AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manish Sisodia: ಭಗವದ್ಗೀತೆ ಅಧ್ಯಯನ, ಧ್ಯಾನ; ಹೀಗಿದೆ ಮನೀಶ್ ಸಿಸೋಡಿಯಾ ಜೈಲುವಾಸ

ಧ್ಯಾನದ ಕೊಠಡಿಯನ್ನು ಸಿಸೋಡಿಯಾಗೆ ಒದಗಿಸಲು ಸಾಧ್ಯವೇ ಎಂದು ಪರಿಶೀಲಿಸುವಂತೆಯೂ ಜೈಲು ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ.

Manish Sisodia: ಭಗವದ್ಗೀತೆ ಅಧ್ಯಯನ, ಧ್ಯಾನ; ಹೀಗಿದೆ ಮನೀಶ್ ಸಿಸೋಡಿಯಾ ಜೈಲುವಾಸ
ಮನೀಶ್ ಸಿಸೋಡಿಯಾ
ಗಣಪತಿ ಶರ್ಮಾ
|

Updated on: Mar 06, 2023 | 9:58 PM

Share

ನವದೆಹಲಿ: ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ (Excise Policy Case) ದೆಹಲಿ ಮಾಜಿ ಉಪ ಮುಖ್ಯಮಂತ್ರಿ, ಎಎಪಿ ನಾಯಕ ಮನೀಶ್ ಸಿಸೋಡಿಯಾ (Manish Sisodia) ಅವರಿಗೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಸೋಮವಾರ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಆದರೆ, ಈ ಸಂದರ್ಭದಲ್ಲಿ ಸಿಸೋಡಿಯಾ ಅವರು ನ್ಯಾಯಾಲಯದ ಬಳಿ ಮಾಡಿರುವ ವಿಶಿಷ್ಟ ವಿನಂತಿ ಇದೀಗ ಗಮನ ಸೆಳೆದಿದೆ. ಜೈಲಿನಲ್ಲಿ ಧ್ಯಾನದ ಕೊಠಡಿಯನ್ನು ನೀಡಬೇಕು ಎಂದೂ ಭಗವದ್ಗೀತೆ, ಡೈರಿ, ಪೆನ್ನು, ಕನ್ನಡಕ ಹಾಗೂ ಔಷಧ ಕೊಂಡೊಯ್ಯಲು ಅವಕಾಶ ನೀಡಬೇಕು ಎಂದೂ ಸಿಸೋಡಿಯಾ ಮನವಿ ಮಾಡಿದ್ದರು. ಅದನ್ನು ನ್ಯಾಯಾಲಯ ಪುರಸ್ಕರಿಸಿದೆ. ಸಿಸೋಡಿಯಾಗೆ ಜೈಲಿನಲ್ಲಿ ಭಗವದ್ಗೀತೆ, ಪೆನ್ನು, ಡೈರಿ ನೀಡುವಂತೆ ಸೂಚನೆ ನೀಡಿದೆ. ಜತೆಗೆ ಧ್ಯಾನದ ಕೊಠಡಿಯನ್ನು ಸಿಸೋಡಿಯಾಗೆ ಒದಗಿಸಲು ಸಾಧ್ಯವೇ ಎಂದು ಪರಿಶೀಲಿಸುವಂತೆಯೂ ಜೈಲು ಅಧಿಕಾರಿಗಳಿಗೆ ಸೂಚಿಸಿದೆ.

ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಇತ್ತೀಚೆಗೆ ಸಿಬಿಐ ಬಂಧಿಸಿತ್ತು. ನಂತರ ಅವರು ಸಿಬಿಐ ಕಸ್ಟಡಿಯಲ್ಲಿದ್ದರು. ಕಸ್ಟಡಿ ಅವಧಿ ಮುಗಿದ ಕಾರಣ ಅವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಇನ್ನೂ 14 ದಿನ ಅವರನ್ನು ಕಸ್ಟಡಿಗೆ ನೀಡಬೇಕು ಎಂದು ಸಿಬಿಐ ಪರ ವಕೀಲರು ವಾದ ಮಂಡಿಸಿದ್ದರು. ಇದಕ್ಕೆ ಸಮ್ಮತಿಸದ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಇದನ್ನೂ ಓದಿ: Manish Sisodia: ಮಾಜಿ ಡಿಸಿಎಂ ಮನೀಶ್​​ ಸಿಸೋಡಿಯಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

ಮನೀಶ್ ಸಿಸೋಡಿಯಾ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್​ ಶುಕ್ರವಾರ ತಿರಸ್ಕರಿಸಿತ್ತು. ನಂತರ ಅವರು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ದೆಹಲಿಯ ಮದ್ಯ ನೀತಿಯಲ್ಲಿ ಭ್ರಷ್ಟಾಚಾರದ ಆರೋಪದ ಮೇಲೆ ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರ ತನಿಖಾ ದಳ ಫೆಬ್ರುವರಿ 26ರಂದು ಬಂಧಿಸಿತ್ತು. ಇದಾಗಿ ಎರಡು ದಿನಗಳ ನಂತರ ಅವರು ದೆಹಲಿ ಉಪಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ನಂತರ ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆಗೆ ನಿರಾಕರಿಸಿದ್ದ ಸುಪ್ರೀಂ ಕೋರ್ಟ್, ಅರ್ಜಿಯನ್ನು ಕೆಳಹಂತದ ಕೋರ್ಟ್​ ವಿಚಾರಣೆ ನಡೆಸಲಿ ಎಂದು ಹೇಳಿತ್ತು. ನಂತರ ಸಿಡೋಡಿಯಾ ಪರ ವಕೀಲರು ಹೈಕೋರ್ಟ್​ಗೂ ಅರ್ಜಿ ಸಲ್ಲಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ