AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending | ಗೀತಾ ಭಾಟಿ ಚಪ್ಪಲಿಯನ್ನು ವಾಪಸ್ ಕೊಡ್ರಪ್ಪೋ ಎಂದ ಟ್ವೀಟಿಗರು

ರೈತರ ಪರ ಮತ್ತು ವಿರೋಧದ ವಿಚಾರವು ಟ್ವಿಟರ್​ನಲ್ಲೂ ಮುಂಚೂಣಿಯಲ್ಲಿದೆ. ಇಂಡಿಯಾ ಟ್ರೆಂಡ್ಸ್ ವಿಭಾಗದಲ್ಲಿ ಮೊದಲ ಮೂರು ಹ್ಯಾಷ್​ಟ್ಯಾಗ್​ಗಳು ರೈತರ ಪ್ರತಿಭಟನೆಗೆ ಸಂಬಂಧಿಸಿದ್ದಾಗಿದೆ.

Trending | ಗೀತಾ ಭಾಟಿ ಚಪ್ಪಲಿಯನ್ನು ವಾಪಸ್ ಕೊಡ್ರಪ್ಪೋ ಎಂದ ಟ್ವೀಟಿಗರು
ಗೀತಾ ಭಾಟಿ
TV9 Web
| Edited By: |

Updated on:Apr 07, 2022 | 5:34 PM

Share

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ಜೋರಾಗುತ್ತಿದ್ದು, ದೇಶಾದ್ಯಂತ ವಿವಿಧ ಪಕ್ಷ, ಸಂಘಟನೆಗಳು ರೈತರಿಗೆ ಬೆಂಬಲ ಸೂಚಿಸಿವೆ. ಅಷ್ಟೇ ಪ್ರಮಾಣದಲ್ಲಿ ಸರ್ಕಾರದ ಪರವಾದ ಅಭಿಪ್ರಾಯಗಳೂ ಕೇಳಿಬಂದಿವೆ.

ರೈತರ ಪರ ಮತ್ತು ವಿರೋಧದ ವಿಚಾರವು ಟ್ವಿಟರ್​ನಲ್ಲೂ ಮುಂಚೂಣಿಯಲ್ಲಿದೆ. ಇಂಡಿಯಾ ಟ್ರೆಂಡ್ಸ್ ವಿಭಾಗದಲ್ಲಿ ಮೊದಲ ಮೂರು ಹ್ಯಾಷ್​ಟ್ಯಾಗ್​ಗಳು ರೈತರ ಪ್ರತಿಭಟನೆಗೆ ಸಂಬಂಧಿಸಿದ್ದಾಗಿದೆ.

ಗೀತಾ ಭಾಟೀ ಚಪ್ಪಲಿಯನ್ನು ವಾಪಸ್ ಕೊಡಿ ಎಂದ ನೆಟ್ಟಿಗರು ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟದಲ್ಲಿ, ಭಾರತೀಯ ಏಕತಾ ಸಂಘದ ಮಹಿಳಾ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷೆ ಗೀತಾ ಭಾಟಿ ಭಾಗವಹಿಸಿದ್ದರು. ಪ್ರತಿಭಟನೆಯಲ್ಲಿ ಚಪ್ಪಲಿ ಕಳೆದುಕೊಂಡಿರುವ ಅವರು, ಚಪ್ಪಲಿ ಕಳೆದುಹೋದದ್ದಕ್ಕೆ ಸರ್ಕಾರ ಮತ್ತು ಪೊಲೀಸರೇ ಕಾರಣ ಎಂದು ಹೇಳಿಕೊಂಡಿದ್ದಾರೆ. ಅವರು ಹೀಗೆ ಹೇಳಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ನೆಟ್ಟಿಗರು ಗೀತಾ ಭಾಟಿ ಚಪ್ಪಲಿಯನ್ನು ವಾಪಸ್ ಕೊಡ್ರಪ್ಪೋ ಎಂದು ತಮಾಷೆ ಮಾಡಿದ್ದಾರೆ. ‘ಗೀತಾ ಭಾಟೀಕಾ ಸ್ಯಾಂಡಲ್ ವಾಪಸ್ ಕರೋ’ ಎಂಬ ಹ್ಯಾಷ್​ಟ್ಯಾಗ್ ಟ್ರೆಂಡಿಂಗ್​ನಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದು, ಇಂದು ಸಂಜೆಯ ವೇಳೆಗೆ ಒಟ್ಟು 22,800 ಟ್ವೀಟ್​ಗಳು ಆಗಿವೆ.

ನಾಳೆ ಭಾರತ್ ಬಂದ್ ಎಂದ ಟ್ವೀಟಿಗರು ನಾಳೆ ನಡೆಯಲಿರುವ ಭಾರತ್ ಬಂದ್ ಬೆಂಬಲಿಸಿ ಖಲ್ ಭಾರತ್ ಬಂದ್ ರಹೇಗಾ ಎಂಬ ಹ್ಯಾಷ್​ಟ್ಯಾಗ್ ಇಂದು ಮುಂಜಾನೆಯಿಂದ ಟ್ವಿಟರ್ ಟ್ರೆಂಡಿಂಗ್​ನಲ್ಲಿದೆ. ಈವರೆಗೆ ಒಟ್ಟು 1.75 ಲಕ್ಷ ಟ್ವೀಟ್ಸ್ ಆಗಿದ್ದು ಸದ್ಯ ಎರಡನೇ ಸ್ಥಾನದಲ್ಲಿದೆ.

ನರೇಂದ್ರ ಮೋದಿ ಪರ ರೈತರು ಭಾರತ್ ಬಂದ್​ಗೆ ವಿರೋಧ ವ್ಯಕ್ತಪಡಿಸಿರುವ ಪೋಸ್ಟ್​ಗಳೂ ಟ್ವಿಟರ್​ನಲ್ಲಿ ಹರಿದಾಡುತ್ತಿವೆ. ನರೇಂದ್ರ ಮೋದಿ ಪರವಾಗಿ, ನೂತನ ಕೃಷಿ ಮಸೂದೆಯನ್ನು ಬೆಂಬಲಿಸಿ ಹಲವರು ಟ್ವೀಟ್ ಮಾಡಿದ್ದಾರೆ. ‘ಕಿಸಾನ್ ಸ್ಟಾಂಡ್ಸ್ ವಿದ್ ಮೋದಿ’ ಎಂಬ ಹ್ಯಾಷ್​ಟ್ಯಾಗ್ ಟ್ವಿಟರ್ ಟ್ರೆಂಡಿಂಗ್​ನಲ್ಲಿ ಮೂರನೇ ಸ್ಥಾನದಲ್ಲಿದೆ.

ನಾನೂ ಕೃಷಿಕ, ನಾನೂ ರೈತ ಆದರೆ ನಾನು ಭಾರತ್ ಬಂದ್ ಬೆಂಬಲಿಸುವುದಿಲ್ಲ. ನಾನು ಮೋದಿ ಪರ ವಹಿಸುತ್ತೇನೆ ಎಂಬ ಪೋಸ್ಟ್​ಗಳು ಕಾಣುತ್ತಿವೆ. ಇಂದು ಸಂಜೆಯ ವೇಳೆಗೆ ಒಟ್ಟು 28,500 ಟ್ವೀಟ್​ಗಳು ಆಗಿವೆ.

Published On - 7:12 pm, Mon, 7 December 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್