AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending | ಗೀತಾ ಭಾಟಿ ಚಪ್ಪಲಿಯನ್ನು ವಾಪಸ್ ಕೊಡ್ರಪ್ಪೋ ಎಂದ ಟ್ವೀಟಿಗರು

ರೈತರ ಪರ ಮತ್ತು ವಿರೋಧದ ವಿಚಾರವು ಟ್ವಿಟರ್​ನಲ್ಲೂ ಮುಂಚೂಣಿಯಲ್ಲಿದೆ. ಇಂಡಿಯಾ ಟ್ರೆಂಡ್ಸ್ ವಿಭಾಗದಲ್ಲಿ ಮೊದಲ ಮೂರು ಹ್ಯಾಷ್​ಟ್ಯಾಗ್​ಗಳು ರೈತರ ಪ್ರತಿಭಟನೆಗೆ ಸಂಬಂಧಿಸಿದ್ದಾಗಿದೆ.

Trending | ಗೀತಾ ಭಾಟಿ ಚಪ್ಪಲಿಯನ್ನು ವಾಪಸ್ ಕೊಡ್ರಪ್ಪೋ ಎಂದ ಟ್ವೀಟಿಗರು
ಗೀತಾ ಭಾಟಿ
TV9 Web
| Edited By: |

Updated on:Apr 07, 2022 | 5:34 PM

Share

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ಜೋರಾಗುತ್ತಿದ್ದು, ದೇಶಾದ್ಯಂತ ವಿವಿಧ ಪಕ್ಷ, ಸಂಘಟನೆಗಳು ರೈತರಿಗೆ ಬೆಂಬಲ ಸೂಚಿಸಿವೆ. ಅಷ್ಟೇ ಪ್ರಮಾಣದಲ್ಲಿ ಸರ್ಕಾರದ ಪರವಾದ ಅಭಿಪ್ರಾಯಗಳೂ ಕೇಳಿಬಂದಿವೆ.

ರೈತರ ಪರ ಮತ್ತು ವಿರೋಧದ ವಿಚಾರವು ಟ್ವಿಟರ್​ನಲ್ಲೂ ಮುಂಚೂಣಿಯಲ್ಲಿದೆ. ಇಂಡಿಯಾ ಟ್ರೆಂಡ್ಸ್ ವಿಭಾಗದಲ್ಲಿ ಮೊದಲ ಮೂರು ಹ್ಯಾಷ್​ಟ್ಯಾಗ್​ಗಳು ರೈತರ ಪ್ರತಿಭಟನೆಗೆ ಸಂಬಂಧಿಸಿದ್ದಾಗಿದೆ.

ಗೀತಾ ಭಾಟೀ ಚಪ್ಪಲಿಯನ್ನು ವಾಪಸ್ ಕೊಡಿ ಎಂದ ನೆಟ್ಟಿಗರು ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟದಲ್ಲಿ, ಭಾರತೀಯ ಏಕತಾ ಸಂಘದ ಮಹಿಳಾ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷೆ ಗೀತಾ ಭಾಟಿ ಭಾಗವಹಿಸಿದ್ದರು. ಪ್ರತಿಭಟನೆಯಲ್ಲಿ ಚಪ್ಪಲಿ ಕಳೆದುಕೊಂಡಿರುವ ಅವರು, ಚಪ್ಪಲಿ ಕಳೆದುಹೋದದ್ದಕ್ಕೆ ಸರ್ಕಾರ ಮತ್ತು ಪೊಲೀಸರೇ ಕಾರಣ ಎಂದು ಹೇಳಿಕೊಂಡಿದ್ದಾರೆ. ಅವರು ಹೀಗೆ ಹೇಳಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ನೆಟ್ಟಿಗರು ಗೀತಾ ಭಾಟಿ ಚಪ್ಪಲಿಯನ್ನು ವಾಪಸ್ ಕೊಡ್ರಪ್ಪೋ ಎಂದು ತಮಾಷೆ ಮಾಡಿದ್ದಾರೆ. ‘ಗೀತಾ ಭಾಟೀಕಾ ಸ್ಯಾಂಡಲ್ ವಾಪಸ್ ಕರೋ’ ಎಂಬ ಹ್ಯಾಷ್​ಟ್ಯಾಗ್ ಟ್ರೆಂಡಿಂಗ್​ನಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದು, ಇಂದು ಸಂಜೆಯ ವೇಳೆಗೆ ಒಟ್ಟು 22,800 ಟ್ವೀಟ್​ಗಳು ಆಗಿವೆ.

ನಾಳೆ ಭಾರತ್ ಬಂದ್ ಎಂದ ಟ್ವೀಟಿಗರು ನಾಳೆ ನಡೆಯಲಿರುವ ಭಾರತ್ ಬಂದ್ ಬೆಂಬಲಿಸಿ ಖಲ್ ಭಾರತ್ ಬಂದ್ ರಹೇಗಾ ಎಂಬ ಹ್ಯಾಷ್​ಟ್ಯಾಗ್ ಇಂದು ಮುಂಜಾನೆಯಿಂದ ಟ್ವಿಟರ್ ಟ್ರೆಂಡಿಂಗ್​ನಲ್ಲಿದೆ. ಈವರೆಗೆ ಒಟ್ಟು 1.75 ಲಕ್ಷ ಟ್ವೀಟ್ಸ್ ಆಗಿದ್ದು ಸದ್ಯ ಎರಡನೇ ಸ್ಥಾನದಲ್ಲಿದೆ.

ನರೇಂದ್ರ ಮೋದಿ ಪರ ರೈತರು ಭಾರತ್ ಬಂದ್​ಗೆ ವಿರೋಧ ವ್ಯಕ್ತಪಡಿಸಿರುವ ಪೋಸ್ಟ್​ಗಳೂ ಟ್ವಿಟರ್​ನಲ್ಲಿ ಹರಿದಾಡುತ್ತಿವೆ. ನರೇಂದ್ರ ಮೋದಿ ಪರವಾಗಿ, ನೂತನ ಕೃಷಿ ಮಸೂದೆಯನ್ನು ಬೆಂಬಲಿಸಿ ಹಲವರು ಟ್ವೀಟ್ ಮಾಡಿದ್ದಾರೆ. ‘ಕಿಸಾನ್ ಸ್ಟಾಂಡ್ಸ್ ವಿದ್ ಮೋದಿ’ ಎಂಬ ಹ್ಯಾಷ್​ಟ್ಯಾಗ್ ಟ್ವಿಟರ್ ಟ್ರೆಂಡಿಂಗ್​ನಲ್ಲಿ ಮೂರನೇ ಸ್ಥಾನದಲ್ಲಿದೆ.

ನಾನೂ ಕೃಷಿಕ, ನಾನೂ ರೈತ ಆದರೆ ನಾನು ಭಾರತ್ ಬಂದ್ ಬೆಂಬಲಿಸುವುದಿಲ್ಲ. ನಾನು ಮೋದಿ ಪರ ವಹಿಸುತ್ತೇನೆ ಎಂಬ ಪೋಸ್ಟ್​ಗಳು ಕಾಣುತ್ತಿವೆ. ಇಂದು ಸಂಜೆಯ ವೇಳೆಗೆ ಒಟ್ಟು 28,500 ಟ್ವೀಟ್​ಗಳು ಆಗಿವೆ.

Published On - 7:12 pm, Mon, 7 December 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್