7-3=2.. ಇದು ಪಿಕ್ನಿಕ್​ಗೆ ಹೋದವರ ದುರಂತ ಕಥೆ

ದಕ್ಷಿಣ ಕನ್ನಡ: ಈಜಲು ನದಿಗೆ ಇಳಿದ ಮೂವರು ಯುವಕರಲ್ಲಿ ಓರ್ವ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ಮಂಗಳೂರಿನ ಕಿನ್ನಿಗೋಳಿ ಸಮೀಪದ ಕರ್ನಿರೆಯಲ್ಲಿ ನಡೆದಿದೆ. ​ಬೆಂಗಳೂರು ನಿವಾಸಿ ಅನಿಲ್ (32) ಮೃತ ದುರ್ದೈವಿ. ಪಿಕ್ನಿಕ್​ಗೆ ಎಂದು ಬೆಂಗಳೂರಿನಿಂದ ಮಂಗಳೂರಿಗೆ ಬಂದಿದ್ದ 7 ಜನ ಸ್ನೇಹಿತರಲ್ಲಿ ಮೂವರು ಕರ್ನಿರೆ ಬಳಿ ಶಾಂಭವಿ ನದಿಗೆ ಈಜಲು ಹೋದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಹೊರಬರಲಾಗದೆ ಪರದಾಡಿದ 32 ವರ್ಷದ ಅನಿಲ್ ಮುಳುಗಿ ಸಾವನ್ನಪ್ಪಿದ್ದಾನೆ. ಉಳಿದ ಇಬ್ಬರನ್ನು ಸಾರ್ವಜನಿಕರು ರಕ್ಷಿಸಿದ್ದಾರೆ. ವಿಷಯ […]

7-3=2.. ಇದು ಪಿಕ್ನಿಕ್​ಗೆ ಹೋದವರ ದುರಂತ ಕಥೆ
ಸಾಧು ಶ್ರೀನಾಥ್​ Edited By:

Updated on: Sep 06, 2020 | 4:49 PM

ದಕ್ಷಿಣ ಕನ್ನಡ: ಈಜಲು ನದಿಗೆ ಇಳಿದ ಮೂವರು ಯುವಕರಲ್ಲಿ ಓರ್ವ ಯುವಕ ನೀರುಪಾಲಾಗಿರುವ ಘಟನೆ ಜಿಲ್ಲೆಯ ಮಂಗಳೂರಿನ ಕಿನ್ನಿಗೋಳಿ ಸಮೀಪದ ಕರ್ನಿರೆಯಲ್ಲಿ ನಡೆದಿದೆ.
​ಬೆಂಗಳೂರು ನಿವಾಸಿ ಅನಿಲ್ (32) ಮೃತ ದುರ್ದೈವಿ. ಪಿಕ್ನಿಕ್​ಗೆ ಎಂದು ಬೆಂಗಳೂರಿನಿಂದ ಮಂಗಳೂರಿಗೆ ಬಂದಿದ್ದ 7 ಜನ ಸ್ನೇಹಿತರಲ್ಲಿ ಮೂವರು ಕರ್ನಿರೆ ಬಳಿ ಶಾಂಭವಿ ನದಿಗೆ ಈಜಲು ಹೋದರು.

ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಹೊರಬರಲಾಗದೆ ಪರದಾಡಿದ 32 ವರ್ಷದ ಅನಿಲ್ ಮುಳುಗಿ ಸಾವನ್ನಪ್ಪಿದ್ದಾನೆ. ಉಳಿದ ಇಬ್ಬರನ್ನು ಸಾರ್ವಜನಿಕರು ರಕ್ಷಿಸಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಮುಲ್ಕಿ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us