AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಲಿಬಾರ್​ನಲ್ಲಿ ಮೃತಪಟ್ಟವನ ಗುರುತು ಇನ್ನೂ ಸಿಕ್ಕಿಲ್ಲ! ಹಾಗಾದ್ರೆ ಯಾರವ?

ಬೆಂಗಳೂರು: ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಿಂಸಾಚಾರದಲ್ಲಿ ಕೇರಳ ಲಿಂಕ್‌ ಇದೆಯಾ ಅನ್ನೋ ಅನುಮಾನ ಬಲವಾಗ್ತಿದೆ. ಇದಕ್ಕೆ ಕಾರಣ ಇನ್ನೂ ಪತ್ತೆಯಾಗದ ಮೃತ ಮೂರನೆ ವ್ಯಕ್ತಿಯ ಗುರುತು. 40 ವರ್ಷದ ವ್ಯಕ್ತಿಯೊಬ್ಬ ನಿನ್ನೆ ರಾತ್ರಿ ನಡೆದ ಪೊಲೀಸ್‌ ಗೋಲಿಬಾರ್​ನಲ್ಲಿ ಸಾವನ್ನಪ್ಪಿದ್ದಾನೆ. ಆದ್ರೆ ಈತನ ಗುರುತು ಇದುವರೆಗೂ ಪತ್ತೆಯಾಗಿಲ್ಲ. ಇನ್ನಿಬ್ಬರು ಮೃತರ ಗುರುತು ಪತ್ತೆಯಾಗಿದೆ. ಅವರು ಸ್ಥಳೀಯರು. ಆದ್ರೆ ಈ ಮೂರನೇ ವ್ಯಕ್ತಿಯ ಗುರುತು ಮಾತ್ರ ಇನ್ನೂ ಪತ್ತೆಯಾಗಿಲ್ಲ! ಇದಕ್ಕೆ […]

ಗೋಲಿಬಾರ್​ನಲ್ಲಿ ಮೃತಪಟ್ಟವನ ಗುರುತು ಇನ್ನೂ ಸಿಕ್ಕಿಲ್ಲ! ಹಾಗಾದ್ರೆ ಯಾರವ?
Guru
|

Updated on:Aug 12, 2020 | 4:20 PM

Share

ಬೆಂಗಳೂರು: ಬೆಂಗಳೂರಿನ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಿಂಸಾಚಾರದಲ್ಲಿ ಕೇರಳ ಲಿಂಕ್‌ ಇದೆಯಾ ಅನ್ನೋ ಅನುಮಾನ ಬಲವಾಗ್ತಿದೆ. ಇದಕ್ಕೆ ಕಾರಣ ಇನ್ನೂ ಪತ್ತೆಯಾಗದ ಮೃತ ಮೂರನೆ ವ್ಯಕ್ತಿಯ ಗುರುತು.

40 ವರ್ಷದ ವ್ಯಕ್ತಿಯೊಬ್ಬ ನಿನ್ನೆ ರಾತ್ರಿ ನಡೆದ ಪೊಲೀಸ್‌ ಗೋಲಿಬಾರ್​ನಲ್ಲಿ ಸಾವನ್ನಪ್ಪಿದ್ದಾನೆ. ಆದ್ರೆ ಈತನ ಗುರುತು ಇದುವರೆಗೂ ಪತ್ತೆಯಾಗಿಲ್ಲ. ಇನ್ನಿಬ್ಬರು ಮೃತರ ಗುರುತು ಪತ್ತೆಯಾಗಿದೆ. ಅವರು ಸ್ಥಳೀಯರು. ಆದ್ರೆ ಈ ಮೂರನೇ ವ್ಯಕ್ತಿಯ ಗುರುತು ಮಾತ್ರ ಇನ್ನೂ ಪತ್ತೆಯಾಗಿಲ್ಲ! ಇದಕ್ಕೆ ಕಾರಣ ಈತ ಸ್ಥಳೀಯ ಅಲ್ಲದಿರುವುದು! ಎನ್ನುತ್ತಿವೆ ಪೊಲೀಸ್‌ ಮೂಲಗಳು.

ಹಾಗಾದ್ರೆ ಯಾರು ಈ ಮೂರನೇ ವ್ಯಕ್ತಿ? ಈತ ಗಲಾಟೆ ಸಮಯದಲ್ಲಿ ಯಾಕೆ ಬಂದಿದ್ದ? ಎಲ್ಲಿಯವನು ಈ ವ್ಯಕ್ತಿ? ಪೊಲೀಸ್‌ ಫೈರಿಂಗ್‌ ಮಾಡಿದ್ದು ಗಲಭೆಕೋರರತ್ತ. ಆದ್ರೆ ಈತ ಯಾಕೆ ಗಲಭೆ ಜಾಗದಲ್ಲಿದ್ದ? ಅಲ್ಲಿಗೆ ಈತ ಹೇಗೆ ಮತ್ತು ಯಾಕೆ ಬಂದ? ಹೀಗೆ ಹತ್ತು ಹಲವಾರು ಪ್ರಶ್ನೆಗಳು ಈಗ ತನಿಖಾಧಿಕಾರಿಗಳಿಗೆ ಕಾಡುತ್ತಿವೆ.

ಹೀಗಾಗಿಯೇ ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ  ಹಿಂದೆ ಹೊರಗಿನವರ ಕೈವಾಡದ ಶಂಕೆ ವ್ಯಕ್ತವಾಗುತ್ತಿದೆ. ಬೆಂಗಳೂರಿನಲ್ಲಿ ಸಾವಿರಾರು ಜನರನ್ನು ಒಮ್ಮೆಲೆ ಸೇರಿಸಿ ಗಲಭೆ ಸೃಷ್ಟಿಸಲಾಗಿದೆ. ಗಲಾಟೆಯಲ್ಲಿ ಮೂವರು ಸಾವನ್ನಪ್ಪಿದ್ದು ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ಬೆಂಗಳೂರು ಪೊಲೀಸರೇ ಅನಿರೀಕ್ಷಿತ ರೀತಿಯ ಈ ಗಲಾಟೆಗೆ ದಂಗಾಗಿದ್ದಾರೆ. ಹೀಗಾಗಿಯೇ ಈಗ ಪೊಲೀಸರು ಹೊರಗಿನ ಅದರಲ್ಲೂ ಕೇರಳ ಮತ್ತು SDPI ಲಿಂಕ್‌ ಬಗ್ಗೆಯೂ ತನಿಖೆ ಮಾಡುತ್ತಿದ್ದಾರೆ ಎನ್ನುತ್ತಿವೆ ಪೊಲೀಸ್‌ ಮೂಲಗಳು.

Published On - 4:01 pm, Wed, 12 August 20

Follow Us
Guru
Guru
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​