AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡುಗೆ ಕೆಲಸದವನಿಂದ್ಲೇ ಲಾಕರ್ ಕಳ್ಳತನ, ಉಂಡ ಮನೆಗೆ ಕನ್ನ ಹಾಕೋಕೆ ಹೋಗಿ ಲಾಕ್

ಬೆಂಗಳೂರು: ಬೇರೆ ರಾಜ್ಯದಿಂದ ಬಂದು ಅಡುಗೆ ಕೆಲಸ ಮಾಡ್ಕೊಂಡು ಇದ್ದು, ಅದೇ ಮನೆಯಲ್ಲಿ ಕಳ್ಳತನ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ನಿವಾಸಿ ಕೈಲಾಸ್ ದಾಸ್ ಎಂಬಾತ ಜೆ.ಪಿ.ನಗರದ ರಾಜೇಶ್ ಬಾಬು ಎಂಬುವರ ಮನೆಯಲ್ಲಿ 6 ವರ್ಷದಿಂದ ಅಡುಗೆ ಕೆಲಸ ಮಾಡ್ಕೊಂಡು ಇವರ ಮನೆಯಲ್ಲೇ ವಾಸವಿದ್ದ. ಇತ್ತೀಚೆಗೆ ಈ ಮನೆಯ ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ರು. ಈ ವೇಳೆ ಉಂಡು ತಿಂದ ಮನೆಗೆ ಕನ್ನ ಹಾಕೋಕೆ ಈತ ಪ್ಲ್ಯಾನ್ […]

ಅಡುಗೆ ಕೆಲಸದವನಿಂದ್ಲೇ ಲಾಕರ್ ಕಳ್ಳತನ, ಉಂಡ ಮನೆಗೆ ಕನ್ನ ಹಾಕೋಕೆ ಹೋಗಿ ಲಾಕ್
ಆಯೇಷಾ ಬಾನು
ಆಯೇಷಾ ಬಾನು|

Updated on: Oct 19, 2020 | 6:36 AM

Share

ಬೆಂಗಳೂರು: ಬೇರೆ ರಾಜ್ಯದಿಂದ ಬಂದು ಅಡುಗೆ ಕೆಲಸ ಮಾಡ್ಕೊಂಡು ಇದ್ದು, ಅದೇ ಮನೆಯಲ್ಲಿ ಕಳ್ಳತನ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ.

ಪಶ್ಚಿಮ ಬಂಗಾಳದ ನಿವಾಸಿ ಕೈಲಾಸ್ ದಾಸ್ ಎಂಬಾತ ಜೆ.ಪಿ.ನಗರದ ರಾಜೇಶ್ ಬಾಬು ಎಂಬುವರ ಮನೆಯಲ್ಲಿ 6 ವರ್ಷದಿಂದ ಅಡುಗೆ ಕೆಲಸ ಮಾಡ್ಕೊಂಡು ಇವರ ಮನೆಯಲ್ಲೇ ವಾಸವಿದ್ದ. ಇತ್ತೀಚೆಗೆ ಈ ಮನೆಯ ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ರು. ಈ ವೇಳೆ ಉಂಡು ತಿಂದ ಮನೆಗೆ ಕನ್ನ ಹಾಕೋಕೆ ಈತ ಪ್ಲ್ಯಾನ್ ಮಾಡಿದ್ದ. ಅದರಂತೆ ಅಕ್ಟೋಬರ್ 9ರಂದು ರಾಜೇಶ್ ಬಾಬು ಮನೆಯಲ್ಲಿದ್ದ ವಜ್ರ, ಚಿನ್ನಾಭರಣಗಳಿದ್ದ ಲಾಕರ್ ಕದ್ದೊಯ್ದಿದ್ದಾನೆ.. ಈ ಲಾಕರ್‌ನಲ್ಲಿ ಸುಮಾರು 1 ಕೋಟಿ 30 ಲಕ್ಷ ರೂಪಾಯಿ ಬೆಲೆಬಾಳುವ ವಜ್ರ ಮತ್ತು ಚಿನ್ನದ ಆಭರಣ ಇತ್ತು. ಈ ಕಳ್ಳತನದಿಂದ ಶಾಕ್‌ ಆದ ಮನೆ ಮಾಲೀಕ ರಾಜೇಶ್ ಜೆ.ಪಿ ನಗರ ಠಾಣೆಯಲ್ಲಿ‌ ದೂರು ನೀಡಿದ್ರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಡಿಜಿಟಲ್ ಲಾಕರ್ ಸಮೇತ ಎಸ್ಕೇಪ್ ಆಗಿದ್ದ ಕೈಲಾಸ್‌ನನ್ನ 48 ಗಂಟೆಗಳಲ್ಲಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ .

ಲಾಕರ್ ಕದ್ದ ಕೈಲಾಸ್‌ ಲಾಕರ್ ಸಮೇತ ಮೈಸೂರಿಗೆ ಹೋಗಿ ಲಾಡ್ಜ್ ನಲ್ಲಿ ಸೇರಿಕೊಂಡಿದ್ದ. ಅಲ್ಲಿ 2 ದಿನ ಲಾಕರ್ ಒಪನ್ ಮಾಡೋಕೆ ಒದ್ದಾಡಿದ್ದಾನೆ. ಆದ್ರೆ ಓಪನ್ ಆಗಿಲ್ಲ. ಇಲ್ಲೇ ಇದ್ರೆ ಪೊಲೀಸರ ಕೈಯಲ್ಲಿ ಲಾಕ್ ಆಗ್ತೀನಿ ಅಂತ ತನ್ನ ಊರಾದ ಪ.ಬಂಗಾಳಕ್ಕೆ ತೆರಳಲು ರೈಲು ಏರಿದ್ದ. ರೈಲ್ವೆ ನಿಲ್ದಾಣ ಸಿಸಿ ಕ್ಯಾಮರಾಗಳನ್ನ ಪರಿಶೀಲಿಸಿದಾಗ ಆರೋಪಿ ಕೈಲಾಸ್‌ ಯಶವಂತಪುರ ರೈಲ್ವೆ ನಿಲ್ದಾಣದ ಮೂಲಕ ಪಶ್ಚಿಮ ಬಂಗಾಳಕ್ಕೆ ತೆರಳಿದ್ದು ಗೊತ್ತಾಗಿತ್ತು. ಈ ಮಾಹಿತಿ ತಿಳಿದು ಪೊಲೀಸರು ಆತ ತಲುಪುವ ಮುಂಚೆಯೇ ಹೌರಾ ಬಳಿ ಆತನ ಸ್ವಾಗತಕ್ಕೆ ಕಾದಿದ್ದಾರೆ. ಆದರೆ ಅಲ್ಲಿ ಕೂಡ ಪೊಲೀಸರ ಕಣ್ತಪ್ಪಿಸಿ ರೈಲ್ವೆ ನಿಲ್ದಾಣದ ಬೇರೆ-ಬೇರೆ ಪ್ಲಾಟ್ ಫಾರ್ಮ್‌ನಿಂದ ಹೊರಗಡೆ ಹೋಗೋಕೆ ಸಂಚು ಹಾಕಿದ್ದಾನೆ. ತಕ್ಷಣ ಅಲರ್ಟ್ ಆದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಪ್ಲ್ಯಾನ್ ಮಾಡಿ ರೈಲ್ವೆ ನಿಲ್ದಾಣದಲ್ಲೇ ಕೈಲಾಸ್‌ನನ್ನ ಬಂಧಿಸಿ, ವಜ್ರ, ಚಿನ್ನಾಭರಣಗಳಿದ್ದ ಲಾಕರ್ ವಶಕ್ಕೆ ಪಡೆದಿದ್ದಾರೆ.

ಮಾಲೀಕನಿಗೆ ವಂಚಿಸಿ ಆರೋಪಿ ಚಾಪೆ ಕೆಳಗೆ ನುಸುಳಿದ್ರೆ, ಬೆಂಗಳೂರು ಪೊಲೀಸರ ಚಾಣಾಕ್ಷ ತನಿಖೆ ನಡೆಸಿ ರಂಗೋಲಿ ಕೆಳೆಗೆ ನುಸುಳಿ ಕೈಲಾಸ್‌ನನ್ನ ಲಾಕ್ ಮಾಡಿದ್ದಾರೆ. ಒಟ್ನಲ್ಲಿ ಅಯ್ಯೋ ಪಾಪ ಎಂದು ಪರ ರಾಜ್ಯದವರಿಗೆ ಕೆಲಸ ನೀಡುವ ಮುಂಚೇ ಮೂರು ಸಲ ಯೋಚನೆ ಮಾಡಿ. ಇದು ಒಂದು ಉದಾಹರಣೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!