ಸಂಜೆಯಾಗುತ್ತಿದ್ದಂತೆ ಮನೆಗಳ ಮೇಲೆ ಬೀಳುತ್ತಿವೆ ಕಲ್ಲುಗಳು: ಆತಂಕದಲ್ಲಿ ಗ್ರಾಮಸ್ಥರು!

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಸಂಜೆಯಾಗುತ್ತಿದ್ದಂತೆ ಮನೆಗಳ ಮೇಲೆ ಕಲ್ಲುಗಳು ಬೀಳುತ್ತಿವೆ. ಇದ್ದಕ್ಕಿದ್ದಂತೆ ಮನೆಗಳ ಮೇಲೆ ಬೀಳುವ ಕಲ್ಲುಗಳಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಕಿಡಿಗೇಡಿಗಳ ಕೃತ್ಯವೋ ಇಲ್ಲಾ ಭಾನಾಮತಿಯ ಕಾಟವೋ ಎಂಬ ಆಂತಕದಲ್ಲಿ ಜನರಿದ್ದಾರೆ. ಸಂಜೆಯಾಗುತ್ತಿದ್ದಂತೆ ಮನೆಗಳ ಮೇಲೆ ಕಲ್ಲುಗಳು ಬೀಳುತ್ತಿದ್ದು, ಕಲ್ಲಿನ ಹೊಡೆತಕ್ಕೆ ಮನೆಗಳ ಹೆಂಚುಗಳು ತೂತು ಬಿದ್ದಿವೆ. ಗ್ರಾಮಸ್ಥರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೂ ಅಚ್ಚರಿ ಎದುರಾಗಿದೆ. ಪೊಲೀಸರ ಟೈಟ್ ಸೆಕ್ಯೂರಿಟಿ ನಡುವೆಯೂ ಕಲ್ಲುಗಳು ಬೀಳುತ್ತಿವೆ. ಪೊಲೀಸರು ಕಲ್ಲುಗಳನ್ನು ಸಂಗ್ರಹಿಸಿ ಕೊಂಡೊಯ್ದಿದ್ದಾರೆ. ಈ […]

ಸಂಜೆಯಾಗುತ್ತಿದ್ದಂತೆ ಮನೆಗಳ ಮೇಲೆ ಬೀಳುತ್ತಿವೆ ಕಲ್ಲುಗಳು: ಆತಂಕದಲ್ಲಿ ಗ್ರಾಮಸ್ಥರು!
ಸಾಧು ಶ್ರೀನಾಥ್​

Updated on: Jan 25, 2020 | 11:27 AM

ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಸಂಜೆಯಾಗುತ್ತಿದ್ದಂತೆ ಮನೆಗಳ ಮೇಲೆ ಕಲ್ಲುಗಳು ಬೀಳುತ್ತಿವೆ. ಇದ್ದಕ್ಕಿದ್ದಂತೆ ಮನೆಗಳ ಮೇಲೆ ಬೀಳುವ ಕಲ್ಲುಗಳಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಕಿಡಿಗೇಡಿಗಳ ಕೃತ್ಯವೋ ಇಲ್ಲಾ ಭಾನಾಮತಿಯ ಕಾಟವೋ ಎಂಬ ಆಂತಕದಲ್ಲಿ ಜನರಿದ್ದಾರೆ.

ಸಂಜೆಯಾಗುತ್ತಿದ್ದಂತೆ ಮನೆಗಳ ಮೇಲೆ ಕಲ್ಲುಗಳು ಬೀಳುತ್ತಿದ್ದು, ಕಲ್ಲಿನ ಹೊಡೆತಕ್ಕೆ ಮನೆಗಳ ಹೆಂಚುಗಳು ತೂತು ಬಿದ್ದಿವೆ. ಗ್ರಾಮಸ್ಥರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೂ ಅಚ್ಚರಿ ಎದುರಾಗಿದೆ. ಪೊಲೀಸರ ಟೈಟ್ ಸೆಕ್ಯೂರಿಟಿ ನಡುವೆಯೂ ಕಲ್ಲುಗಳು ಬೀಳುತ್ತಿವೆ. ಪೊಲೀಸರು ಕಲ್ಲುಗಳನ್ನು ಸಂಗ್ರಹಿಸಿ ಕೊಂಡೊಯ್ದಿದ್ದಾರೆ. ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Published On - 10:28 am, Sat, 25 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us