂದು ರಿಲೀಫ್ ಸಿಕ್ಕಿದೆ. ಇಂದಿನಿಂದ ಅನ್ ಲಾಕ್ 2.0 ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ನಗರದ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಬೆಳಗ್ಗೆಯೇ ಜನ ವಾಕಿಂಗ್, ಜಾಕಿಂಗ್ ಶುರು ಮಾಡಿದ್ದಾರೆ. ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಲಾಕ್​ಡೌನ್ ಹಿನ್ನೆಲೆಯಲ್ಲಿ ಕೆಲ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಇಂದಿನಿಂದ ‌ಲಾಕ್​ಡೌನ್ ಓಪನ್ ಆಗಿದ್ದು, ಬೆಳಂಬೆಳಗ್ಗೆ ಆಟೋ, ಓಲಾ, ಉಬರ್ ಕ್ಯಾಬ್​ಗಳು ಎಂದಿನಂತೆ ರಸ್ತೆಗಿಳಿದಿವೆ. ದೈನಂದಿನ ಕೆಲಸಗಳಲ್ಲಿ ಸಿಟಿ ಜನ ಬಿಜಿಯಾಗಿದ್ದಾರೆ. […]

ಸಿಟಿ ಮಂದಿಗೆ ಸಿಕ್ತು ರಿಲೀಫ್, ಎಂದಿನಂತೆ ಎಲ್ಲವೂ ಸ್ಟಾರ್ಟ್
ಆಯೇಷಾ ಬಾನು
|

Updated on:Jul 22, 2020 | 8:41 AM

Share

ಬೆಂಗಳೂರು: ಒಂದು ವಾರದ ಲಾಕ್​ಡೌನ್​ನಿಂದ ಸಿಲಿಕಾನ್ ಸಿಟಿ ಮಂದಿಗೆ ಇಂದು ರಿಲೀಫ್ ಸಿಕ್ಕಿದೆ. ಇಂದಿನಿಂದ ಅನ್ ಲಾಕ್ 2.0 ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ನಗರದ ರಸ್ತೆಗಳಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಬೆಳಗ್ಗೆಯೇ ಜನ ವಾಕಿಂಗ್, ಜಾಕಿಂಗ್ ಶುರು ಮಾಡಿದ್ದಾರೆ.

ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಲಾಕ್​ಡೌನ್ ಹಿನ್ನೆಲೆಯಲ್ಲಿ ಕೆಲ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಇಂದಿನಿಂದ ‌ಲಾಕ್​ಡೌನ್ ಓಪನ್ ಆಗಿದ್ದು, ಬೆಳಂಬೆಳಗ್ಗೆ ಆಟೋ, ಓಲಾ, ಉಬರ್ ಕ್ಯಾಬ್​ಗಳು ಎಂದಿನಂತೆ ರಸ್ತೆಗಿಳಿದಿವೆ. ದೈನಂದಿನ ಕೆಲಸಗಳಲ್ಲಿ ಸಿಟಿ ಜನ ಬಿಜಿಯಾಗಿದ್ದಾರೆ.

ಬಸ್ ಸೇವೆ ಆರಂಭ ಲಾಕ್‌ಡೌನ್ ಅಂತ್ಯವಾಗಿರುವ ಹಿನ್ನೆಲೆ ಬಸ್ ಸೇವೆ ಆರಂಭವಾಗಿದೆ. ಬಿಎಂಟಿಸಿ ಬೆಳಗ್ಗೆ 6ರಿಂದ ರಾತ್ರಿ 8 ಗಂಟೆವರೆಗೆ ಮಾತ್ರ ಬಸ್‌ ಸಂಚಾರ ಮಾಡಲಿದೆ. ಇಂದು 1,500 ಬಿಎಂಟಿಸಿ ಬಸ್‌ಗಳು ರಸ್ತೆಗಿಳಿಯಲಿವೆ. ಕಂಟೇನ್ಮೆಂಟ್‌ ಜೋನ್‌ಗಳಲ್ಲಿ BMTC ಬಸ್ ಸಂಚಾರ ಇಲ್ಲ. ಮೆಜೆಸ್ಟಿಕ್‌ನಿಂದ ಜಿಲ್ಲೆಗಳಿಗೆ KSRTC ಬಸ್ ಸೇವೆ ಆರಂಭವಾಗಿದೆ.

ಉಣಬಡಿಸಲು ಹೋಟೆಲ್​ಗಳು ಸಿದ್ಧ ಇನ್ನು ಗ್ರಾಹಕರ ಟೇಬಲ್ ಸರ್ವೀಸ್​ಗೆ ಹೋಟೆಲ್​ಗಳಲ್ಲಿ ಸಿದ್ದತೆ ಜೋರಾಗಿದೆ. ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಸೇವೆ ಆರಂಭವಾಗಿದೆ. ಲಾಕ್​ಡೌನ್ ಇದ್ದ ಕಾರಣ ಕೇವಲ ಪಾರ್ಸಲ್​ಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಇಂದಿನಿಂದ ಎಂದಿನಂತೆ ಸಾಮಾಜಿಕ ಅಂತರ ಕಾಪಾಡಿಕೊಂಡು ಸಾರ್ವಜಕರಿಗೆ ಸೇವೆ ಒದಗಿಸಲಿರುವ ಹೋಟೆಲ್ ಗಳು ಮುಂದಾಗಿವೆ. ಹೋಟೆಲ್ ಪ್ರವೇಶಕ್ಕೂ ಮುನ್ನ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಆ ಬಳಿಕ ಕೈಗಳನ್ನು ಸ್ಯಾನಿಟೈಜ್ ಮಾಡಿ ಗ್ರಾಹಕರಿಗೆ ಒಳ ಪ್ರವೇಶಿಸಲು ಅವಕಾಶ ನೀಡಲಾಗುತ್ತೆ.

ಇಂದಿನಿಂದ ಎಎಲ್ಲವೂ ಸಹಜ ಸ್ಥಿತಿಗೆ ಮರಳಿದ್ದು, ಜನ ಹೆಚ್ಚಿನ ಎಚ್ಚರಿಕೆಯಿಂದಿರಬೇಕಿದೆ. ಲಾಕ್​ಡೌನ್ ಅಂತ್ಯವಾಗಿದೆ ಕೊರೊನಾ ಅಲ್ಲ. ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸಿ ತಮ್ಮ ತಮ್ಮ ಸುರಕ್ಷತೆಯಲ್ಲಿರಬೇಕಿದೆ. ನಮ್ಮ ಜೀವ ನಮ್ಮ ಕೈಯಲ್ಲಿದೆ.

Published On - 8:40 am, Wed, 22 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ