AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Crime ಕಾಲೇಜು ಯುವತಿಯರೇ ಹುಷಾರ್! ಫೋಟೋಗಳಾಗುತ್ತಿವೆ ದುರ್ಬಳಕೆ..

ಬೆಂಗಳೂರು: ಸಿಲಿಕಾನ್ ಸಿಟಿ ಕಾಲೇಜು ಯುವತಿಯರೇ ಹುಷಾರ್! ದೆಹಲಿ ಬಾಯ್ಸ್ ರೂಂ ಪ್ರಕರಣ ಮಾಸೊ ಮುನ್ನವೇ ಬೆಂಗಳೂರಿನಲ್ಲಿ ಕಾಲೇಜು ಯುವತಿಯರಿಗೆ ಆತಂಕ ಶುರುವಾಗಿದೆ. ಯಾಕಂದ್ರೆ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿಯರ ಫೋಟೋಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಸುದ್ದಿ ಹೊರ ಬಿದ್ದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಫೋಟೋ ಕದ್ದು ಅದನ್ನು ಯುವತಿಯರಿಗೆ ಗೊತ್ತಾಗದಂತೆ ಅಶ್ಲೀಲ ವೆಬ್ ಸೈಟ್​ಗಳಲ್ಲಿ ಅಪ್ಲೋಡ್ ಮಾಡಲಾಗುತ್ತಿದೆ. ಈ ರೀತಿ ಅಪ್ಲೋಡ್ ಆದ ಫೋಟೋಗಳಿಂದ ವಿದ್ಯಾರ್ಥಿನಿಯರಿಗೆ ಆತಂಕ ಹೆಚ್ಚಾಗಿದೆ. ಸುಮಾರು ಮೂರಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿನಿಯರಲ್ಲಿ ಈ […]

Cyber Crime ಕಾಲೇಜು ಯುವತಿಯರೇ ಹುಷಾರ್! ಫೋಟೋಗಳಾಗುತ್ತಿವೆ ದುರ್ಬಳಕೆ..
ಸೈಬರ್ ಕ್ರೈಮ್ ಪೊಲೀಸ್ ಠಾಣೆ
ಆಯೇಷಾ ಬಾನು
| Edited By: |

Updated on:Jul 30, 2020 | 8:28 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಕಾಲೇಜು ಯುವತಿಯರೇ ಹುಷಾರ್! ದೆಹಲಿ ಬಾಯ್ಸ್ ರೂಂ ಪ್ರಕರಣ ಮಾಸೊ ಮುನ್ನವೇ ಬೆಂಗಳೂರಿನಲ್ಲಿ ಕಾಲೇಜು ಯುವತಿಯರಿಗೆ ಆತಂಕ ಶುರುವಾಗಿದೆ. ಯಾಕಂದ್ರೆ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿಯರ ಫೋಟೋಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಸುದ್ದಿ ಹೊರ ಬಿದ್ದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಯುವತಿಯರ ಫೋಟೋ ಕದ್ದು ಅದನ್ನು ಯುವತಿಯರಿಗೆ ಗೊತ್ತಾಗದಂತೆ ಅಶ್ಲೀಲ ವೆಬ್ ಸೈಟ್​ಗಳಲ್ಲಿ ಅಪ್ಲೋಡ್ ಮಾಡಲಾಗುತ್ತಿದೆ. ಈ ರೀತಿ ಅಪ್ಲೋಡ್ ಆದ ಫೋಟೋಗಳಿಂದ ವಿದ್ಯಾರ್ಥಿನಿಯರಿಗೆ ಆತಂಕ ಹೆಚ್ಚಾಗಿದೆ. ಸುಮಾರು ಮೂರಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿನಿಯರಲ್ಲಿ ಈ ಸಮಸ್ಯೆಯುಂಟಾದ ಬಗ್ಗೆ ಚರ್ಚೆಗಳಿವೆ.

ಆತಂಕಕ್ಕೆ ಒಳಗಾದ ಕಾಲೇಜು ವಿದ್ಯಾರ್ಥಿಗಳು ವಾಟ್ಸ್ ಆ್ಯಪ್ ಗ್ರೂಪ್​ಗಳಲ್ಲಿ ಈ ಬಗ್ಗೆ ಚರ್ಚೆ ಮಾಡಿದ್ದಾರೆ. ತಮಗೆ ಗೊತ್ತಾಗದ ರೀತಿ ಅಶ್ಲೀಲ ವೆಬ್ ಸೈಟ್​ನಲ್ಲಿ ಯುವತಿಯರ ಫೋಟೋ ಕಾಣಿಸಿಕೊಂಡಿದೆ. ಪ್ರತಿಷ್ಠಿತ ಕಾಲೇಜುಗಳ ಯುವತಿಯರ ಫೋಟೊಗಳನ್ನು ಬಳಸಿಕೊಳ್ಳಲಾಗುತ್ತಿದೆ.

ಮೊದಲಿಗೆ ಮಾನ್ವಿತ ಹಾಗೂ ವೀಣಾ ಎಂಬ ಹೆಸರಿನ ನಕಲಿ ಖಾತೆಯಲ್ಲಿ ಫೇಸ್‌ಬುಕ್ ಹಾಗೂ ಇನ್ಸ್ಟಾಗ್ರಾಮ್​ಗಳಲ್ಲಿ ರಿಕ್ವೆಸ್ಟ್ ಬಂದಿದೆ ಬಳಿಕ ಫೋಟೋಗಳಿರುವ ಲಿಂಕ್​ಗಳನ್ನು ಶೇರ್ ಮಾಡಲಾಗಿದೆ. ಕೆಲವು ಕಾಲೇಜಿನ ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೈಬರ್ ಪೊಲೀಸರಿಂದ ತನಿಖೆ ಮುಂದುವರೆದಿದೆ.

Published On - 7:49 am, Wed, 29 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ