ಕರ್ತವ್ಯ ಲೋಪ: ಮೂವರು ಹಿರಿಯ ಅಧಿಕಾರಿಗಳಿಗೆ ನೋಟಿಸ್, ವೆಬ್ ಕ್ಯಾಮ್​ಗಳ ಅಳವಡಿಕೆಗೆ ನಿರ್ಧಾರ

ಸಾಧು ಶ್ರೀನಾಥ್​

|

Updated on:May 17, 2020 | 3:16 PM

ಬೆಂಗಳೂರು: ಕರ್ತವ್ಯ ಲೋಪವೆಸಗಿದ ಮೂವರು ಹಿರಿಯ ಅಧಿಕಾರಿಗಳ ವಿರುದ್ಧ ನೋಟಿಸ್ ಜಾರಿಯಾಗಿದೆ. ಕೆ.ಎಸ್.ಮಹೇಶ್, ಗೋವಿಂದಪ್ಪ ಸಿ, ರಾಜಣ್ಣ ಸೇರಿದಂತೆ ಮೂವರು ಅಧಿಕಾರಿಗಳು ಅತ್ತಿಬೆಲೆ ಚೆಕ್ ಪೋಸ್ಟ್​ನಲ್ಲಿ ಕರ್ತವ್ಯಕ್ಕೆ ಹಾಜರಾಗದೇ ನಿರ್ಲಕ್ಷ್ಯ ವಹಿಸಿದ್ರು. ಈ ಹಿನ್ನೆಲೆಯಲ್ಲಿ ಕಾರಣ ಕೇಳಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ನೋಟಿಸ್ ಜಾರಿಗೊಳಿಸಿದ್ದಾರೆ. ಇನ್ಮುಂದೆ ಚೆಕ್ ಪೋಸ್ಟ್ ಬಳಿ ಅಧಿಕಾರಿಗಳ ಕರ್ತವ್ಯವನ್ನ ವೀಕ್ಷಿಸಲು ವೆಬ್ ಕ್ಯಾಮ್​ಗಳನ್ನು ಅಳವಡಿಸಬೇಕು. ಜಿಲ್ಲಾಧಿಕಾರಿಗಳ ಕಚೇರಿಯಲ್ಲೇ ಅಧಿಕಾರಿಗಳ ಕರ್ತವ್ಯವನ್ನ ವೀಕ್ಷಿಸಲು ನಿರ್ಧರಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ತಿಳಿಸಿದ್ರು.

ಕರ್ತವ್ಯ ಲೋಪ: ಮೂವರು ಹಿರಿಯ ಅಧಿಕಾರಿಗಳಿಗೆ ನೋಟಿಸ್, ವೆಬ್ ಕ್ಯಾಮ್​ಗಳ ಅಳವಡಿಕೆಗೆ ನಿರ್ಧಾರ

ಬೆಂಗಳೂರು: ಕರ್ತವ್ಯ ಲೋಪವೆಸಗಿದ ಮೂವರು ಹಿರಿಯ ಅಧಿಕಾರಿಗಳ ವಿರುದ್ಧ ನೋಟಿಸ್ ಜಾರಿಯಾಗಿದೆ. ಕೆ.ಎಸ್.ಮಹೇಶ್, ಗೋವಿಂದಪ್ಪ ಸಿ, ರಾಜಣ್ಣ ಸೇರಿದಂತೆ ಮೂವರು ಅಧಿಕಾರಿಗಳು ಅತ್ತಿಬೆಲೆ ಚೆಕ್ ಪೋಸ್ಟ್​ನಲ್ಲಿ ಕರ್ತವ್ಯಕ್ಕೆ ಹಾಜರಾಗದೇ ನಿರ್ಲಕ್ಷ್ಯ ವಹಿಸಿದ್ರು. ಈ ಹಿನ್ನೆಲೆಯಲ್ಲಿ ಕಾರಣ ಕೇಳಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ನೋಟಿಸ್ ಜಾರಿಗೊಳಿಸಿದ್ದಾರೆ.

ಇನ್ಮುಂದೆ ಚೆಕ್ ಪೋಸ್ಟ್ ಬಳಿ ಅಧಿಕಾರಿಗಳ ಕರ್ತವ್ಯವನ್ನ ವೀಕ್ಷಿಸಲು ವೆಬ್ ಕ್ಯಾಮ್​ಗಳನ್ನು ಅಳವಡಿಸಬೇಕು. ಜಿಲ್ಲಾಧಿಕಾರಿಗಳ ಕಚೇರಿಯಲ್ಲೇ ಅಧಿಕಾರಿಗಳ ಕರ್ತವ್ಯವನ್ನ ವೀಕ್ಷಿಸಲು ನಿರ್ಧರಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ತಿಳಿಸಿದ್ರು.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada