AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Crime ಕಾಲೇಜು ಯುವತಿಯರೇ ಹುಷಾರ್! ಫೋಟೋಗಳಾಗುತ್ತಿವೆ ದುರ್ಬಳಕೆ..

ಬೆಂಗಳೂರು: ಸಿಲಿಕಾನ್ ಸಿಟಿ ಕಾಲೇಜು ಯುವತಿಯರೇ ಹುಷಾರ್! ದೆಹಲಿ ಬಾಯ್ಸ್ ರೂಂ ಪ್ರಕರಣ ಮಾಸೊ ಮುನ್ನವೇ ಬೆಂಗಳೂರಿನಲ್ಲಿ ಕಾಲೇಜು ಯುವತಿಯರಿಗೆ ಆತಂಕ ಶುರುವಾಗಿದೆ. ಯಾಕಂದ್ರೆ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿಯರ ಫೋಟೋಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಸುದ್ದಿ ಹೊರ ಬಿದ್ದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಫೋಟೋ ಕದ್ದು ಅದನ್ನು ಯುವತಿಯರಿಗೆ ಗೊತ್ತಾಗದಂತೆ ಅಶ್ಲೀಲ ವೆಬ್ ಸೈಟ್​ಗಳಲ್ಲಿ ಅಪ್ಲೋಡ್ ಮಾಡಲಾಗುತ್ತಿದೆ. ಈ ರೀತಿ ಅಪ್ಲೋಡ್ ಆದ ಫೋಟೋಗಳಿಂದ ವಿದ್ಯಾರ್ಥಿನಿಯರಿಗೆ ಆತಂಕ ಹೆಚ್ಚಾಗಿದೆ. ಸುಮಾರು ಮೂರಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿನಿಯರಲ್ಲಿ ಈ […]

Cyber Crime ಕಾಲೇಜು ಯುವತಿಯರೇ ಹುಷಾರ್! ಫೋಟೋಗಳಾಗುತ್ತಿವೆ ದುರ್ಬಳಕೆ..
ಸೈಬರ್ ಕ್ರೈಮ್ ಪೊಲೀಸ್ ಠಾಣೆ
ಆಯೇಷಾ ಬಾನು
| Edited By: |

Updated on:Jul 30, 2020 | 8:28 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಕಾಲೇಜು ಯುವತಿಯರೇ ಹುಷಾರ್! ದೆಹಲಿ ಬಾಯ್ಸ್ ರೂಂ ಪ್ರಕರಣ ಮಾಸೊ ಮುನ್ನವೇ ಬೆಂಗಳೂರಿನಲ್ಲಿ ಕಾಲೇಜು ಯುವತಿಯರಿಗೆ ಆತಂಕ ಶುರುವಾಗಿದೆ. ಯಾಕಂದ್ರೆ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿಯರ ಫೋಟೋಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಸುದ್ದಿ ಹೊರ ಬಿದ್ದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಫೋಟೋ ಕದ್ದು ಅದನ್ನು ಯುವತಿಯರಿಗೆ ಗೊತ್ತಾಗದಂತೆ ಅಶ್ಲೀಲ ವೆಬ್ ಸೈಟ್​ಗಳಲ್ಲಿ ಅಪ್ಲೋಡ್ ಮಾಡಲಾಗುತ್ತಿದೆ. ಈ ರೀತಿ ಅಪ್ಲೋಡ್ ಆದ ಫೋಟೋಗಳಿಂದ ವಿದ್ಯಾರ್ಥಿನಿಯರಿಗೆ ಆತಂಕ ಹೆಚ್ಚಾಗಿದೆ. ಸುಮಾರು ಮೂರಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿನಿಯರಲ್ಲಿ ಈ ಸಮಸ್ಯೆಯುಂಟಾದ ಬಗ್ಗೆ ಚರ್ಚೆಗಳಿವೆ.

ಆತಂಕಕ್ಕೆ ಒಳಗಾದ ಕಾಲೇಜು ವಿದ್ಯಾರ್ಥಿಗಳು ವಾಟ್ಸ್ ಆ್ಯಪ್ ಗ್ರೂಪ್​ಗಳಲ್ಲಿ ಈ ಬಗ್ಗೆ ಚರ್ಚೆ ಮಾಡಿದ್ದಾರೆ. ತಮಗೆ ಗೊತ್ತಾಗದ ರೀತಿ ಅಶ್ಲೀಲ ವೆಬ್ ಸೈಟ್​ನಲ್ಲಿ ಯುವತಿಯರ ಫೋಟೋ ಕಾಣಿಸಿಕೊಂಡಿದೆ. ಪ್ರತಿಷ್ಠಿತ ಕಾಲೇಜುಗಳ ಯುವತಿಯರ ಫೋಟೊಗಳನ್ನು ಬಳಸಿಕೊಳ್ಳಲಾಗುತ್ತಿದೆ.

ಮೊದಲಿಗೆ ಮಾನ್ವಿತ ಹಾಗೂ ವೀಣಾ ಎಂಬ ಹೆಸರಿನ ನಕಲಿ ಖಾತೆಯಲ್ಲಿ ಫೇಸ್‌ಬುಕ್ ಹಾಗೂ ಇನ್ಸ್ಟಾಗ್ರಾಮ್​ಗಳಲ್ಲಿ ರಿಕ್ವೆಸ್ಟ್ ಬಂದಿದೆ ಬಳಿಕ ಫೋಟೋಗಳಿರುವ ಲಿಂಕ್​ಗಳನ್ನು ಶೇರ್ ಮಾಡಲಾಗಿದೆ. ಕೆಲವು ಕಾಲೇಜಿನ ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೈಬರ್ ಪೊಲೀಸರಿಂದ ತನಿಖೆ ಮುಂದುವರೆದಿದೆ.

Published On - 7:49 am, Wed, 29 July 20

Follow Us
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ